Featured

ಮಂಗಳೂರು : ಎನ್‌ಎಂಪಿಟಿಯಲ್ಲಿ ಸಮುದ್ರಕ್ಕೆ ಬಿದ್ದ ಕಂಟೈನರ್ ಲಾರಿ; ಓರ್ವ ಸಾವು, ಮತ್ತೋರ್ವ ನಾಪತ್ತೆ -Vishwanews24

ಮಂಗಳೂರು : ಎನ್‌ಎಂಪಿಟಿಯಲ್ಲಿ ಸಮುದ್ರಕ್ಕೆ ಬಿದ್ದ ಕಂಟೈನರ್ ಲಾರಿ; ಓರ್ವ ಸಾವು, ಮತ್ತೋರ್ವ ನಾಪತ್ತೆ -Vishwanews24

ಮಂಗಳೂರು : ನವಮಂಗಳೂರು ಬಂದರಿನ 14ನೇ ಬರ್ತ್‌ನಲ್ಲಿ 10 ಚಕ್ರದ ಕಂಟೈನರ್ ಲಾರಿಯೊಂದು ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ ಮತ್ತೋರ್ವ ಕಾಣೆಯಾದ ಘಟನೆ ಭಾನುವಾರ ರಾತ್ರಿ 10.30 ಕ್ಕೆ ನಡೆದಿದೆ.

ಮೃತರನ್ನು ಕಂಟೈನರ್ ಲಾರಿ ಚಾಲಕ ಉತ್ತರ ಕರ್ನಾಟಕ ಮೂಲದ ರಾಜೇಸಾಬ (26) ಎಂದು ಗುರುತಿಸಲಾಗಿದ್ದು, ಲಾರಿ ಕ್ಲೀನರ್ ಭೀಮಪ್ಪ(22) ನಾಪತ್ತೆಯಾಗಿದ್ದಾರೆ.

ಡೆಲ್ಟಾ ಕಂಪನಿಯ ಕೆಎ 22 ಸಿ 8257 ನೋಂದಣಿಯ ಟ್ರಕ್ , ಕಬ್ಬಿಣದ ಅದಿರನ್ನು ಹಡಗಿನಿಂದ ಲೋಡ್ ಮಾಡಲು ಬಂದಿದ್ದ ಈ ವೇಳೆ ಘಟನೆ ನಡೆದಿದೆ. ಇದನ್ನು ಕಂಡು ಅಲ್ಲಿಂದ ಹಾದು ಹೋಗುವ ಟಗ್ ಬೋಟ್ ನ ಪೈಲಟ್ ಘಟನೆ ಬಗ್ಗೆ ವಿಟಿಎಂಎಸ್ ಕ ಟ್ರೋಲ್ ರೂಂಗೆ ಮಾಹಿತಿ ರವಾನಿಸಿದ್ದಾರೆ.

ತಕ್ಷಣ ಸಿಐಎಸ್ಎಫ್ ಕ್ಯೂಆರ್ ಟಿ ಮತ್ತು ಸಿಸ್ಎಫ್ ಗಸ್ತು ದೋಣಿ ಅಲ್ಲಿಗೆ ತಲುಪಿ ಟಗ್ ಬೋಟ್ ಸಹಾಯದಿಂದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದಾರೆ . ಸುಮಾರು 11.30 ರ ವೇಳೆಗೆ ಸಮುದ್ರಕ್ಕೆ ಬಿದ್ದ ಓರ್ವರನ್ನು ಪತ್ತೆ ಹಚ್ಚಿ ಆಸ್ಪತ್ರೆಗೆ ರವಾನಿಸಿದರೂ ಅದಾಗಲೇ ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ .

ಕಾಣೆಯಾದ ಲಾರಿ ಕ್ಲೀನರ್ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದೆ. ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

3 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago