Featured

ಮಂಗಳೂರು: ಎರಡು ದಿನಗಳಿಂದ 40 ಗಂಟೆಗಳ ಕಾಲ ನಿರಂತರ ಗಾಯನ ; ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ದಾಖಲೆ – vishwanews24

460 ಹಾಡು, 136 ಗಾಯಕರು, 40 ಗಂಟೆಗಳ ಕಾಲ ಗಾಯನ..

ಮಂಗಳೂರಲ್ಲಿ ಕಿಶೋರ್ ಕುಮಾರ್ ಹಾಡುಗಳ ವಿಶ್ವದಾಖಲೆ

ಮಂಗಳೂರು:ಎರಡು ದಿನಗಳಿಂದ ನಿರಂತರ‌ 40 ಗಂಟೆಗಳ ಕಾಲ ಹಾಡುವ ಮೂಲಕ ತಂಡವೊಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದಿದೆ.

ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಹೋಲ್ಡರ್, ಜೀ ಕನ್ನಡದ ಸರಿಗಮ ಖ್ಯಾತಿಯ ಯಶವಂತ್ ಎಂ.ಜಿ. ಮಾರ್ಗದರ್ಶನದಲ್ಲಿ ಶೋಡಶಿ ಫೌಂಡೇಶನ್ ವತಿಯಿಂದ, ಭಾರತೀಯ ಸಿನೀ ಸಂಗೀತ ಲೋಕದ ಅಮರ ಗಾಯಕ ಕಿಶೋರ್ ಕುಮಾರ್ ಅವರಿಗೆ ಗೌರವವಾಗಿ ಮಂಗಳೂರು ಪುರಭವನದಲ್ಲಿ “ಗಾತಾ ರಹೇ ಮೇರಾ ದಿಲ್ ” ಎಂಬ ಹೆಸರಿನಲ್ಲಿ ಈ ಕಾರ್ಯಕ್ರಮ ನಡೆಯಿತು.

ನವೆಂಬರ್ 18ರಂದು ಬೆಳಿಗ್ಗೆ 2.00 ಗಂಟೆಗೆ – ಡಿ ವೈ ಎಸ್ ಪಿ ಮಹೇಶ್ ಕುಮಾರ್ ದೀಪ ಬೆಳಗುವ ಮೂಲಕ ಪ್ರಾರಂಭಗೊಂಡ ಈ ಹಾಡುಗಳ ಸರಣಿ, 19ರಂದು ಸಂಜೆ 6.10 ಗಂಟೆಗೆ ಸಮಾಪ್ತಿಗೊಂಡಿತು. ಮಹಾ ಸಂಗೀತ ಸಂಭ್ರಮದಲ್ಲಿ ನೂರಮೂವತ್ತಕ್ಕೂ ಹೆಚ್ಚು ಹಾಡುಗಾರರು ಪಾಲ್ಗೊಂಡಿದ್ದರು.ಈ ಎರಡು ದಿನಗಳ ಕಾರ್ಯಕ್ರಮದಲ್ಲಿ ಕಿಶೋರ್ ಕುಮಾರ್ ಅವರ ಪ್ರಮುಖ ಗೀತೆಗಳೊಂದಿಗೆ 40 ಗಂಟೆಗಳ ನಿರಂತರ ಗಾಯನ ಪ್ರದರ್ಶನ ನಡೆಯಿತು.

ಈ ಕಾರ್ಯಕ್ರಮವನ್ನು ಕರ್ನಾಟಕದ ಪ್ರಖ್ಯಾತ ಹಾಗೂ ಗೌರವಾನ್ವಿತ ಗಾಯಕರಿಂದ ನಡೆಸಲಾಗಿದ್ದು, ಸಂಗೀತಾಭಿಮಾನಿಗಳಿಗೆ ಸಾಂಸ್ಕೃತಿಕ ಹಬ್ಬದಂತೆಯೇ ಸಂಭ್ರಮ ನೀಡಿತು. ದಾಖಲೆ ಪೂರೈಸಿದ ಶೋಡಶಿ ಫೌಂಡೇಶನ್ ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನ ಮನೀಷ್ ಬಿಷ್ಣೋಯ್, ಶಾಸಕ ವೇದವ್ಯಾಸ ಕಾಮತ್ ಪ್ರಮಾಣ ಪತ್ರ ವಿತರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ‌ ವೇದವ್ಯಾಸ ಕಾಮತ್ ಈ ರೀತಿಯ ಪ್ರಯೋಗಗಳು ನಡೆಯುತ್ತಲೇ ಇರುತ್ತದೆ. ದೇವಸ್ಥಾನಗಳಲ್ಲಿ ನಿರಂತರ ಭಜನೆ ಕೂಡಾ ನಡೆಯುತ್ತದೆ. ಆದರೆ ಆಧ್ಯಾತ್ಮಿಕ ಕಾರಣಕ್ಕಾಗಿ ಅದನ್ನು ದಾಖಲೆಗೆ ಬಳಸುವುದಿಲ್ಲ. ಇಂತಹ ಸಾಧನೆಗಳು ಮತ್ತಷ್ಟು ನಡೆಯಬೇಕು. ಇಂತಹ ಕಾರ್ಯಕ್ರಮಗಳಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ಶಿವರಾಮ್ ಕೆ.ಭಂಡಾರಿ, ಅತ್ಯಂತ ಪರಿಶ್ರಮದಿಂದ ಈ ಸಾಧನೆ ಮಾಡಿದ್ದಾರೆ. ಎಲ್ಲರಿಗೂ ಅಭಿನಂದನೆಗಳು ಎಂದು ಹೇಳಿದರು. ತಮ್ಮ ಕಸುಬನ್ನು ಪರಿಶ್ರಮ ಮತ್ತು ಪ್ರೀತಿಯಿಂದ ಕೆಲಸ ಮಾಡಿದರೆ ಉನ್ನತ ಸ್ಥಿತಿಗೆ ಏರಬಹುದು ಎಂದರು.

ಮಣಿಕಾಂತ ಕದ್ರಿ ಮಾತನಾಡಿ, ಈ ರೀತಿಯ ಕಾರ್ಯಕ್ರಮ ಮಾಡಿರುವುದಕ್ಕೆ ಹೆಮ್ಮೆ ಇದೆ. ಇನ್ನಷ್ಟು ಕಾರ್ಯಕ್ರಮ ಗಳು ನಡೆಯಲಿದೆ, ಎಸ್ಪಿಬಿ, ರಾಜ್‌ಕುಮಾರ್ ಅವರ ಹಾಡುಗಳೂ ಇರಲಿ ಎಂದರು.

ಭರತ್ ಕಾಮತ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ, ಯಶ್ವಂತ್ ಎಂ.ಜಿ, ಮನೀಷ್ ವಿಷ್ಣೋಯ್, ಲಂಚುಲಾಲ್, ಮಣಿಕಾಂತ ಕದ್ರಿ, ರಮೇಶ್ ಚಂದ್ರ, ಶ್ರೀಕಾಂತ ಕಾಮತ್, ವೇಣುಗೋಪಾಲ್ ಪುತ್ತೂರು, ರಂಜನ್ ದಾಸ್ , ವಿಶ್ವಾಸ್ ಗುರುಪುರ, ಸತೀಶ್ ಇರಾ, ಡಾ ಶಿವರಾಮ್ ಭಂಡಾರಿ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಡಾ. ಮನೀಷ್ ವಿಷ್ಣೋಯ್, ಡಾ. ಶಿವರಾಮ್ ಕೆ. ಭಂಡಾರಿ,ರಮೇಶ್ ಚಂದ್ರ, ರಮೇಶ್. ಕೆ . ಪಾಟೀಲ್, ಅನಿಲ್ ಶೆಟ್ಟಿ ಸೂರಿಂಜೆ, ಮನೋಹರ್ ಶೆಟ್ಟಿ, ಗೋಪಾಲ ಕೃಷ್ಣ, ಭರತ್ ಕಾಮತ್, ಮಣಿಕಾಂತ ಕದ್ರಿ ಮತ್ತಿತರರು ಉಪಸ್ಥಿತರಿದ್ದರು

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago