Featured

ಮಂಗಳೂರು: ಎರಡು ದಿನಗಳಿಂದ 40 ಗಂಟೆಗಳ ಕಾಲ ನಿರಂತರ ಗಾಯನ ; ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ದಾಖಲೆ – vishwanews24

460 ಹಾಡು, 136 ಗಾಯಕರು, 40 ಗಂಟೆಗಳ ಕಾಲ ಗಾಯನ..

ಮಂಗಳೂರಲ್ಲಿ ಕಿಶೋರ್ ಕುಮಾರ್ ಹಾಡುಗಳ ವಿಶ್ವದಾಖಲೆ

ಮಂಗಳೂರು:ಎರಡು ದಿನಗಳಿಂದ ನಿರಂತರ‌ 40 ಗಂಟೆಗಳ ಕಾಲ ಹಾಡುವ ಮೂಲಕ ತಂಡವೊಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದಿದೆ.

ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಹೋಲ್ಡರ್, ಜೀ ಕನ್ನಡದ ಸರಿಗಮ ಖ್ಯಾತಿಯ ಯಶವಂತ್ ಎಂ.ಜಿ. ಮಾರ್ಗದರ್ಶನದಲ್ಲಿ ಶೋಡಶಿ ಫೌಂಡೇಶನ್ ವತಿಯಿಂದ, ಭಾರತೀಯ ಸಿನೀ ಸಂಗೀತ ಲೋಕದ ಅಮರ ಗಾಯಕ ಕಿಶೋರ್ ಕುಮಾರ್ ಅವರಿಗೆ ಗೌರವವಾಗಿ ಮಂಗಳೂರು ಪುರಭವನದಲ್ಲಿ “ಗಾತಾ ರಹೇ ಮೇರಾ ದಿಲ್ ” ಎಂಬ ಹೆಸರಿನಲ್ಲಿ ಈ ಕಾರ್ಯಕ್ರಮ ನಡೆಯಿತು.

ನವೆಂಬರ್ 18ರಂದು ಬೆಳಿಗ್ಗೆ 2.00 ಗಂಟೆಗೆ – ಡಿ ವೈ ಎಸ್ ಪಿ ಮಹೇಶ್ ಕುಮಾರ್ ದೀಪ ಬೆಳಗುವ ಮೂಲಕ ಪ್ರಾರಂಭಗೊಂಡ ಈ ಹಾಡುಗಳ ಸರಣಿ, 19ರಂದು ಸಂಜೆ 6.10 ಗಂಟೆಗೆ ಸಮಾಪ್ತಿಗೊಂಡಿತು. ಮಹಾ ಸಂಗೀತ ಸಂಭ್ರಮದಲ್ಲಿ ನೂರಮೂವತ್ತಕ್ಕೂ ಹೆಚ್ಚು ಹಾಡುಗಾರರು ಪಾಲ್ಗೊಂಡಿದ್ದರು.ಈ ಎರಡು ದಿನಗಳ ಕಾರ್ಯಕ್ರಮದಲ್ಲಿ ಕಿಶೋರ್ ಕುಮಾರ್ ಅವರ ಪ್ರಮುಖ ಗೀತೆಗಳೊಂದಿಗೆ 40 ಗಂಟೆಗಳ ನಿರಂತರ ಗಾಯನ ಪ್ರದರ್ಶನ ನಡೆಯಿತು.

ಈ ಕಾರ್ಯಕ್ರಮವನ್ನು ಕರ್ನಾಟಕದ ಪ್ರಖ್ಯಾತ ಹಾಗೂ ಗೌರವಾನ್ವಿತ ಗಾಯಕರಿಂದ ನಡೆಸಲಾಗಿದ್ದು, ಸಂಗೀತಾಭಿಮಾನಿಗಳಿಗೆ ಸಾಂಸ್ಕೃತಿಕ ಹಬ್ಬದಂತೆಯೇ ಸಂಭ್ರಮ ನೀಡಿತು. ದಾಖಲೆ ಪೂರೈಸಿದ ಶೋಡಶಿ ಫೌಂಡೇಶನ್ ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನ ಮನೀಷ್ ಬಿಷ್ಣೋಯ್, ಶಾಸಕ ವೇದವ್ಯಾಸ ಕಾಮತ್ ಪ್ರಮಾಣ ಪತ್ರ ವಿತರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ‌ ವೇದವ್ಯಾಸ ಕಾಮತ್ ಈ ರೀತಿಯ ಪ್ರಯೋಗಗಳು ನಡೆಯುತ್ತಲೇ ಇರುತ್ತದೆ. ದೇವಸ್ಥಾನಗಳಲ್ಲಿ ನಿರಂತರ ಭಜನೆ ಕೂಡಾ ನಡೆಯುತ್ತದೆ. ಆದರೆ ಆಧ್ಯಾತ್ಮಿಕ ಕಾರಣಕ್ಕಾಗಿ ಅದನ್ನು ದಾಖಲೆಗೆ ಬಳಸುವುದಿಲ್ಲ. ಇಂತಹ ಸಾಧನೆಗಳು ಮತ್ತಷ್ಟು ನಡೆಯಬೇಕು. ಇಂತಹ ಕಾರ್ಯಕ್ರಮಗಳಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ಶಿವರಾಮ್ ಕೆ.ಭಂಡಾರಿ, ಅತ್ಯಂತ ಪರಿಶ್ರಮದಿಂದ ಈ ಸಾಧನೆ ಮಾಡಿದ್ದಾರೆ. ಎಲ್ಲರಿಗೂ ಅಭಿನಂದನೆಗಳು ಎಂದು ಹೇಳಿದರು. ತಮ್ಮ ಕಸುಬನ್ನು ಪರಿಶ್ರಮ ಮತ್ತು ಪ್ರೀತಿಯಿಂದ ಕೆಲಸ ಮಾಡಿದರೆ ಉನ್ನತ ಸ್ಥಿತಿಗೆ ಏರಬಹುದು ಎಂದರು.

ಮಣಿಕಾಂತ ಕದ್ರಿ ಮಾತನಾಡಿ, ಈ ರೀತಿಯ ಕಾರ್ಯಕ್ರಮ ಮಾಡಿರುವುದಕ್ಕೆ ಹೆಮ್ಮೆ ಇದೆ. ಇನ್ನಷ್ಟು ಕಾರ್ಯಕ್ರಮ ಗಳು ನಡೆಯಲಿದೆ, ಎಸ್ಪಿಬಿ, ರಾಜ್‌ಕುಮಾರ್ ಅವರ ಹಾಡುಗಳೂ ಇರಲಿ ಎಂದರು.

ಭರತ್ ಕಾಮತ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ, ಯಶ್ವಂತ್ ಎಂ.ಜಿ, ಮನೀಷ್ ವಿಷ್ಣೋಯ್, ಲಂಚುಲಾಲ್, ಮಣಿಕಾಂತ ಕದ್ರಿ, ರಮೇಶ್ ಚಂದ್ರ, ಶ್ರೀಕಾಂತ ಕಾಮತ್, ವೇಣುಗೋಪಾಲ್ ಪುತ್ತೂರು, ರಂಜನ್ ದಾಸ್ , ವಿಶ್ವಾಸ್ ಗುರುಪುರ, ಸತೀಶ್ ಇರಾ, ಡಾ ಶಿವರಾಮ್ ಭಂಡಾರಿ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಡಾ. ಮನೀಷ್ ವಿಷ್ಣೋಯ್, ಡಾ. ಶಿವರಾಮ್ ಕೆ. ಭಂಡಾರಿ,ರಮೇಶ್ ಚಂದ್ರ, ರಮೇಶ್. ಕೆ . ಪಾಟೀಲ್, ಅನಿಲ್ ಶೆಟ್ಟಿ ಸೂರಿಂಜೆ, ಮನೋಹರ್ ಶೆಟ್ಟಿ, ಗೋಪಾಲ ಕೃಷ್ಣ, ಭರತ್ ಕಾಮತ್, ಮಣಿಕಾಂತ ಕದ್ರಿ ಮತ್ತಿತರರು ಉಪಸ್ಥಿತರಿದ್ದರು

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

6 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

7 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

7 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

7 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago