ಮಂಗಳೂರು : ಮಂಗಳೂರು ಬಜ್ಪೆಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಕರೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಾರ್ಕಳ ಮುದ್ರಾಡಿಯ ವಸಂತ ಎಂದು ಗುರುತಿಸಲಾಗಿದೆ.
ಇಂದು ಮಧ್ಯಾಹ್ನ ಸಂದರ್ಭ ಮಂಗಳೂರು ಏರ್ ಪೋರ್ಟ್ ಗೆ ಕರೆ ಮಾಡಿದ ವ್ಯಕ್ತಿ ಏರ್ಪೋರ್ಟ್ನೊಳಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾನೆ. ಕೂಡಲೇ ಸಿಐಎಸ್ ಎಫ್ ಸಿಬ್ಬಂದಿ ಸೇರಿ ಪೊಲೀಸರಿಂದ ಸಂಪೂರ್ಣ ಏರ್ ಪೋರ್ಟ್ ತಪಾಸಣೆ ಮಾಡಿದ ನಂತರ ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದು ಬಂದಿದೆ.
ಈ ಘಟನೆ ಕುರಿತಂತೆ ಎರ್ ಪೋರ್ಟ್ ಅಧಿಕಾರಿಗಳು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಅಧಿಕಾರಿಗಳು ಮಾಹಿತಿ ಕಲೆ ಹಾಕಿ ಕೆಲವೇ ಗಂಟೆಗಳಲ್ಲಿ ಅರೋಪಿಯನ್ನು ಬಂಧಿಸಿದ್ಧಾರೆ. ಬಂಧಿತನು ಕಾರ್ಕಳ ಮುದ್ರಾಡಿಯ ವಸಂತ ಎಂದು ಗುರುತಿಸಲಾಗಿದ್ದು ಮಂಗಳೂರು ಸಿಸಿಬಿ ತಂಡ ಮುದ್ರಾಡಿಯ ಮನೆಯಿಂದ ಆರೋಪಿ ವಸಂತನನ್ನು ವಶಕ್ಕೆ ಪಡೆದಿದ್ದಾರೆ ವಸಂತ ಹೋಟೆಲ್ ನಲ್ಲಿ ಕೆಲಸಕ್ಕಿದ್ದು ಮಾನಸಿಕ ಅಸ್ವಸ್ಥನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…
ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…
ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್ನ ಚಿರಾಗ್ ನಗರದ ಗೌಸಿಯಾ ಚಾಲ್ನಲ್ಲಿ ಬುಧವಾರ…
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…