Featured

ಮಂಗಳೂರು: ಎಲೆಕ್ಟ್ರಿಕಲ್‌ ಆಟೋ ಸಂಚಾರಕ್ಕೆ ಅನುಮತಿ; ರಿಕ್ಷಾ ಚಾಲಕರಿಂದ ಬೃಹತ್ ಮೆರವಣಿಗೆ, ಪ್ರತಿಭಟನೆ – vishwanews24

ಮಂಗಳೂರು: ಎಲೆಕ್ಟ್ರಿಕಲ್‌ ಆಟೋಗಳ ಸಂಚಾರಕ್ಕೆ ಅನುಮತಿ..

ಆದೇಶ ವಾಪಸ್ ಪಡೆಯಲು ಒತ್ತಾಯಿಸಿ ಸಾವಿರಾರು ಆಟೋ ರಿಕ್ಷಾ ಚಾಲಕರ ಮೆರವಣಿಗೆ ..

ಜಿಲ್ಲಾಧಿಕಾರಿ ಕಚೇರಿ ಚಲೋಗೆ ಕ್ಲಾಕ್ ಟವರ್ ಬಳಿ ಪೊಲೀಸರ ತಡೆ..

ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸಲು ಒತ್ತಾಯಿಸಿ ಪ್ರತಿಭಟನೆ..

ಮಂಗಳೂರು: ಎಲೆಕ್ಟ್ರಿಕಲ್‌ ಅಟೋ ರಿಕ್ಷಾಗಳಿಗೆ ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ ನೀಡಿರುವ ಆದೇಶವನ್ನು ವಾಪಸ್ ಪಡೆಯಲು ಒತ್ತಾಯಿಸಿ ಸಾವಿರಾರು ಸಂಖ್ಯೆಯಲ್ಲಿ ಆಟೋ ರಿಕ್ಷಾ ಚಾಲಕರು ಮೆರವಣಿಗೆ ಪ್ರತಿಭಟನಾ ಸಭೆ ನಡೆಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಆಟೋರಿಕ್ಷಾ ಚಾಲಕರ ಮಾಲಕರ ಸಂಘಗಳ ಒಕ್ಕೂಟ ಮತ್ತು ಸಮಾನ ಮನಸ್ಕ ಆಟೋರಿಕ್ಷಾ ಚಾಲಕ ಮಾಲಕರ ಸಂಘಟನೆಗಳ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ವೃತ್ತದಿಂದ ಕ್ಲಾಕ್ ಟವರವರೆಗೆ ಮೆರವಣಿಗೆ ನಡೆಸಿದ ಆಟೋ ರಿಕ್ಷಾ ಚಾಲಕರು, ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸಲು ಒತ್ತಾಯಿಸಿ ಪ್ರತಿಭಟಿಸುತ್ತಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಚಲೋಗೆ ನಿರ್ಧರಿಸಿ ಮೆರವಣಿಗೆ ಆರಂಭಿಸಿದ್ದ ಆಟೋ ರಿಕ್ಷಾ ಚಾಲಕರನ್ನು ಪೊಲೀಸರು ಕ್ಲಾಕ್ ಟವರ್ ಬಳಿ ಬ್ಯಾರಿಕೇಡ್ ಗಳನ್ನೂ ಅಳವಡಿಸಿ ತಡೆದರು.

ಈ ಸಂಧರ್ಭ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಮುಖಂಡ ಸುನಿಲ್ ಕುಮಾರ್ ಬಜಾಲ್ , ಜಿಲ್ಲಾಧಿಕಾರಿಯವರು ಏಕಪಕ್ಷೀಯವಾಗಿ ಎಲೆಕ್ಟ್ರಿಕ್ ಆಟೋ ರಿಕ್ಷಾ ಬಗ್ಗೆ ಆದೇಶ ಮಾಡಿರುವುದನ್ನು ಹಿಂಪಡೆಯುವ ನಿಟ್ಟಿನಲ್ಲಿ ಈ ಹೋರಾಟ ಎಚ್ಚರಿಕೆಯ ಕರೆಗಂಟೆ. ಆದೇಶ ವಾಪಸ್ ಪಡೆಯದಿದ್ದರೆ ಜಿಲ್ಲೆಯ ಸಾವಿರಾರು ಸಂಖ್ಯೆಯ ಬದುಕಿಗೆ ಕೊಳ್ಳಿ ಇಟ್ಟಂತೆ ಎಂದರು.

ಮಾತೆತ್ತಿದರೆ ಕೇಂದ್ರ ಸರಕಾರದ ತೀರ್ಮಾನ ಎನ್ನುತ್ತಾರೆ. ಆದರೆ ಪಕ್ಕದ ಉಡುಪಿ ಅಥವಾ ಬೇರೆ ಜಿಲ್ಲೆಗಳಲ್ಲಿ ಇಲ್ಲದ ಆದೇಶ ದಕ ಜಿಲ್ಲೆಯಲ್ಲಿ ಯಾಕೆ ಎಂದು ಪ್ರಶ್ನಿಸಿದ ಅವರು, ಎಲೆಕ್ಟ್ರಿಕ್ ಕಂಪನಿಗಳ ಜೊತೆ ಶಾಮೀಲಾಗಿ ಈ ತೀರ್ಮಾನವನ್ನು ಜಿಲ್ಲಾಡಳಿತ ಮಾಡಿದೆ ಎಂದು ಆರೋಪಿಸಿದರು.

ದ.ಕ.ಜಿಲ್ಲಾಡಳಿತದ ನಿರ್ಧಾರವನ್ನು ಕೂಡಲೇ ವಾಪಸ್ ಪಡೆದು ಜಿಲ್ಲೆಯಾದ್ಯಂತ ಅಟೋರಿಕ್ಷಾ ಚಾಲಕರು ಅನುಭವಿಸುತ್ತಿರುವ ಭವಣೆಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ ವೈಜ್ಞಾನಿಕ ನೆಲೆಯಲ್ಲಿ ವ್ಯವಸ್ಥೆ ಮಾಡಬೇಕೆಂದು ಎಂದು ಒಕ್ಕೂಟ ಒತ್ತಾಯಿಸಿದೆ.

ಒಕ್ಕೂಟದ ಅಧ್ಯಕ್ಷ ಅಶೋಕ್ ಶೆಟ್ಟಿ ಬೋಳಾರ, ಅಬೂಬಕರ್ ಸುರತ್ಕಲ್, ಮುಸ್ತಾಕ್ ಅಲಿ, ಸ್ಟ್ಯಾನಿ ನೋರೋನ, ಭರತ್ ಕುಮಾರ್, ಲೋಕೇಶ್ ಬಲ್ಲಾಳ್ ಬಾಗ್, ಅರುಣ್ ಕುಮಾರ್, ವಸಂತ್ ಮೇರ ನಗರ, ಅಪ್ಪು ಸ್ವಾಮಿ, ವಿಷ್ಣುಮೂರ್ತಿ ವಿಶ್ವನಾಥ್ ಶೆಟ್ಟಿ, ಶೇಖರ್ ದೇರಳಕಟ್ಟೆ , ಇಬ್ರಾಹಿಂ ಮದಕ, ಲೋಕೇಶ್ , ಕೇಶವ , ಸುರೇಶ್ ಬಜಾಲ್, ಗಂಗಾಧರ್ ಸುರತ್ಕಲ್ ಇನ್ನಿತರರು ಭಾಗವಹಿಸಿದ್ದಾರೆ

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

2 days ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

2 days ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

2 days ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

2 days ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

2 days ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

2 days ago