Featured

ಮಂಗಳೂರು: ಎಲೆಕ್ಟ್ರಿಕಲ್‌ ಆಟೋ ಸಂಚಾರಕ್ಕೆ ಅನುಮತಿ; ರಿಕ್ಷಾ ಚಾಲಕರಿಂದ ಬೃಹತ್ ಮೆರವಣಿಗೆ, ಪ್ರತಿಭಟನೆ – vishwanews24

ಮಂಗಳೂರು: ಎಲೆಕ್ಟ್ರಿಕಲ್‌ ಆಟೋಗಳ ಸಂಚಾರಕ್ಕೆ ಅನುಮತಿ..

ಆದೇಶ ವಾಪಸ್ ಪಡೆಯಲು ಒತ್ತಾಯಿಸಿ ಸಾವಿರಾರು ಆಟೋ ರಿಕ್ಷಾ ಚಾಲಕರ ಮೆರವಣಿಗೆ ..

ಜಿಲ್ಲಾಧಿಕಾರಿ ಕಚೇರಿ ಚಲೋಗೆ ಕ್ಲಾಕ್ ಟವರ್ ಬಳಿ ಪೊಲೀಸರ ತಡೆ..

ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸಲು ಒತ್ತಾಯಿಸಿ ಪ್ರತಿಭಟನೆ..

ಮಂಗಳೂರು: ಎಲೆಕ್ಟ್ರಿಕಲ್‌ ಅಟೋ ರಿಕ್ಷಾಗಳಿಗೆ ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ ನೀಡಿರುವ ಆದೇಶವನ್ನು ವಾಪಸ್ ಪಡೆಯಲು ಒತ್ತಾಯಿಸಿ ಸಾವಿರಾರು ಸಂಖ್ಯೆಯಲ್ಲಿ ಆಟೋ ರಿಕ್ಷಾ ಚಾಲಕರು ಮೆರವಣಿಗೆ ಪ್ರತಿಭಟನಾ ಸಭೆ ನಡೆಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಆಟೋರಿಕ್ಷಾ ಚಾಲಕರ ಮಾಲಕರ ಸಂಘಗಳ ಒಕ್ಕೂಟ ಮತ್ತು ಸಮಾನ ಮನಸ್ಕ ಆಟೋರಿಕ್ಷಾ ಚಾಲಕ ಮಾಲಕರ ಸಂಘಟನೆಗಳ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ವೃತ್ತದಿಂದ ಕ್ಲಾಕ್ ಟವರವರೆಗೆ ಮೆರವಣಿಗೆ ನಡೆಸಿದ ಆಟೋ ರಿಕ್ಷಾ ಚಾಲಕರು, ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸಲು ಒತ್ತಾಯಿಸಿ ಪ್ರತಿಭಟಿಸುತ್ತಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಚಲೋಗೆ ನಿರ್ಧರಿಸಿ ಮೆರವಣಿಗೆ ಆರಂಭಿಸಿದ್ದ ಆಟೋ ರಿಕ್ಷಾ ಚಾಲಕರನ್ನು ಪೊಲೀಸರು ಕ್ಲಾಕ್ ಟವರ್ ಬಳಿ ಬ್ಯಾರಿಕೇಡ್ ಗಳನ್ನೂ ಅಳವಡಿಸಿ ತಡೆದರು.

ಈ ಸಂಧರ್ಭ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಮುಖಂಡ ಸುನಿಲ್ ಕುಮಾರ್ ಬಜಾಲ್ , ಜಿಲ್ಲಾಧಿಕಾರಿಯವರು ಏಕಪಕ್ಷೀಯವಾಗಿ ಎಲೆಕ್ಟ್ರಿಕ್ ಆಟೋ ರಿಕ್ಷಾ ಬಗ್ಗೆ ಆದೇಶ ಮಾಡಿರುವುದನ್ನು ಹಿಂಪಡೆಯುವ ನಿಟ್ಟಿನಲ್ಲಿ ಈ ಹೋರಾಟ ಎಚ್ಚರಿಕೆಯ ಕರೆಗಂಟೆ. ಆದೇಶ ವಾಪಸ್ ಪಡೆಯದಿದ್ದರೆ ಜಿಲ್ಲೆಯ ಸಾವಿರಾರು ಸಂಖ್ಯೆಯ ಬದುಕಿಗೆ ಕೊಳ್ಳಿ ಇಟ್ಟಂತೆ ಎಂದರು.

ಮಾತೆತ್ತಿದರೆ ಕೇಂದ್ರ ಸರಕಾರದ ತೀರ್ಮಾನ ಎನ್ನುತ್ತಾರೆ. ಆದರೆ ಪಕ್ಕದ ಉಡುಪಿ ಅಥವಾ ಬೇರೆ ಜಿಲ್ಲೆಗಳಲ್ಲಿ ಇಲ್ಲದ ಆದೇಶ ದಕ ಜಿಲ್ಲೆಯಲ್ಲಿ ಯಾಕೆ ಎಂದು ಪ್ರಶ್ನಿಸಿದ ಅವರು, ಎಲೆಕ್ಟ್ರಿಕ್ ಕಂಪನಿಗಳ ಜೊತೆ ಶಾಮೀಲಾಗಿ ಈ ತೀರ್ಮಾನವನ್ನು ಜಿಲ್ಲಾಡಳಿತ ಮಾಡಿದೆ ಎಂದು ಆರೋಪಿಸಿದರು.

ದ.ಕ.ಜಿಲ್ಲಾಡಳಿತದ ನಿರ್ಧಾರವನ್ನು ಕೂಡಲೇ ವಾಪಸ್ ಪಡೆದು ಜಿಲ್ಲೆಯಾದ್ಯಂತ ಅಟೋರಿಕ್ಷಾ ಚಾಲಕರು ಅನುಭವಿಸುತ್ತಿರುವ ಭವಣೆಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ ವೈಜ್ಞಾನಿಕ ನೆಲೆಯಲ್ಲಿ ವ್ಯವಸ್ಥೆ ಮಾಡಬೇಕೆಂದು ಎಂದು ಒಕ್ಕೂಟ ಒತ್ತಾಯಿಸಿದೆ.

ಒಕ್ಕೂಟದ ಅಧ್ಯಕ್ಷ ಅಶೋಕ್ ಶೆಟ್ಟಿ ಬೋಳಾರ, ಅಬೂಬಕರ್ ಸುರತ್ಕಲ್, ಮುಸ್ತಾಕ್ ಅಲಿ, ಸ್ಟ್ಯಾನಿ ನೋರೋನ, ಭರತ್ ಕುಮಾರ್, ಲೋಕೇಶ್ ಬಲ್ಲಾಳ್ ಬಾಗ್, ಅರುಣ್ ಕುಮಾರ್, ವಸಂತ್ ಮೇರ ನಗರ, ಅಪ್ಪು ಸ್ವಾಮಿ, ವಿಷ್ಣುಮೂರ್ತಿ ವಿಶ್ವನಾಥ್ ಶೆಟ್ಟಿ, ಶೇಖರ್ ದೇರಳಕಟ್ಟೆ , ಇಬ್ರಾಹಿಂ ಮದಕ, ಲೋಕೇಶ್ , ಕೇಶವ , ಸುರೇಶ್ ಬಜಾಲ್, ಗಂಗಾಧರ್ ಸುರತ್ಕಲ್ ಇನ್ನಿತರರು ಭಾಗವಹಿಸಿದ್ದಾರೆ

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

14 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

15 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

15 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

15 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

19 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

20 hours ago