ಮಂಗಳೂರು: ಎಲೆಕ್ಟ್ರಿಕಲ್ ಅಟೋ ರಿಕ್ಷಾಗಳಿಗೆ ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ ನೀಡಿರುವ ಆದೇಶವನ್ನು ವಾಪಸ್ ಪಡೆಯಲು ಒತ್ತಾಯಿಸಿ ಸಾವಿರಾರು ಸಂಖ್ಯೆಯಲ್ಲಿ ಆಟೋ ರಿಕ್ಷಾ ಚಾಲಕರು ಮೆರವಣಿಗೆ ಪ್ರತಿಭಟನಾ ಸಭೆ ನಡೆಸುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಆಟೋರಿಕ್ಷಾ ಚಾಲಕರ ಮಾಲಕರ ಸಂಘಗಳ ಒಕ್ಕೂಟ ಮತ್ತು ಸಮಾನ ಮನಸ್ಕ ಆಟೋರಿಕ್ಷಾ ಚಾಲಕ ಮಾಲಕರ ಸಂಘಟನೆಗಳ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ವೃತ್ತದಿಂದ ಕ್ಲಾಕ್ ಟವರವರೆಗೆ ಮೆರವಣಿಗೆ ನಡೆಸಿದ ಆಟೋ ರಿಕ್ಷಾ ಚಾಲಕರು, ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸಲು ಒತ್ತಾಯಿಸಿ ಪ್ರತಿಭಟಿಸುತ್ತಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಚಲೋಗೆ ನಿರ್ಧರಿಸಿ ಮೆರವಣಿಗೆ ಆರಂಭಿಸಿದ್ದ ಆಟೋ ರಿಕ್ಷಾ ಚಾಲಕರನ್ನು ಪೊಲೀಸರು ಕ್ಲಾಕ್ ಟವರ್ ಬಳಿ ಬ್ಯಾರಿಕೇಡ್ ಗಳನ್ನೂ ಅಳವಡಿಸಿ ತಡೆದರು.
ಈ ಸಂಧರ್ಭ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಮುಖಂಡ ಸುನಿಲ್ ಕುಮಾರ್ ಬಜಾಲ್ , ಜಿಲ್ಲಾಧಿಕಾರಿಯವರು ಏಕಪಕ್ಷೀಯವಾಗಿ ಎಲೆಕ್ಟ್ರಿಕ್ ಆಟೋ ರಿಕ್ಷಾ ಬಗ್ಗೆ ಆದೇಶ ಮಾಡಿರುವುದನ್ನು ಹಿಂಪಡೆಯುವ ನಿಟ್ಟಿನಲ್ಲಿ ಈ ಹೋರಾಟ ಎಚ್ಚರಿಕೆಯ ಕರೆಗಂಟೆ. ಆದೇಶ ವಾಪಸ್ ಪಡೆಯದಿದ್ದರೆ ಜಿಲ್ಲೆಯ ಸಾವಿರಾರು ಸಂಖ್ಯೆಯ ಬದುಕಿಗೆ ಕೊಳ್ಳಿ ಇಟ್ಟಂತೆ ಎಂದರು.
ಮಾತೆತ್ತಿದರೆ ಕೇಂದ್ರ ಸರಕಾರದ ತೀರ್ಮಾನ ಎನ್ನುತ್ತಾರೆ. ಆದರೆ ಪಕ್ಕದ ಉಡುಪಿ ಅಥವಾ ಬೇರೆ ಜಿಲ್ಲೆಗಳಲ್ಲಿ ಇಲ್ಲದ ಆದೇಶ ದಕ ಜಿಲ್ಲೆಯಲ್ಲಿ ಯಾಕೆ ಎಂದು ಪ್ರಶ್ನಿಸಿದ ಅವರು, ಎಲೆಕ್ಟ್ರಿಕ್ ಕಂಪನಿಗಳ ಜೊತೆ ಶಾಮೀಲಾಗಿ ಈ ತೀರ್ಮಾನವನ್ನು ಜಿಲ್ಲಾಡಳಿತ ಮಾಡಿದೆ ಎಂದು ಆರೋಪಿಸಿದರು.
ದ.ಕ.ಜಿಲ್ಲಾಡಳಿತದ ನಿರ್ಧಾರವನ್ನು ಕೂಡಲೇ ವಾಪಸ್ ಪಡೆದು ಜಿಲ್ಲೆಯಾದ್ಯಂತ ಅಟೋರಿಕ್ಷಾ ಚಾಲಕರು ಅನುಭವಿಸುತ್ತಿರುವ ಭವಣೆಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ ವೈಜ್ಞಾನಿಕ ನೆಲೆಯಲ್ಲಿ ವ್ಯವಸ್ಥೆ ಮಾಡಬೇಕೆಂದು ಎಂದು ಒಕ್ಕೂಟ ಒತ್ತಾಯಿಸಿದೆ.
ಒಕ್ಕೂಟದ ಅಧ್ಯಕ್ಷ ಅಶೋಕ್ ಶೆಟ್ಟಿ ಬೋಳಾರ, ಅಬೂಬಕರ್ ಸುರತ್ಕಲ್, ಮುಸ್ತಾಕ್ ಅಲಿ, ಸ್ಟ್ಯಾನಿ ನೋರೋನ, ಭರತ್ ಕುಮಾರ್, ಲೋಕೇಶ್ ಬಲ್ಲಾಳ್ ಬಾಗ್, ಅರುಣ್ ಕುಮಾರ್, ವಸಂತ್ ಮೇರ ನಗರ, ಅಪ್ಪು ಸ್ವಾಮಿ, ವಿಷ್ಣುಮೂರ್ತಿ ವಿಶ್ವನಾಥ್ ಶೆಟ್ಟಿ, ಶೇಖರ್ ದೇರಳಕಟ್ಟೆ , ಇಬ್ರಾಹಿಂ ಮದಕ, ಲೋಕೇಶ್ , ಕೇಶವ , ಸುರೇಶ್ ಬಜಾಲ್, ಗಂಗಾಧರ್ ಸುರತ್ಕಲ್ ಇನ್ನಿತರರು ಭಾಗವಹಿಸಿದ್ದಾರೆ
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…