ಮಂಗಳೂರು : ನಗರದ ಹೆಚ್ಚಿನ ಮಂದಿ ವಿದೇಶಕ್ಕೆ ಹೋಗಿ ಕೆಲಸ ಮಾಡಬೇಕೆಂಬ ಹಂಬಲ ಹೊಂದಿದ್ದಾರೆ. ಆದರೆ ವಿದೇಶದಲ್ಲಿ ಕೆಲಸ ಕೊಡಿಸುವಾಗಿ ನಂಬಿಸಿ, ನಕಲಿ ಏಜೆಂಟ್ ಗಳಿಂದ ಮೋಸ ಹೋಗುತ್ತಿದ್ದಾರೆ. ಹಾಗಾಗಿ ಇಂಥ ಏಜೆನ್ಸಿಗಳ ಬಗ್ಗೆ ಜನರು ಜಾಗೃತಿಯಿಂದ ಇರಬೇಕು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ವಿದೇಶದಲ್ಲಿ ಕೊಡಿಸುವ ಎಲ್ಲಾ ಏಜೆನ್ಸಿಗಳು ಕಾನೂನು ಬದ್ದವಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ಅಡಿಯಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ಮಂಗಳೂರಿನಲ್ಲಿ 25 ರಿಂದ 30 ಏಜೆನ್ಸಿಗಳು ಈ ರೀತಿ ನೋಂದಾಯಿಸಿಕೊಂಡವರಿದ್ದಾರೆ.
ಈ ನೋಂದಾಯಿಸಿಕೊಂಡ ಏಜೆನ್ಸಿಗಳನ್ನು ಬಿಟ್ಟು ನಕಲಿ ಏಜೆಂಟ್ ಗಳ ಬಳಿ ಹೋಗಿ ಹಣ ಕೊಟ್ಟು ಮೋಸ ಹೋದವರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳನ್ನು ಬಂಧಿಸಿದರೂ ಹಣ ವಾಪಸ್ ರಿಕವರಿ ಮಾಡುವುದು ಕೊಂಚ ಕಷ್ಟವಾಗುತ್ತಿದೆ. ಹಾಗಾಗಿ ಎಲ್ಲರೂ ಕೂಡ ಜಾಗೃತರಾಗಿ, MEA ಅಡಿ ದಾಖಲಾತಿ ಮಾಡಿಕೊಂಡ ಏಜೆನ್ಸಿಗಳಿಂದ ಮಾತ್ರ ಹೋಗಬೇಕು ಎಂದು ಅವರು ತಿಳಿಸಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…