ಮಂಗಳೂರು: ಸಮಾಜದ ಪ್ರತಿಯೊಬ್ಬರು ಅಭಿವೃದ್ಧಿಯಾಗಬೇಕು. ಈ ನಿಟ್ಟಿನಲ್ಲಿ ಸರಕಾರ ಕೆಲಸ ಮಾಡುತ್ತಿಲಿದೆ. ಇದೀಗ ಎಲ್ಲ ಕಡೆ ಕಾಂಗ್ರೆಸ್ ಬದಲಾವಣೆಯ ಗಾಳಿ ಬೀಸತೊಡಗಿದೆ. ಅದು ಕರಾವಳಿಯಿಂದಲೇ ಆರಂಭವಾಗಿದೆ ಎನ್ನುವುದು ಸಂತೋಷದ ವಿಷಯ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಗರದ ಓಷಿಯನ್ ಪರ್ಲ್’ನಲ್ಲಿ ಹಿಂದುಳಿದ ವರ್ಗಗಳಾದ ಗಟ್ಟಿ, ಕುಲಾಲ್, ವಿಶ್ವಕರ್ಮ, ಮೊಗವೀರ, ದೇವಾಡಿಗ, ಕ್ರೈಸ್ತ, ಬ್ರಾಹ್ಮಣ, ಬಲ್ಯಾಯ, ಜಿಎಸ್ಬಿ., ಎಸ್ಸಿ., ಎಸ್ಟಿ., ಜೋಗಿ, ರಾಮ ಕ್ಷತ್ರೀಯಾ, ಗಾಣಿಗ, ಸವಿತಾ, ಮಡಿವಾಳ ಸಮುದಾಯಗಳ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು ನೀವು ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿದ್ದೀರಿ. ನ್ಯಾಯಯುತ ಬದುಕಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಹಿಂದುಳಿದ ವರ್ಗಗಳ ಸಮಸ್ಯೆಗಳನ್ನು ತಿಳಿದುಕೊಳ್ಳುವ ದಿಶೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಸಮಾಲೋಚನಾ ಸಭೆ ಕರೆಯಲಾಗಿದೆ. ಸಮಾಜದ ಅಭಿವೃದ್ಧಿ, ಬೇಡಿಕೆಗಳ ಬಗ್ಗೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆ. ದೈವ ದೇವರುಗಳ ನೆಲೆಬೀಡಾದ ಈ ನೆಲದಲ್ಲಿ ಸಂಪ್ರದಾಯಕ್ಕೆ ಬೆಲೆ ಸಿಗುವಂತಾಗಬೇಕು. ಸಾಮಾಜಿಕ ನ್ಯಾಯ ನೀಡುವಲ್ಲಿ ಬದ್ಧತೆ ಇರುವ ಪಕ್ಷ ಕಾಂಗ್ರೆಸ್. ಮುಂದೆ ಪ್ರತಿ ಮೂರು ತಿಂಗಳಿಗೊಮ್ಮೆ ಅಧಿಕಾರಿಗಳ ಜೊತೆ ಇದೇ ರೀತಿಯ ಸಮಾಲೋಚನಾ ಸಭೆ ನಡೆಸಲಾಗುವುದು. ಹಿಂದುಳಿದ ವರ್ಗಗಳ ಧ್ವನಿಯಾಗಿ ಕೆಲಸ ನಿರ್ವಹಿಸುತ್ತೇನೆ ಎಂದರು.
ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ರಮಾನಾಥ ರೈ, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ, ಕಾರ್ಪೋರೇಟರ್ ಎ.ಸಿ. ವಿನಯ್ ರಾಜ್, ಮಾಜಿ ಮೇಯರ್ ಭಾಸ್ಕರ್ ಮೊಯಿಲಿ, ಮಾಜಿ ಶಾಸಕ ಜೆ.ಆರ್. ಲೋಬೊ, ಕಾಂಗ್ರೆಸ್ ಧುರೀಣ ಕಣಚೂರು ಮೋನು ಮೊದಲಾದವರು ಉಪಸ್ಥಿತರಿದ್ದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…