Featured

ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆ: ರಾಜೇಂದ್ರ ಕುಮಾರ್ ಸೇರಿ 16 ಮಂದಿ ಅವಿರೋಧವಾಗಿ ಆಯ್ಕೆ – Vishwanews24

ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆ: ರಾಜೇಂದ್ರ ಕುಮಾರ್ ಸೇರಿ 16 ಮಂದಿ ಅವಿರೋಧವಾಗಿ ಆಯ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಇದರ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ಎಂ.ಎನ್.ರಾಜೇಂದ್ರ ಕುಮಾರ್ ನೇತೃತ್ವದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರ ಸ್ಥಾನಕ್ಕೆ ಮಾ.3ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಮಾ.4 ರಂದು ನಾಮಪತ್ರಗಳ ಪರಿಶೀಲನೆ ನಡೆದು ಎಲ್ಲರೂ ಅವಿರೋಧವಾಗಿ ಆಯ್ಕೆಯಾದರು. ಮಾ.11ರಂದು ಚುನಾವಣೆ ನಿಗದಿಯಾಗಿತ್ತು.

ಎಲ್ಲಾ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಪ್ರತಿನಿಧಿಗಳ ಕ್ಷೇತ್ರದಿಂದ 13, ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಗಳ ಕ್ಷೇತ್ರದಿಂದ 1, ಪಟ್ಟಣ ಸಹಕಾರ ಬ್ಯಾಂಕುಗಳ ಮತ್ತು ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ 1, ಹಾಗೂ ಇತರೆ ಎಲ್ಲಾ ಸಹಕಾರ ಸಂಘಗಳ ಕ್ಷೇತ್ರದಿಂದ ಒಬ್ಬರು ಅವಿರೋಧವಾಗಿ ಆಯ್ಕೆ ಆಗಿರುವರು.

ಚುನಾಯಿತ ಪ್ರತಿನಿಧಿಗಳು: ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದವರ ಪಟ್ಟಿ

ಮಂಗಳೂರು ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಎಂ.ಎನ್.ರಾಜೇಂದ್ರ ಕುಮಾರ್, ವಿನಯ ಕುಮಾರ್ ಸೂರಿಂಜೆ, ಭಾಸ್ಕರ ಎಸ್.ಕೋಟ್ಯಾನ್, ಕೆ.ಹರಿಶ್ಚಂದ್ರ

ಬಂಟ್ವಾಳ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಟಿ.ಜಿ.ರಾಜಾರಾಮ ಭಟ್

ಉಡುಪಿ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ದೇವಿ ಪ್ರಸಾದ್ ಶೆಟ್ಟಿ, ಬಿ.ಅಶೋಕ್ ಕುಮಾರ್ ಶೆಟ್ಟಿ

ಪುತ್ತೂರು ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಶಶಿಕುಮಾರ್ ರೈ ಬಿ.,

ಕುಂದಾಪುರ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಎಸ್.ರಾಜು ಪೂಜಾರಿ, ಎಂ.ಮಹೇಶ್ ಹೆಗ್ಡೆ

ಕಾರ್ಕಳ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಯಂ.ವಾದಿರಾಜ ಶೆಟ್ಟಿ,

ಬೆಳ್ತಂಗಡಿ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪಿ,

ಸುಳ್ಯ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಎಸ್.ಎನ್.ಮನ್ಮಥ, ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಗಳ ಕ್ಷೇತ್ರದಿಂದ ಮೋನಪ್ಪ ಶೆಟ್ಟಿ ಎಕ್ಕಾರು, ಪಟ್ಟಣ ಸಹಕಾರ ಬ್ಯಾಂಕುಗಳ ಮತ್ತು ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಕೆ.ಜೈರಾಜ್ ಬಿ.ರೈ. ಮತ್ತು ಇತರೆ ಎಲ್ಲಾ ಸಹಕಾರ ಸಂಘಗಳ ಕ್ಷೇತ್ರದಿಂದ ಎಸ್.ಬಿ.ಜಯರಾಮ ರೈ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಚುನಾವಣಾಧಿಕಾರಿಯಾಗಿ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರಾದ ಹರ್ಷವರ್ಧನ ಎಸ್.ಜೆ., ಮಂಗಳೂರು ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಧೀರ್ ಕುಮಾರ್ ಜೆ. ಸಹಾಯಕ ಚುನಾವಣಾಧಿಕಾರಿಯಾಗಿದ್ದರು

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago