Featured

ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ‘ಎಪಿವೈ ರಾಷ್ಟ್ರೀಯ ಪ್ರಶಸ್ತಿ’ ಮತ್ತು ಅಪೆಕ್ಸ್ ಬ್ಯಾಂಕ್‌ನ ಪ್ರಥಮ ಪ್ರಶಸ್ತಿ ಪ್ರದಾನ – vishwanews24

ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ‘ಎಪಿವೈ ರಾಷ್ಟ್ರೀಯ ಪ್ರಶಸ್ತಿ’ ಮತ್ತು ಅಪೆಕ್ಸ್ ಬ್ಯಾಂಕ್‌ನ ಪ್ರಥಮ ಪ್ರಶಸ್ತಿ ಪ್ರದಾನ

ಮಂಗಳೂರು: ಸಹಕಾರಿ ಬ್ಯಾಂಕಿಂಗ್ ರಂಗದಲ್ಲಿ 110 ವರ್ಷಗಳ ಸಾರ್ಥಕ ಸೇವೆಯನ್ನು ಪೂರೈಸಿ ಜನಸಾಮಾನ್ಯರ ಆರ್ಥಿಕ ಶಕ್ತಿಯಾಗಿ ಬೆಳೆದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಎಸ್‌ ಸಿಡಿಸಿಸಿ ಬ್ಯಾಂಕ್‌)ಗೆ ಅಟಲ್ ಪಿಂಚಣಿ ಯೋಜನೆಯ ರಾಷ್ಟ್ರೀಯ ಪ್ರಶಸ್ತಿ (ಎಪಿವೈ ಪ್ರಶಸ್ತಿ) ಹಾಗೂ ರಾಜ್ಯದ ಪ್ರತಿಷ್ಠಿತ ಅಪೆಕ್ಸ್ ಬ್ಯಾಂಕಿನ ಪ್ರಥಮ ಪ್ರಶಸ್ತಿಯನ್ನು ಶುಕ್ರವಾರ ಬೆಂಗಳೂರನಲ್ಲಿ ಪ್ರದಾನ ಮಾಡಲಾಯಿತು.

ಕರ್ನಾಟಕ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಅಟಲ್ ಪಿಂಚಣಿ ಯೋಜನೆಯ ರಾಷ್ಟ್ರೀಯ ಪ್ರಶಸ್ತಿ ಹಾಗೂ ಅಪೆಕ್ಸ್ ಬ್ಯಾಂಕಿನ ಪ್ರಥಮ ಪ್ರಶಸ್ತಿಯನ್ನು ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷರಾದ ಬೆಳ್ಳಿಪ್ರಕಾಶ್ ಅವರಿಂದ ಎಸ್‌ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ|ಎಂ.ಎನ್ ರಾಜೇಂದ್ರಕುಮಾರ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್ ಅವರು ಸ್ವೀಕರಿಸಿದರು.

ಎಪಿವೈ ರಾಷ್ಟ್ರೀಯ ಪ್ರಶಸ್ತಿ : ಭಾರತ ಸರ್ಕಾರದ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಕೋರಿಕೆಯಂತೆ ಎಸ್ ಸಿಡಿಸಿಸಿ ಬ್ಯಾಂಕ್ 2019ರ ಜನವರಿ -11ರಂದು ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ ನೋಂದಾಯಿಸಲ್ಪಟ್ಟಿದ್ದು , ಬ್ಯಾಂಕಿನ ಪ್ರತಿ ಶಾಖೆಗಳಲ್ಲಿ ಅಟಲ್ ಪಿಂಚಣಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಕ್ಕೆ ತಂದು ಚಂದಾದಾರರನ್ನು ನೊಂದಾಯಿಸುವ ಗುರಿಯನ್ನು ನೀಡಲಾಗಿತ್ತು. ಅದರಂತೆ ಈ ಯೋಜನೆಯಲ್ಲಿ ಬ್ಯಾಂಕ್ ಗಣನೀಯ ಪ್ರಗತಿ ಸಾಧಿಸಿದ್ದು ಮಾತ್ರವಲ್ಲ ಇದುವರೆಗೆ ಒಟ್ಟು10717 ಚಂದಾದಾರರ ನೋಂದಣಿಯೊಂದಿಗೆ ದಾಖಲೆ ನಿರ್ಮಿಸಿ ರಾಜ್ಯದ ಮೊದಲ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಎನ್ನುವ ಖ್ಯಾತಿಗೆ ಎಸ್ ಸಿಡಿಸಿಸಿ ಬ್ಯಾಂಕ್ ಪಾತ್ರವಾಗಿ ಇದೀಗ ರಾಷ್ಟ್ರೀಯ ಪ್ರಶಸ್ತಿಯಿಂದ ಪುರಸ್ಕೃತಗೊಂಡಿದೆ.

ಅಪೆಕ್ಸ್ ಪ್ರಶಸ್ತಿ : ವೈವಿಧ್ಯಮಯ ಯೋಜನೆಗಳನ್ನು ಕಾರ್ಯಗತಗೊಳಿಸಿ ಆಧುನಿಕ ಬ್ಯಾಂಕಿಂಗ್ ಸೇವೆಯಲ್ಲಿ ರಾಷ್ಟ್ರಕ್ಕೆ ಮಾದರಿಯಾಗಿರುವ ಎಸ್‌ ಸಿಡಿಸಿಸಿ ಬ್ಯಾಂಕ್ 2022-23ನೇ ಸಾಲಿನಲ್ಲಿ ಸರ್ವಾಂಗೀಣ ಪ್ರಗತಿಯೊಂದಿಗೆ ಗುರುತಿಸಿಕೊಂಡು ಲೆಕ್ಕ ಪರಿಶೋಧನೆಯಲ್ಲಿ ‘ಎ’ ವರ್ಗವನ್ನು ಪಡೆದು ಅಪೆಕ್ಸ್ ಬ್ಯಾಂಕಿನ ಪ್ರಥಮ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇದರೊಂದಿಗೆ ಎಸ್‌ ಸಿಡಿಸಿಸಿ ಬ್ಯಾಂಕ್ 22ನೇ ಬಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ.

113 ಶಾಖೆಗಳಲ್ಲಿ ವಿನೂತನ ಬ್ಯಾಂಕಿಂಗ್ ಸೇವೆ : ಎಸ್‌ ಸಿಡಿಸಿಸಿ ಬ್ಯಾಂಕಿನ 113 ಶಾಖೆಗಳು ಸಂಪೂರ್ಣ ಗಣಕೀಕರಣಗೊಂಡು ಕೋರ್ ಬ್ಯಾಂಕಿಂಗ್‌ನಂತಹ ಹೊಸತನದ ಬ್ಯಾಂಕಿಂಗ್ ಸೇವೆಯನ್ನು ತನ್ನ ಗ್ರಾಹಕರಿಗೆ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಶಾಖೆಗಳ ಮೂಲಕ ನೀಡುತ್ತಿದೆ. ಮಾತ್ರವಲ್ಲ ಉಡುಪಿ ಹಾಗೂ ಮಂಗಳೂರಿನಲ್ಲಿ ಮೊಬೈಲ್ ಬ್ಯಾಂಕಿಂಗ್ ನಂತಹ ವಿನೂತನ ಬ್ಯಾಂಕಿಂಗ್ ಸೇವೆಯನ್ನು ರಾಜ್ಯ ಮಟ್ಟದಲ್ಲೇ ಪರಿಚಯಿಸಿದ ಮೊದಲ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಎಂಬ ಮನ್ನಣೆಗೂ ಎಸ್‌ ಸಿಡಿಸಿಸಿ ಬ್ಯಾಂಕ್ ಪಾತ್ರವಾಗಿರುತ್ತದೆ.

ಶುಕ್ರವಾರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಪೆಕ್ಸ್ ಬ್ಯಾಂಕಿನ ನಿರ್ದೇಶಕರು ಹಾಗೂ ಸಚಿವರಾದ ಶಿವಾನಂದ ಎಸ್. ಪಾಟೀಲ್, ನಿರ್ದೇಶಕರುಗಳಾದ ಸಿದ್ದಪ್ಪ ಕಲ್ಲಪ್ಪ ಸವದಿ, ಶರಣೇಗೌಡ ಬಯ್ಯಾಪುರ್, ಟಿ. ಎಂ. ಚಂದ್ರಶೇಖರಯ್ಯ, ಆರ್. ಎಂ. ಮಂಜುನಾಥ್ ಗೌಡ, ಅಮರಾವತಿ ಸಿ ಅಶ್ವಥ್, ಶಿವಾನಂದ ಅಪ್ಪ ಸಾಹೇಬ್ ಮನಕರ್, ಕೊಡಂದೇರ ಪಿ. ಗಣಪತಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ. ಎನ್. ದೇವರಾಜ್, ಎಸ್ ಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ಬಾಲ್ಯೋಟ್ಟು ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago