ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ ಬ್ಯಾಂಕ್) ಇದರ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ಎಂ.ಎನ್.ರಾಜೇಂದ್ರ ಕುಮಾರ್ ನೇತೃತ್ವದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಿರ್ದೇಶಕರ ಸ್ಥಾನಕ್ಕೆ ಮಾ.3ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಮಾ.4 ರಂದು ನಾಮಪತ್ರಗಳ ಪರಿಶೀಲನೆ ನಡೆದು ಎಲ್ಲರೂ ಅವಿರೋಧವಾಗಿ ಆಯ್ಕೆಯಾದರು. ಮಾ.11ರಂದು ಚುನಾವಣೆ ನಿಗದಿಯಾಗಿತ್ತು.
ಎಲ್ಲಾ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಪ್ರತಿನಿಧಿಗಳ ಕ್ಷೇತ್ರದಿಂದ 13, ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಗಳ ಕ್ಷೇತ್ರದಿಂದ 1, ಪಟ್ಟಣ ಸಹಕಾರ ಬ್ಯಾಂಕುಗಳ ಮತ್ತು ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ 1, ಹಾಗೂ ಇತರೆ ಎಲ್ಲಾ ಸಹಕಾರ ಸಂಘಗಳ ಕ್ಷೇತ್ರದಿಂದ ಒಬ್ಬರು ಅವಿರೋಧವಾಗಿ ಆಯ್ಕೆ ಆಗಿರುವರು.
ಚುನಾಯಿತ ಪ್ರತಿನಿಧಿಗಳು: ಎಸ್ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದವರ ಪಟ್ಟಿ
ಮಂಗಳೂರು ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಎಂ.ಎನ್.ರಾಜೇಂದ್ರ ಕುಮಾರ್, ವಿನಯ ಕುಮಾರ್ ಸೂರಿಂಜೆ, ಭಾಸ್ಕರ ಎಸ್.ಕೋಟ್ಯಾನ್, ಕೆ.ಹರಿಶ್ಚಂದ್ರ
ಬಂಟ್ವಾಳ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಟಿ.ಜಿ.ರಾಜಾರಾಮ ಭಟ್
ಉಡುಪಿ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ದೇವಿ ಪ್ರಸಾದ್ ಶೆಟ್ಟಿ, ಬಿ.ಅಶೋಕ್ ಕುಮಾರ್ ಶೆಟ್ಟಿ
ಪುತ್ತೂರು ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಶಶಿಕುಮಾರ್ ರೈ ಬಿ.,
ಕುಂದಾಪುರ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಎಸ್.ರಾಜು ಪೂಜಾರಿ, ಎಂ.ಮಹೇಶ್ ಹೆಗ್ಡೆ
ಕಾರ್ಕಳ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಯಂ.ವಾದಿರಾಜ ಶೆಟ್ಟಿ,
ಬೆಳ್ತಂಗಡಿ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪಿ,
ಸುಳ್ಯ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಎಸ್.ಎನ್.ಮನ್ಮಥ, ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಗಳ ಕ್ಷೇತ್ರದಿಂದ ಮೋನಪ್ಪ ಶೆಟ್ಟಿ ಎಕ್ಕಾರು, ಪಟ್ಟಣ ಸಹಕಾರ ಬ್ಯಾಂಕುಗಳ ಮತ್ತು ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಕೆ.ಜೈರಾಜ್ ಬಿ.ರೈ. ಮತ್ತು ಇತರೆ ಎಲ್ಲಾ ಸಹಕಾರ ಸಂಘಗಳ ಕ್ಷೇತ್ರದಿಂದ ಎಸ್.ಬಿ.ಜಯರಾಮ ರೈ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಚುನಾವಣಾಧಿಕಾರಿಯಾಗಿ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರಾದ ಹರ್ಷವರ್ಧನ ಎಸ್.ಜೆ., ಮಂಗಳೂರು ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಧೀರ್ ಕುಮಾರ್ ಜೆ. ಸಹಾಯಕ ಚುನಾವಣಾಧಿಕಾರಿಯಾಗಿದ್ದರು
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…