Featured

ಮಂಗಳೂರು : ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ ಇನ್ನು ಮುಂದೆ ಯುಪಿಐ ಸೌಲಭ್ಯ  – vishwanews24

ಮಂಗಳೂರು : ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ ಇನ್ನು ಮುಂದೆ ಯುಪಿಐ ಸೌಲಭ್ಯ

ಮಂಗಳೂರು : ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ ಇನ್ನು ಮುಂದೆ ಯುಪಿಐ ಸೌಲಭ್ಯ ದೊರೆಯಲಿದ್ದು, ಇದರೊಂದಿಗೆ ಗೂಗಲ್ ಪೇ ಪೋನ್ ಪೇ ಯಲ್ಲೂ ಎಸ್ ಸಿಡಿಸಿಸಿ ಬ್ಯಾಂಕ್ ಅಕೌಂಟ್ ಲಿಂಕ್ ಮಾಡಿಕೊಂಡು ಯುಪಿಐ ಸೌಲಭ್ಯ ಪಡೆಯಬಹುದಾಗಿದೆ. ಎಸ್ ಸಿಡಿಸಿಸಿ ಬ್ಯಾಂಕ್ ನಿಂದ ಯುಪಿಐ, ಐಎಂಪಿಎಸ್‌ ಡಿಜಿಟಲ್ ಬ್ಯಾಂಕಿಂಗ್‌ ವಿಸ್ತರಿತ ಸೌಲಭ್ಯಕ್ಕೆ ಅಧಿಕೃತ ಚಾಲನೆ ದೊರೆಯಲಿದೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಎಸ್ಸಿಡಿಸಿಸಿ ಬ್ಯಾಂಕ್) ಅತ್ಯಾಧುನಿಕ ತಂತ್ರಜ್ಞಾನದ ಬ್ಯಾಂಕಿಂಗ್‌ ಸೇವೆಗಳನ್ನು ಗ್ರಾಹಕರಿಗೆ ನೀಡುತ್ತಿದೆ. ಈ ನಿಟ್ಟಿನಲ್ಲಿ ಬ್ಯಾಂಕ್ ತಮ್ಮ ಗ್ರಾಹಕರಿಗೆ ಪ್ರಸಕ್ತ ಅವಶ್ಯಕತೆಗೆ ಅನುಗುಣವಾಗಿ ಡಿಜಿಟಲ್ ಬ್ಯಾಂಕಿಂಗ್ ಅನ್ನು ಕೂಡಾ ಅಳವಡಿಸಿಕೊಂಡಿದೆ .

ಇದನ್ನೂ ಓದಿ : 

ಡಿಜಿಟಲ್ ಬ್ಯಾಂಕಿಂಗ್‌ ಸೇವೆಗಳನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ನಮ್ಮ ಬ್ಯಾಂಕ್ 2025ರ ಸೆ.16ರಿಂದ ಐಎಂಪಿಎಸ್‌ (IMPS – Immediate Payment Service) ಸೇವೆಯನ್ನು ಆರಂಭಿಸಿದೆ. ಬ್ಯಾಂಕ್ ಈಗಾಗಲೇ ಕೋರ್ ಬ್ಯಾಂಕಿಂಗ್ ಸೇವೆಯೊಂದಿಗೆ ಆರ್ ಟಿಜಿಎಸ್ / ನೆಫ್ಟ್, ಸಿಟಿಎಸ್, ಎಸ್‌ಎಂಎಸ್, ಎಟಿಎಂ, ಮೊಬೈಲ್ ಬ್ಯಾಂಕಿಂಗ್, ಪಿಒಎಸ್ (POS) ಸೌಲಭ್ಯ ಸೇರಿದಂತೆ ಹಲವಾರು ಡಿಜಿಟಲ್ ಸೇವೆಗಳನ್ನು ಯಶಸ್ವಿಯಾಗಿ ನೀಡುತ್ತಿದೆ. ಬ್ಯಾಂಕಿಂಗ್ ಕ್ಷೇತ್ರ ಇತ್ತೀಚಿನ ವರ್ಷಗಳಲ್ಲಿ ಪ್ರಮುಖ ಪರಿವರ್ತನೆಗೆ ಒಳಗಾಗಿದೆ, ಡಿಜಿಟಲ್ ಸೇವೆಗಳು ಸಾಂಪ್ರದಾಯಿಕ ಮಾದರಿಯನ್ನು ಬದಲಾಯಿಸಿವೆ. ಇಂದು, ಹೆಚ್ಚಿನ ಗ್ರಾಹಕರು ಇಂಟರ್ನೆಟ್ ಬ್ಯಾಂಕಿಂಗ್, ಮೊಬೈಲ್ ಅಪ್ಲಿಕೇಶನ್ಗಳು ಮತ್ತು ತ್ವರಿತ ಪಾವತಿ ವ್ಯವಸ್ಥೆಗಳ ಮೂಲಕ ತಮ್ಮ ಖಾತೆಗಳಿಗೆ ಸುಗಮ ಪ್ರವೇಶವನ್ನು ನಿರೀಕ್ಷಿಸುತ್ತಾರೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತಮ್ಮ ಗ್ರಾಹಕರಿಗೆ ಪ್ರಸ್ತುತ ಅವಶ್ಯಕತೆಗೆ ಅನುಗುಣವಾಗಿ ಡಿಜಿಟಲ್ ಬ್ಯಾಂಕಿಂಗ್ ಅನ್ನು ಕೂಡಾ ಅಳವಡಿಸಿ ಕೊಂಡಿದೆ. ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ  16 ಸೆಪ್ಟೆಂಬರ್ 2025 ರಿಂದ ಐಎಂಪಿಎಸ್ (IMPS – Immediate Payment Service) ಸೇವೆಯನ್ನು ಆರಂಭಿಸಿದೆ. ಈ ಸೇವೆಯ ಮೂಲಕ ಬ್ಯಾಂಕಿನ ಮೊಬೈಲ್ ಅಪ್ಲಿಕೇಶನ್ ಬಳಸಿ ಗ್ರಾಹಕರು ಕ್ಷಣಾರ್ಧದಲ್ಲಿ ಹಣ ವರ್ಗಾವಣೆ ಮಾಡುವ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಐಎಂಪಿಎಸ್ ಎಂಬುದು ನ್ಯಾಶನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್‌ ಇಂಡಿಯಾ (NPCI) ಅಭಿವೃದ್ಧಿ ಪಡಿಸಿದ ತ್ವರಿತ ಹಣ ವರ್ಗಾವಣೆ ವ್ಯವಸ್ಥೆಯಾಗಿದ್ದು, ಇದು 24×7, ವಾರಾಂತ್ಯ ಮತ್ತು ಸಾರ್ವಜನಿಕ ರಜೆದಿನಗಳಲ್ಲಿಯೂ ಕಾರ್ಯನಿರ್ವಹಿಸುತ್ತದೆ. ಪರ್ಸ್ ನ್ ಟು ಅಕೌಂಟ್ (person to Account) ಮೂಲಕ ಖಾತೆ ಸಂಖ್ಯೆ ಮತ್ತು( IFSC )ಐಎಫ್ ಎಸ್ ಸಿ ಬಳಸಿ ಯಾವುದೇ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಬಹುದು .

ಇದನ್ನೂ ಓದಿ :

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

12 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

13 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

13 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

13 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago