ಮಂಗಳೂರು: ಚುನಾವಣಾ ರಣತಂತ್ರ ರೂಪಿಸುತ್ತಿರುವ ಬಿಜೆಪಿ ಈ ಬಾರಿ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುವ ತಯಾರಿಯಲ್ಲಿದೆ. ಇದೇ ಉತ್ಸಾಹದಲ್ಲಿ ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ.
ಏಪ್ರಿಲ್ 14ರಂದು ಮಂಗಳೂರಿನಲ್ಲಿ ಕುಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವುದಕ್ಕೆ ಸಿದ್ಧತೆ ನಡೆಸಲಾಗಿತ್ತು. ಇದಕ್ಕಾಗಿ ಇಂದು ಬೆಳಗ್ಗೆ ಮೈದಾನದಲ್ಲಿ ಚಪ್ಪರ ಮುಹೂರ್ತವನ್ನೂ ನಡೆಸಲಾಗಿತ್ತು. ಜರ್ಮನ್ ನಿರ್ಮಿತ ಬೃಹತ್ ಪೆಂಡಾಲ್ ಹಾಕಲು ತಯಾರಿ ನಡೆದಿತ್ತು. ಆದರೆ ಕೊನೆ ಕ್ಷಣದಲ್ಲಿ ನಡೆದ ಬದಲಾವಣೆಯಿಂದ ಬೃಹತ್ ಸಮಾವೇಶವನ್ನು ರದ್ದು ಪಡಿಸಲಾಗಿದ್ದು, ಇದರ ಬದಲು ಮಂಗಳೂರು ನಗರದಲ್ಲಿ ಕೇವಲ ರೋಡ್ ಶೋ ನಡೆಸುವುದಕ್ಕೆ ಸಿದ್ಧತೆ ನಡೆಸಲಾಗಿದೆ.
ಭದ್ರತೆಯ ಕಾರಣಕ್ಕೆ ಪ್ರಧಾನಿ ಮೋದಿ ಆಯಕಟ್ಟಿನ ರಸ್ತೆಗಳಲ್ಲಿ ಸಂಚರಿಸಲು ಎಸ್ ಪಿಜಿ ತಂಡ ಅವಕಾಶ ನೀಡುವುದಿಲ್ಲ, ಇದಲ್ಲದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ರೋಡ್ ಶೋ ನಡೆಸುವುದಕ್ಕೂ ಅವಕಾಶವಿಲ್ಲ. ರೋಡ್ ಶೋ ನಡೆಸುವುದಕ್ಕೆ ಎಸ್ ಪಿಜಿ ಭದ್ರತೆ ಪರಿಶೀಲಿಸಿದ ನಂತರವೇ ಯಾವ ರಸ್ತೆಯಲ್ಲಿ ರೋಡ್ ಶೋ ನಡೆಸುವುದೆಂದು ನಿರ್ಧಾರ ಮಾಡಬೇಕಾಗುತ್ತದೆ. ಏರ್ಪೋರ್ಟ್ ರಸ್ತೆಯಲ್ಲೇ ಮಂಗಳೂರು ನಗರದ ವರೆಗೆ ರೋಡ್ ಶೋ ನಡೆಸುತ್ತಾರೆಯೇ ಅಥವಾ ಮಂಗಳೂರು ನಗರದ ಒಳಭಾಗದ ನೆಹರು ಮೈದಾನದ ಆಸುಪಾಸಿನಲ್ಲಿ ರೋಡ್ ಶೋ ನಡೆಸುತ್ತಾರೆಯೇ ಮತ್ತು ಎಷ್ಟು ಹೊತ್ತಿಗೆ ಮಾಡಲಿದ್ದಾರೆ ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…