ಮಂಗಳೂರು: ಚುನಾವಣಾ ರಣತಂತ್ರ ರೂಪಿಸುತ್ತಿರುವ ಬಿಜೆಪಿ ಈ ಬಾರಿ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುವ ತಯಾರಿಯಲ್ಲಿದೆ. ಇದೇ ಉತ್ಸಾಹದಲ್ಲಿ ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ.
ಏಪ್ರಿಲ್ 14ರಂದು ಮಂಗಳೂರಿನಲ್ಲಿ ಕುಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವುದಕ್ಕೆ ಸಿದ್ಧತೆ ನಡೆಸಲಾಗಿತ್ತು. ಇದಕ್ಕಾಗಿ ಇಂದು ಬೆಳಗ್ಗೆ ಮೈದಾನದಲ್ಲಿ ಚಪ್ಪರ ಮುಹೂರ್ತವನ್ನೂ ನಡೆಸಲಾಗಿತ್ತು. ಜರ್ಮನ್ ನಿರ್ಮಿತ ಬೃಹತ್ ಪೆಂಡಾಲ್ ಹಾಕಲು ತಯಾರಿ ನಡೆದಿತ್ತು. ಆದರೆ ಕೊನೆ ಕ್ಷಣದಲ್ಲಿ ನಡೆದ ಬದಲಾವಣೆಯಿಂದ ಬೃಹತ್ ಸಮಾವೇಶವನ್ನು ರದ್ದು ಪಡಿಸಲಾಗಿದ್ದು, ಇದರ ಬದಲು ಮಂಗಳೂರು ನಗರದಲ್ಲಿ ಕೇವಲ ರೋಡ್ ಶೋ ನಡೆಸುವುದಕ್ಕೆ ಸಿದ್ಧತೆ ನಡೆಸಲಾಗಿದೆ.
ಭದ್ರತೆಯ ಕಾರಣಕ್ಕೆ ಪ್ರಧಾನಿ ಮೋದಿ ಆಯಕಟ್ಟಿನ ರಸ್ತೆಗಳಲ್ಲಿ ಸಂಚರಿಸಲು ಎಸ್ ಪಿಜಿ ತಂಡ ಅವಕಾಶ ನೀಡುವುದಿಲ್ಲ, ಇದಲ್ಲದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ರೋಡ್ ಶೋ ನಡೆಸುವುದಕ್ಕೂ ಅವಕಾಶವಿಲ್ಲ. ರೋಡ್ ಶೋ ನಡೆಸುವುದಕ್ಕೆ ಎಸ್ ಪಿಜಿ ಭದ್ರತೆ ಪರಿಶೀಲಿಸಿದ ನಂತರವೇ ಯಾವ ರಸ್ತೆಯಲ್ಲಿ ರೋಡ್ ಶೋ ನಡೆಸುವುದೆಂದು ನಿರ್ಧಾರ ಮಾಡಬೇಕಾಗುತ್ತದೆ. ಏರ್ಪೋರ್ಟ್ ರಸ್ತೆಯಲ್ಲೇ ಮಂಗಳೂರು ನಗರದ ವರೆಗೆ ರೋಡ್ ಶೋ ನಡೆಸುತ್ತಾರೆಯೇ ಅಥವಾ ಮಂಗಳೂರು ನಗರದ ಒಳಭಾಗದ ನೆಹರು ಮೈದಾನದ ಆಸುಪಾಸಿನಲ್ಲಿ ರೋಡ್ ಶೋ ನಡೆಸುತ್ತಾರೆಯೇ ಮತ್ತು ಎಷ್ಟು ಹೊತ್ತಿಗೆ ಮಾಡಲಿದ್ದಾರೆ ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…