Featured

ಮಂಗಳೂರು ಏರ್‌ಪೋರ್ಟ್‌ಗೆ ಕೋಟಿ ಚೆನ್ನಯ ಹೆಸರು ಮರುನಾಮಕರಣ ಮಾಡುವಂತೆ ಒತ್ತಾಯಿಸಿ ಡಿ. 7 ರಂದು ಬೈಕ್‌ ರ್‍ಯಾಲಿ :ಬಿಲ್ಲವ ಬ್ರಿಗೇಡ್ -Vishwanews24

ಮಂಗಳೂರು ಏರ್‌ಪೋರ್ಟ್‌ಗೆ ಕೋಟಿ ಚೆನ್ನಯ ಹೆಸರು ಮರುನಾಮಕರಣ ಮಾಡುವಂತೆ ಒತ್ತಾಯಿಸಿ ಡಿ. 7 ರಂದು ಬೈಕ್‌ ರ್‍ಯಾಲಿ :ಬಿಲ್ಲವ ಬ್ರಿಗೇಡ್ -Vishwanews24

ಮಂಗಳೂರು : ”ತುಳುನಾಡಿನ ಕೋಟಿ ಚೆನ್ನಯರ ಹೆಸರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರುನಾಮಕರಣ ಮಾಡಬೇಕು ಎಂದು ಒತ್ತಾಯಿಸಿ ಬಿಲ್ಲವ ಬ್ರಿಗೇಡ್ ಮಂಗಳೂರು ಡಿಸೆಂಬರ್ 7 ರಂದು ಕುದ್ರೋಳಿ ದೇವಸ್ಥಾನದಿಂದ ಬಜ್ಪೆ ವಿಮಾನ ನಿಲ್ದಾಣದವರೆಗೆ ಬೈಕ್ ರ್‍ಯಾಲಿ ನಡೆಸಲಿದೆ” ಎಂದು ಬಿಲ್ಲವ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ಅವಿನಾಶ್ ಸುವರ್ಣ ಮಾಹಿತಿ ನೀಡಿದರು.

ಡಿಸೆಂಬರ್ 1 ರ ಮಂಗಳವಾರ ಇಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಕೋಟಿ ಚೆನ್ನಯ ಸಂಚಲನ ಸಮಿತಿಯ ಮುಖ್ಯ ಸಂಚಾಲಕ ಸತ್ಯಜೀತ್‌ ಸುರತ್ಕಲ್, ”2019 ರ ಅವಧಿಯಲ್ಲಿ ವಿಮಾನ ನಿಲ್ದಾಣವನ್ನು ಕೋಟಿ ಚೆನ್ನಯ ವಿಮಾನ ನಿಲ್ದಾಣವೆಂದು ಮರುನಾಮಕರಣ ಮಾಡುವ ಪ್ರಸ್ತಾಪವನ್ನು ಜಿಲ್ಲಾ ಪಂಚಾಯತ್ ಸಭೆಯಲ್ಲಿ ಅಂಗೀಕರಿಸಲಾಯಿತು. ನಂತರ ಇದನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಲಾಯಿತು. ವಿಮಾನ ನಿಲ್ದಾಣಕ್ಕೆ ಹೆಸರು ಬದಲು ಮಾಡಬೇಕಾದರೆ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯತ್ ಮೂಲಕ ರಾಜ್ಯ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಕೆಯಾಗಬೇಕು. ಬಳಿಕ ರಾಜ್ಯ ಸರ್ಕಾರ ಈ ಪ್ರಸ್ತಾಪವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು. ಇದು ಅನುಸರಿಸಬೇಕಾದ ಪ್ರಕ್ರಿಯೆ” ಎಂದು ವಿವರಿಸಿದರು.

“ನಾವು ಡಿಸೆಂಬರ್ 7 ರಂದು ಕುದ್ರೋಳಿ ದೇವಸ್ಥಾನದಿಂದ ಬಜ್ಪೆ ವಿಮಾನ ನಿಲ್ದಾಣದವರೆಗೆ ಬೈಕ್ ರ್‍ಯಾಲಿ ನಡೆಸಲು ನಿರ್ಧರಿಸಿದ್ದೇವೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕೋಟಿ ಚೆನ್ನಯ ವಿಮಾನ ನಿಲ್ದಾಣವೆಂದು ಮರುನಾಮಕರಣ ಮಾಡುವಂತೆ ಒತ್ತಾಯಿಸಿ ನಡೆಯಲಿರುವ ಈ ಬೈಕ್‌ ರ್‍ಯಾಲಿಗೆ ಅಲ್ಲಿ ಹಲವಾರು ಸಂಘ ಸಂಸ್ಥೆಗಳು ಬೆಂಬಲ ನೀಡಲಿದೆ” ಎಂದು ಹೇಳಿದರು.

“ಕೋಟಿ ಚೆನ್ನಯ ಹೆಸರು ಮರುನಾಮಕರಣ ಮಾಡುವಂತೆ ಈಗಾಗಲೇ ಕಾನೂನು ಪ್ರಕ್ರಿಯೆ ನಡೆಸಲಾಗಿದೆ. ಆದರೆ ರಾಜ್ಯ ಸರ್ಕಾರದ ಬಳಿ ಇದರ ಪ್ರಸ್ತಾಪ ಅರ್ಜಿ ಇನ್ನೂ ಬಾಕಿಯಾಗಿದೆ. ವಿಮಾನ ನಿಲ್ದಾಣವನ್ನು ಕೋಟಿ ಚೆನ್ನಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸಮಿತಿಯ ಸೂರಜ್ ಕಲ್ಯಾ, ಜೀವನ್ ಪೂಜಾರಿ, ಪ್ರಕಾಶ್ ಸನಿಲ್, ಅಶ್ವತ್ ಉಪ್ಪಳ ಉಪಸ್ಥಿತರಿದ್ದರು.

Vishwa News 24

Recent Posts

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

32 minutes ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

53 minutes ago

ಬೆಳ್ತಂಗಡಿ : ಜೂನ್ 1 ರಿಂದ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು – vishwanews24

ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…

1 hour ago

50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್‌ – vishwanews24

50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್‌ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…

1 hour ago

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ : ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ – vishwanews24

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ  ಅವರಿಗೆ…

2 hours ago

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಯುವಕ ಮೃತ್ಯು – vishwanews24

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಯುವಕ ಮೃತ್ಯು ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ…

2 hours ago