Featured

ಮಂಗಳೂರು ಏರ್‌ಪೋರ್ಟ್‌ಗೆ ಕೋಟಿ-ಚೆನ್ನಯ ಹೆಸರಿಡುವಂತೆ ಒತ್ತಾಯಿಸಿ ಬಿಲ್ಲವ ಬ್ರಿಗೇಡ್‌ನಿಂದ 8 ಕ್ಷೇತ್ರಗಳಲ್ಲಿ ಒಂದು ತಿಂಗಳ ಸ್ಟಿಕ್ಕರ್‌ ಅಭಿಯಾನ – Vishwanews24

ಮಂಗಳೂರು ಏರ್‌ಪೋರ್ಟ್‌ಗೆ ಕೋಟಿ-ಚೆನ್ನಯ ಹೆಸರಿಡುವಂತೆ ಒತ್ತಾಯಿಸಿ ಬಿಲ್ಲವ ಬ್ರಿಗೇಡ್‌ನಿಂದ 8 ಕ್ಷೇತ್ರಗಳಲ್ಲಿ ಒಂದು ತಿಂಗಳ ಸ್ಟಿಕ್ಕರ್‌ ಅಭಿಯಾನ – Vishwanews24

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಎಂದು ಮರುನಾಮಕರಣ ಮಾಡುವಂತೆ ಒತ್ತಾಯಿಸಿ ಬಿಲ್ಲವ ಬ್ರಿಗೇಡ್‌‌ 8 ಕ್ಷೇತ್ರಗಳಲ್ಲಿ ಒಂದು ತಿಂಗಳ ಕಾಲ ಸ್ಟಿಕ್ಕರ್ ಅಭಿಯಾನ ನಡೆಸಲಿದೆ.

ಮಂಗಳೂರು ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಲ್ಲವ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ಅವಿನಾಶ್ ಸುವರ್ಣ, “ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಬೇಕೆಂದು ಒತ್ತಾಯಿಸಿ 2020ರ ಡಿ.7ರಂದು ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಿಂದ ಮಂಗಳೂರು ಅಂತರಾಷ್ಟ್ರೀಯ ನಿಲ್ದಾಣದವರೆಗೆ ಬೃಹತ್‌‌‌‌ ಬೈಕ್‌ ಜಾಥಾವನ್ನು ಹಮ್ಮಿಕೊಂಡಿತ್ತು. ಇದು ನಡೆದ ಮರುದಿನ ಕರ್ನಾಟಕ ವಿಧಾನಸಭೆಯಲ್ಲಿ ಮೂಡುಬಿದಿರೆಯ ಶಾಸಕ ಉಮಾನಾಥ್‌ ಕೋಟ್ಯಾನ್‌ ಅವರು ಈ ಬಗ್ಗೆ ಪ್ರಸ್ತಾಪಿಸಿದ್ದರು” ಎಂದು ತಿಳಿಸಿದ್ದಾರೆ.

“ಒಂದು ವರ್ಷ ಕಳೆದರೂ ಸರ್ಕಾರದಿಂದ ಈ ಬಗ್ಗೆ ಯಾವುದೇ ಅಧಿಕೃತ ಉತ್ತರ ಬಂದಿಲ್ಲ. ಕರ್ನಾಟಕ ರಾಜ್ಯ ಸರ್ಕಾರ ಮುಂದಿನ ತಿಂಗಳಿನಲ್ಲಿ ಸಚಿವ ಸಂಪುಟ ಸಭೆಯಲ್ಲಿ ಈ ಮರುನಾಮಕರಣ ಪ್ರಸ್ತಾಪನೆಯನ್ನು ಅಂಗೀಕರಿಸಿ ತಕ್ಷಣ ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಕೊಡುವಂತೆ ಒತ್ತಾಯಿಸುತ್ತಿದ್ದೇವೆ” ಎಂದಿದ್ದಾರೆ.

“ಮುಂದಿನ ಒಂದು ತಿಂಗಳ ಕಾಲ ದ.ಕ. ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರದಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲು ಸ್ಟಿಕ್ಕರ್‌‌ ಅಭಿಯಾನ ನಡೆಸಲಾಗುವುದು. ಈ ಅಭಿಯಾನ ಮುಗಿದ ಬಳಿಕ ಇದೇ ಬೇಡಿಕೆಯನ್ನು ಮುಂದಿಟ್ಟು ಬೃಹತ್‌‌ ಜನ ಸಮಾವೇಶ ನಡೆಸಲಾಗುವುದು” ಎಂದು ಹೇಳಿದ್ದಾರೆ.

ಈ ಸಂದರ್ಭ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಸಾಲ್ಯಾನ್, ಕಿಶನ್ ಅಮೀನ್, ಪ್ರಶಾಂತ್, ಪವನ್ ಸಾಲ್ಯಾನ್ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

11 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

12 hours ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

12 hours ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

12 hours ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

15 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

15 hours ago