ಮಂಗಳೂರು: ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಕಣ್ಣೂರಿಗೆ ಆಗಮಿಸಿದ ಯುವಕನೋರ್ವನಿಗೆ ಮಂಕಿಫಾಕ್ಸ್ ರೋಗಲಕ್ಷಣ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆತನನ್ನು ಪರಿಯಾರಂ ಮೆಡಿಕಲ್ ಕಾಲೇಜಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಕಿಪಾಕ್ಸ್ ರೋಗ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ ಯುವಕನ ಮಾದರಿ ಸಂಗ್ರಹಿಸಿ ಪುಣೆಯಲ್ಲಿರುವ ವೈರಾಲಜಿ ಕೇಂದ್ರಕ್ಕೆ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಮಾತ್ರವಲ್ಲದೆ ಯುವಕನನ್ನು ಐಸೋಲೇಶನ್ಗೆ ಒಳಪಡಿಸಲಾಗಿದ್ದು ನಿಗಾ ಇರಿಸಲಾಗಿದೆ. ಕೇರಳದಲ್ಲಿ ಮೊದಲ ಮಂಕಿಫಾಕ್ಸ್ ಪ್ರಕರಣ ಜು.12 ರಂದು ದಾಖಲಾಗಿತ್ತು.
ವಿದೇಶದಿಂದ ಶನಿವಾರ ಮಂಗಳೂರು ಏರ್ ಪೋರ್ಟ್ ಮೂಲಕ ಆಗಮಿಸಿ ಅಲ್ಲಿಂದ ಕಣ್ಣೂರಿಗೆ ಬಂದಿದ್ದ ಯುವಕನಲ್ಲಿ ಮಂಕಿಫಾಕ್ಸ್ ಲಕ್ಷಣಗಳು ಕಾಣಿಸಿಕೊಂಡ ಹಿನ್ನಲೆ ಆತ ಸ್ವಯಂ ಆಸ್ಪತ್ರೆಗೆ ಬಂದು ದಾಖಲಾಗಿದ್ದ.
ನೆರೆಯ ರಾಜ್ಯದಲ್ಲಿ ಮಂಕಿಫಾಕ್ಸ್ ಕಾಣಿಸಿಕೊಂಡ ಧೃಢಪಡುತ್ತಿದ್ದಂತೆಯೇ ದ.ಕ ಜಿಲ್ಲೆಯಲ್ಲೂ ವಿದೇಶ ನಿಗಾ ಇರಿಸಲಾಗಿದ್ದು, ಮುನ್ನೆಚ್ಚರಿಕೆ ದೃಷ್ಟಿಯಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ 10 ಹಾಸಿಗೆಗಳ ಒಂದು ವಾರ್ಡ್ ನ್ನು ಮಂಕಿ ಫಾಕ್ಸ್ ಸೋಂಕಿತ ರೋಗಿಗಳಿಗೆಂದು ಮೀಸಲಿಡಲಾಗಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…