ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನಾಮಿಕ ವ್ಯಕ್ತಿಯೊಬ್ಬ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಒಡ್ಡಿರುವ ಘಟನೆ ಇಂದು ನಡೆದಿದೆ.
ಮಂಗಳೂರಿನ ಬಜಪೆ ಬಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನದ ಸುಮಾರಿಗೆ ಅನಾಮಿಕ ವ್ಯಕ್ತಿಯೊಬ್ಬ ಏರ್ ಪೋರ್ಟ್ ಗೆ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದ , ಈ ಹಿನ್ನಲೆ ಸಿಐಎಸ್ ಎಫ್ ಸಿಬ್ಬಂದಿ ಹಾಗೂ ಪೊಲೀಸರು ಸಂಪೂರ್ಣ ಏರ್ ಪೋರ್ಟ್ ನ್ನು ತಪಾಸಣೆ ನಡೆಸಿದ್ದು, ಯಾವುದೇ ಬಾಂಬ್ ಪತ್ತೆಯಾಗಿಲ್ಲ. ನಂತರ ಯಾರೋ ಕಿಡಿಗೇಡಿಗಳ ಹುಸಿಬಾಂಬ್ ಕರೆ ಇದಾಗಿದ್ದು ಎಂದು ತಿಳಿದು ಬಂದಿದೆ. ಈ ಘಟನೆ ಕುರಿತಂತೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಜನವರಿಯಲ್ಲಿ ಆದಿತ್ಯರಾವ್ ಎಂಬಾತ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಇಟ್ಟಿದ್ದು, ಇಡೀ ದೇಶದ ಗಮನ ಸೆಳೆದಿತ್ತು. ತಪಾಸಣೆ ವೇಳೆ ಪತ್ತೆಯಾದ ಈ ಬಾಂಬ್ ನ್ನು ನಿಷ್ಕ್ರೀಯಗೊಳಿಸಲಾಗಿತ್ತು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…