ಮಂಗಳೂರು ಏರ್ ಪೋರ್ಟ್ ವಿಶ್ವದಲ್ಲೇ ಅತ್ಯುತ್ತಮ ವಿಮಾನ ನಿಲ್ದಾಣ -Vishwanews24

ಮಂಗಳೂರು:ಏರ್‌ಪೋರ್ಟ್ಸ್‌ ಕೌನ್ಸಿಲ್‌ ಇಂಟರ್‌ನ್ಯಾಷನಲ್‌ (ಎಸಿಐ) ನಡೆಸಿದ ಸಮೀಕ್ಷೆಯಲ್ಲಿ ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಜಗತ್ತಿನ ಅತ್ಯುತ್ತಮ ವಿಮಾನ ನಿಲ್ದಾಣ ಸ್ಥಾನವನ್ನು ಮುಡಿಗೇರಿಸಿಕೊಂಡಿದೆ.

ಮಂಗಳೂರು, ಚಂಢೀಗಡ, ತಿರುವನಂತಪುರ, ಹಾಗೂ ಲಕ್ನೋ ವಿಮಾನ ನಿಲ್ದಾಣಗಳು ವಿಶ್ವದ ಅತ್ಯುತ್ತಮ ನಿಲ್ದಾಣ ಪ್ರಶಸ್ತ್ರಿಗೆ ಪಾತ್ರವಾಗಿದೆ. ಎಸಿಐ ನಡೆಸಿದ ಏರ್‌ಪೋರ್ಟ್‌ ಸರ್ವಿಸ್‌ ಕ್ವಾಲಿಟಿ (ಎಎಸ್‌ಕ್ಯೂ) ಸಮೀಕ್ಷೆಯಲ್ಲಿಈ ನಾಲ್ಕು ವಿಮಾನ ನಿಲ್ದಾಣಗಳು ಜಗತ್ತಿನ ಅತ್ಯುತ್ತಮ ವಿಮಾನ ನಿಲ್ದಾಣಗಳೆಂಬ ರೇಟಿಂಗ್‌ ಪಡೆದಿವೆ.

ಈ ನಾಲ್ಕು ವಿಮಾನ ನಿಲ್ದಾಣಗಳೌ ಒಟ್ಟು ಹತ್ತು ವಿಭಾಗಗಳಲ್ಲಿ ಪ್ರಯಾಣಿಕರಿಗೆ ನೀಡಿದ ಉತ್ಕೃಷ್ಟ ಸೇವೆ , ವಿಶ್ವ ಗುಣಮಟ್ಟದ ಸೌಲಭ್ಯಗಳಿಗಾಗಿ ಈ ಪುರಸ್ಕಾರ ಪಡೆದುಕೊಂಡಿದೆ. ಜಗತ್ತಿನಾದ್ಯಂತ 356 ವಿಮಾನ ನಿಲ್ದಾಣಗಳು 2019ರಲ್ಲಿ ನಡೆದ ಈ ಸಮೀಕ್ಷೆಯ ಭಾಗವಾಗಿದ್ದವು ಎಂದು ಪ್ರಾಧಿಕಾರ ಮಾಹಿತಿ ನೀಡಿದೆ. ಸರ್ವೇ ತಂಡವು ವಿಮಾನ ನಿಲ್ದಾಣಗಳಿಗೆ ಆಗಮಿಸಿದ ಪ್ರಯಾಣಿಕರು ವ್ಯಕ್ತಪಡಿಸುವ ಅಭಿಪ್ರಾಯ ಹಾಗೂ ಪ್ರಯಾಣಿಕರ ಸೇವಾ ಸಂತೃಪ್ತಿಯನ್ನು ಆಧರಿಸಿ ಎಎಸ್ ಕ್ಯೂ ಅಂಕ ನೀಡಲಾಗುತ್ತದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಬಳಕೆಗಾಗಿ ಎರಡು ಹೊಸ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಟರ್ಮಿನಲ್‌ ಕಟ್ಟಡವನ್ನು ಮೇಲ್ದರ್ಜೆಗೇರಿಸಲಾಗಿದೆ. ತಂತ್ರಾಂಶ ಆಧಾರಿತ ಕ್ಯಾಬ್‌ ಸೌಲಭ್ಯ ಕಲ್ಪಿಸಲಾಗಿದೆ. ಪ್ರಯಾಣಿಕರ ಆಗಮನ ಹಾಗೂ ವಿದೇಶಿ ಪ್ರಯಾಣಿಕರ ನಿರ್ಗಮನ ದ್ವಾರಗಳಲ್ಲಿ ಎಲೆಕ್ಟ್ರಾನಿಕ್‌ ಸ್ವಯಂಚಾಲಿಕ ನಿಯಂತ್ರಣ ವ್ಯವಸ್ಥೆ ಹಾಗೂ ಇ– ಗೇಟ್‌ಗಳನ್ನು ಅಳವಡಿಸಲಾಗಿದೆ. 500 ಹೊಸ ಟ್ರಾಲಿಗಳನ್ನು ಒದಗಿಸಲಾಗಿದೆ. ಎಟಿಎಂ ಕೇಂದ್ರಗಳನ್ನು ತೆರೆಯಲಾಗಿದೆ. ಇವೆಲ್ಲವೂ ರ‍್ಯಾಂಕಿಂಗ್‌ನಲ್ಲಿ ಮೇಲಕ್ಕೇರಲು ಕಾರಣ ಎಂದು ಪ್ರಾಧಿಕಾರ ತಿಳಿಸಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ನಗದುರಹಿತ ವಹಿವಾಟಿಗೆ ಆದ್ಯತೆ ನೀಡಲಾಗಿದೆ. ಪರಿಸರ ಸ್ನೇಹಿ ನಿಲ್ದಾಣವನ್ನಾಗಿ ಬದಲಾಯಿಸಲಾಗಿದೆ. ಸ್ಥಳೀಯ ಕಲೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಲಾಕೃತಿಗಳನ್ನು ಪ್ರದರ್ಶಿಸಿರುವುದರಿಂದ ಪ್ರಯಾಣಿಕರು ಇದನ್ನು ಮೆಚ್ಚಿಕೊಂಡಿದ್ದು ಈ ಸ್ಥಾನ ದೊರಕಲು ಕಾರಣ’ ಎಂದು ಪ್ರಾಧಿಕಾರದ ಕಾರ್ಪೋರೇಟ್‌ ಸಂವಹನ ವಿಭಾಗದ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

2 days ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

2 days ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

2 days ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

2 days ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

2 days ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

2 days ago