ಮಂಗಳೂರು : ನಗರದ ಐಟಿ ಕಚೇರಿಯನ್ನು ಗೋವಾಕ್ಕೆ ಸ್ಥಳಾಂತರಿಸುವ ವಿಷಯಕ್ಕೆ ಸಂಬಂಧಪಟ್ಟಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ಕೈಗೊಂಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯು.ಟಿ ಖಾದರ್ ಬಿಜೆಪಿ ಸರ್ಕಾರ ಅಧಿಕಾರಿಗಳ ವರ್ಗಾವಣೆಯಲ್ಲಿ ಸಮಯ ದೂಡುತ್ತಿದೆ. ಕೇವಲ ಒಂದು ಯೋಜನೆಗಳನ್ನು ಜಿಲ್ಲೆಗೆ ನೀಡುತ್ತಿಲ್ಲ. ಈಗಿರುವ ಕಚೇರಿ ಸೇರಿದಂತೆ ಸಾರ್ವಜನಿಕರಿಗೆ ಒದಗುವ ಸೌಲಭ್ಯಗಳ ಸ್ಥಳಾಂತರ, ಖಾಸಗೀಕರಣ ಮಾಡುವಲ್ಲಿ ತೊಡಗಿದೆ. ಭಾವನಾತ್ಮಕ ಆಲೋಚನೆಗಳಿಂದ ಜನರನ್ನು ಸೆಳೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಎಸ್ ಟಿ, ನೋಟು ಅಪಮೌಲ್ಯೀಕರಣದಿಂದ ಈಗಾಗಲೇ ಜನರಿಗೆ ಅನ್ಯಾಯ ಆಗಿದ್ದು ಸದ್ಯ ಇರುವ ಐಟಿ ಕಚೇರಿ ಸ್ಥಳಾಂತರದ ನಿರ್ಧಾರ ನಾಲ್ಕು ಲಕ್ಷ ತೆರಿಗೆದಾರರಿಗೆ ಆಘಾತ ನೀಡಲಿದೆ. ಸಂಸದರು ತಾವು ನಂಬರ್ ಒನ್ ಆದರೆ ತನ್ನ ಸ್ವಂತ ನೆಲದಲ್ಲಿರುವ ಕಚೇರಿ ಸ್ಥಳಾಂತರವಾಗುತ್ತಿದ್ದರೂ ಧ್ವನಿ ಎತ್ತದೆ ಸುಮ್ಮನಿದ್ದಾರೆ ಸಂಸದರು ರಾಜೀನಾಮೆ ನೀಡಿ ಐಟಿ ಕಚೇರಿ ಸ್ಥಳಾಂತರವನ್ನು ತತ್ ಕ್ಷಣ ಹಿಂಪಡೆಯಬೇಕು ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಒತ್ತಾಯಿಸುತ್ತಿದ್ದಾರೆ.
ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ಐವನ್ ಡಿಸೋಜ, ಜೆ ಅರ್ ಲೋಬೊ, ಮಾಜಿ ಸಚಿವ ಅಭಯಚಂದ್ರ ಜೈನ್, ಹಾಗೂ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…