ಮಂಗಳೂರು : ನಾಲ್ವರು ವ್ಯಕ್ತಿಗಳಿಗೆ ನೀಡಲಾಗಿದ್ದ ಗನ್ಮ್ಯಾನ್ ಭದ್ರತೆಯನ್ನು ವಾಪಸ್ ಪಡೆದುಕೊಳ್ಳಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ಮಾಹಿತಿ ನೀಡಿದ್ದಾರೆ.
ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಒಟ್ಟು 5 ಮಂದಿಗೆ ಗನ್ಮ್ಯಾನ್ ಭದ್ರತೆ ಒದಗಿಸಲಾಗಿತ್ತು. ಆ ಪೈಕಿ ಓರ್ವರು ಈ ಹಿಂದೆ ಅವರಾಗಿಯೇ ವಾಪಸ್ ನೀಡಿದ್ದರು. ಇನ್ನುಳಿದ ನಾಲ್ವರಿಗೆ ಇರಬಹುದಾದ ಬೆದರಿಕೆ, ಭದ್ರತೆಯ ಆತಂಕದ ಕುರಿತು ಪರಿಶೀಲನೆ ನಡೆಸಿ ಅನಂತರ ಗನ್ಮ್ಯಾನ್ನ್ನು ವಾಪಸ್ ಪಡೆದುಕೊಳ್ಳಲಾಗಿದೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.
ಯಾವುದೇ ವ್ಯಕ್ತಿಗೆ ಇರುವ ಭದ್ರತಾ ಆತಂಕವನ್ನು ಕಾಲ ಕಾಲಕ್ಕೆ ಪರಿಶೀಲಿಸಿ ಗನ್ಮ್ಯಾನ್ ಭದ್ರತೆ ನೀಡುವ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಇದು ನಿರಂತರವಾಗಿ ನಡೆಯುವ ಪ್ರಕ್ರಿಯೆಯಾಗಿದೆ. ಇತ್ತೀಚಿನ ಪರಿಶೀಲನೆ ಯನ್ನು ಮಾರ್ಚ್ಗೆ ನಡೆಸಲಾಗಿತ್ತು. ಆದಾಗ್ಯೂ ಗನ್ಮ್ಯಾನ್ ಭದ್ರತೆ ಅಗತ್ಯವಿದ್ದರೆ ಇಲಾಖೆಗೆ ಹಣ ಪಾವತಿಸಿ ಪಡೆದುಕೊಳ್ಳಲು ಅವಕಾಶವಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…