ಮಂಗಳೂರು: ಖ್ಯಾತ ಕಲಾವಿದ, ತುಳು ನಾಟಕ ರಂಗದ ಬರಹಗಾರ, ಸೂಪರ್ ಹಿಟ್ ತುಳು ನಾಟಕ ಒರಿಯರ್ದೊರಿ ಅಸಲ್ನಲ್ಲಿ ತೆಂಗಿನಕಾಯಿ ಕೀಳುವ ನಾಥು ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ಅಶೋಕ್ ಶೆಟ್ಟಿ ಅಂಬ್ಲಿಮೊಗರು(53) ಸೋಮವಾರ ನಿಧನರಾದರು.
ಅಶೋಕ್ ಸೋಮವಾರ ಬೆಳಗ್ಗೆ ಅಂಬ್ಲಿಮೊಗರುವಿನ ತಮ್ಮ ಮನೆಯಲ್ಲಿ ತೀವ್ರ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ವೃತ್ತಿಪರ ರಂಗಭೂಮಿಯ ನಟ ಮತ್ತು ಬರಹಗಾರ ಅಶೋಕ್ ಹಲವು ದಶಕಗಳ ಕಾಲ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಅವರ ಕಲಾಸಂಗಮ ತಂಡದಲ್ಲಿ ಸೇವೆ ಸಲ್ಲಿಸಿದ್ದಾರೆ. ನಾಟಕ, ಸಿನಿಮಾ ಮತ್ತು ದೈನಿಕ ಸಾಬೂನುಗಳಲ್ಲಿ ನಟಿಸಿದ್ದಾರೆ. ಜೊತೆಗೆ ಅನೇಕ ನಾಟಕಗಳನ್ನು ಬರೆದಿದ್ದಾರೆ. ಅಶೋಕ್ ಅವರ ಹಠಾತ್ ನಿಧನಕ್ಕೆ ತುಳು ನಾಟಕ ರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…