ಮಂಗಳೂರು : ಓಲಂಪಿಕ್‌‌‌ನಲ್ಲಿ ಕಂಬಳವನ್ನು ಸೇರಿಸಬೇಕು , ಶ್ರೀನಿವಾಸ ಗೌಡರಿಗೆ ಚಿನ್ನದ ಪದಕ ಸಿಗಬೇಕು : ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ -Vishwanews24

ಮಂಗಳೂರು: ಕಂಬಳದ ಗದ್ದೆಯಲ್ಲಿ ಉಸೇನ್ ಬೋಲ್ಟ್ ದಾಖಲೆ ಮುರಿದ ಮೂಡಬಿದಿರೆಯ ಮೀಯಾರಿನ ಯುವಕ ಶ್ರೀನಿವಾಸಗೌಡ ಅವರಿಗೆ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ತಮ್ಮ ಟ್ವೀಟ್ಟರ್ ಖಾತೆಯಲ್ಲಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ಔಟ್ ಲುಕ್ ನಲ್ಲಿ ಪ್ರಕಟವಾದ ಶ್ರೀನಿವಾಸ ಗೌಡರ ಸಾಧನೆ ಕುರಿತ ಲೇಖನವನ್ನು ಟ್ವೀಟ್ಟರ್ ನಲ್ಲಿ ಹಂಚಿಕೊಂಡ ಆನಂದ್ ಮಹೀಂದ್ರಾ, ಒಮ್ಮೆ ಈ ವ್ಯಕ್ತಿಯ ಮೈಕಟ್ಟನ್ನು ಗಮನಿಸಿ, ಈತ ಅಸಾಧರಣ ಸಾಹಸ ಮಾಡಲು ಸಮರ್ಥನಾಗಿದ್ದಾನೆ.

ಈತನಿಗೆ ಕೇಂದ್ರ ಕ್ರೀಡಾ ಸಚಿವರಾದ ಕಿರಿಣ್ ರಿಜಿಜು 100 ಮೀ ಓಟಗಾರನಾಗಲು ಸಮರ್ಥ ತರಬೇತಿಯನ್ನು ನೀಡಲು ಅನುಕೂಲ ಕಲ್ಪಿಸಬೇಕು ಅಥವಾ ಓಲಂಪಿಕ್‌‌‌ನಲ್ಲಿ ಕಂಬಳವನ್ನು ಸೇರಿಸಬೇಕು. ಏನೇ ಆಗಲಿ ಶ್ರೀನಿವಾಸ ಗೌಡ ಅವರಿಗೆ ಚಿನ್ನದ ಪದಕಸಿಗಬೇಕು ಎಂದು ಟ್ವೀಟ್‌‌ ಮಾಡಿದ್ದರು.

ಫೆ. 1ರಂದು ಮಂಗಳೂರು ಸಮೀಪದ ಐಕಳ ಎಂಬಲ್ಲಿ ನಡೆದ ಕಂಬಳ ಕ್ರೀಡೆಯಲ್ಲಿ ಶ್ರೀನಿವಾಸ ಗೌಡ ಅವರು 142.50 ಮೀಟರ್ ನ ಕಂಬಳ ಕೋಣಗಳ ಟ್ರ್ಯಾಕ್ ನಲ್ಲಿ ಕೇವಲ 13.62 ಸೆಕೆಂಡ್ ಗಳಲ್ಲಿ ಕ್ರಮಿಸಿದ್ದಾರೆ. ಇದು ಕಂಬಳ ಕ್ರೀಡೆಯಲ್ಲಿ ಇದುವರೆಗಿನ ಅತ್ಯಂತ ವೇಗದ ದಾಖಲೆಯಾಗಿದ್ದು ಶ್ರೀನಿವಾಸ್ ಗೌಡ ಅವರನ್ನು ಉಸೇನ್ ಬೋಲ್ಟ್ ಜೊತೆಗೆ ಹೋಲಿಸಲಾಗಿದೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

11 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

11 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

12 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

15 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

15 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

15 hours ago