ಮಂಗಳೂರು: ಕಂಬಳದ ಗದ್ದೆಯಲ್ಲಿ ಉಸೇನ್ ಬೋಲ್ಟ್ ದಾಖಲೆ ಮುರಿದ ಮೂಡಬಿದಿರೆಯ ಮೀಯಾರಿನ ಯುವಕ ಶ್ರೀನಿವಾಸಗೌಡ ಅವರಿಗೆ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ತಮ್ಮ ಟ್ವೀಟ್ಟರ್ ಖಾತೆಯಲ್ಲಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ಈ ಕುರಿತು ಔಟ್ ಲುಕ್ ನಲ್ಲಿ ಪ್ರಕಟವಾದ ಶ್ರೀನಿವಾಸ ಗೌಡರ ಸಾಧನೆ ಕುರಿತ ಲೇಖನವನ್ನು ಟ್ವೀಟ್ಟರ್ ನಲ್ಲಿ ಹಂಚಿಕೊಂಡ ಆನಂದ್ ಮಹೀಂದ್ರಾ, ಒಮ್ಮೆ ಈ ವ್ಯಕ್ತಿಯ ಮೈಕಟ್ಟನ್ನು ಗಮನಿಸಿ, ಈತ ಅಸಾಧರಣ ಸಾಹಸ ಮಾಡಲು ಸಮರ್ಥನಾಗಿದ್ದಾನೆ.
ಈತನಿಗೆ ಕೇಂದ್ರ ಕ್ರೀಡಾ ಸಚಿವರಾದ ಕಿರಿಣ್ ರಿಜಿಜು 100 ಮೀ ಓಟಗಾರನಾಗಲು ಸಮರ್ಥ ತರಬೇತಿಯನ್ನು ನೀಡಲು ಅನುಕೂಲ ಕಲ್ಪಿಸಬೇಕು ಅಥವಾ ಓಲಂಪಿಕ್ನಲ್ಲಿ ಕಂಬಳವನ್ನು ಸೇರಿಸಬೇಕು. ಏನೇ ಆಗಲಿ ಶ್ರೀನಿವಾಸ ಗೌಡ ಅವರಿಗೆ ಚಿನ್ನದ ಪದಕಸಿಗಬೇಕು ಎಂದು ಟ್ವೀಟ್ ಮಾಡಿದ್ದರು.
ಫೆ. 1ರಂದು ಮಂಗಳೂರು ಸಮೀಪದ ಐಕಳ ಎಂಬಲ್ಲಿ ನಡೆದ ಕಂಬಳ ಕ್ರೀಡೆಯಲ್ಲಿ ಶ್ರೀನಿವಾಸ ಗೌಡ ಅವರು 142.50 ಮೀಟರ್ ನ ಕಂಬಳ ಕೋಣಗಳ ಟ್ರ್ಯಾಕ್ ನಲ್ಲಿ ಕೇವಲ 13.62 ಸೆಕೆಂಡ್ ಗಳಲ್ಲಿ ಕ್ರಮಿಸಿದ್ದಾರೆ. ಇದು ಕಂಬಳ ಕ್ರೀಡೆಯಲ್ಲಿ ಇದುವರೆಗಿನ ಅತ್ಯಂತ ವೇಗದ ದಾಖಲೆಯಾಗಿದ್ದು ಶ್ರೀನಿವಾಸ್ ಗೌಡ ಅವರನ್ನು ಉಸೇನ್ ಬೋಲ್ಟ್ ಜೊತೆಗೆ ಹೋಲಿಸಲಾಗಿದೆ.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…