Featured

ಮಂಗಳೂರು : ಕಂದಾವರ ಪದವು ಶ್ರೀ ಕೋಡ್ದಬ್ಬು ದೈವಸ್ಥಾನ : ಉರಿಯುತ್ತಿದ್ದ ದೀಪವನ್ನು ನಂದಿಸಿ , ದೈವದ ಕಲ್ಲಿಗೆ ರಕ್ತ ಹರಿಸಿದ್ದ ವ್ಯಕ್ತಿ ಬಂಧನ – Vishwanews24

ಮತ್ತೊಮ್ಮೆ ಕಾರಣಿಕ ಮೆರೆದ ಕಂದಾವರ ಪದವಿನ ಶ್ರೀ ಕೋಡ್ದಬ್ಬು ಮತ್ತು ರಾಹುದೈವ..

ಕೈಕಂಬ ; ಮಂಗಳೂರು ತಾಲೂಕಿನ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಡುವ ಕಂದಾವರ ಪದವಿನ ಶ್ರೀ ಕೋಡ್ದಬ್ಬು ದೈವಸ್ಥಾನದಲ್ಲಿ ದಿನಾಂಕ 20.03.2022 ರಂದು ರಾತ್ರಿ ದುಶ್ಕರ್ಮಿಯೋರ್ವ ದೈವಸ್ಥಾನಕ್ಕೆ ಅಕ್ರಮವಾಗಿ ಪ್ರವೇಶಿಸಿ, ರಾಹು ದೈವದ ಗುಡಿಯಲ್ಲಿ ಉರಿಯುತ್ತಿದ್ದ ದೀಪವನ್ನು ನಂದಿಸಿ, ಅದನ್ನು ಕವಚಿ ಅದಕ್ಕೆ ರಕ್ತವನ್ನು ಹರಿಸಿ, ನಂತರ ದೈವಸ್ಥಾನದ ಬಲಬದಿಯಲ್ಲಿರುವ ಆಯದಕಲ್ಲಿಗೆ ರಕ್ತದ ಬಿಂದು ಹರಿಸುತ್ತಾ ಸುತ್ತು ಬಂದು ನಂತರ ಇಡೀ ಅಂಗಣದ ಸುತ್ತಲೂ ರಕ್ತದ ಬಿಂದು ಸುರಿಸಿದ್ದಾನೆ.

ಬೆಳಿಗ್ಗೆ ದೈವದ ಚಾಕರಿಯವರೋರ್ವರು ದೈವಸ್ಥಾನಕ್ಕೆ ಬಂದಾಗ ಸಂಗತಿ ಬೆಳಕಿಗೆ ಬಂತು.

ಕ್ಷಣ ಮಾತ್ರದಲ್ಲಿ ಸಧ್ಭಕ್ತರು ದೈವಸ್ಥಾನದ ಅಂಗಣದಲ್ಲಿ ನೆರೆದು ಮಧ್ಯಾಹ್ನವೇ ಶ್ರೀ ಬಬ್ಬು ಸ್ವಾಮಿಯ ದರ್ಶನಕ್ಕೆ ಸಮಯ ನಿಗದಿಪಡಿಸಿ, ದರ್ಶನದ ಸಮಯದೊಳಗೆ ದುಷ್ಕರ್ಮಿ ದೈವಸ್ಥಾನಕ್ಕೆ ಬರಬೇಕೆಂದು ಪ್ರಾರ್ಥಿಸಿದರು.

ತದನಂತರ ಬಜ್ಪೆ ಠಾಣೆಗೆ ದೂರು ನೀಡಲಾಗಿ ಪೊಲೀಸರು ಅಗಮಿಸಿ, ಕೇವಲ ಒಂದುಗಂಟೆಯೊಳಗೆ ದುಷ್ಕರ್ಮಿಯನ್ನು ಬಂಧಿಸಿದರು.

ಸ್ಥಳೀಯ ನಿವಾಸಿ ಸಾಹುಲ್ ಎಂಬಾತನನ್ನು ಪೋಲಿಸರು ಆತನ ಮನೆಯಿಂದ ವಶಪಡಿಸಿಕೊಂಡಿದ್ದಾರೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಬಬ್ಬುಸ್ವಾಮಿಯ ದರ್ಶನ ಆಯೋಜಿಸಿರುವ ಭಕ್ತರು‌ ದುಷ್ಕರ್ಮಿ ಪತ್ತೆಯಾಗಬೇಕೆಂದು ಮನವಿ ಮಾಡಿದ್ದರು. ಇದೀಗ ದೂರು ದಾಖಲಾದ ಒಂದೇ ಗಂಟೆಯಲ್ಲೇ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಳೆದ 2020 ರಲ್ಲಿ ದೈವಸ್ಥಾನವನ್ನು ಪುನರ್ ನಿರ್ಮಿಸಿ, ಪಂಚವಿಂಶತಿ ಕಲಶಾಭಿಷೇಕ ನಡೆದು ಶ್ರೀ ದೈವಗಳ ಕಾರಣಿಕ ದಿನದಿಂದ ದಿನಕ್ಕೆ ವಿಜೃಂಬಿಸುತ್ತಿದ್ದು, ಇಂದಿನ ಘಟನೆ ಶ್ರೀ ಬಬ್ಬು ಸ್ವಾಮಿ ಮತ್ತು ರಾಹುದೈವದ ಕಾರಣಿಕಕ್ಕೆ ಮತ್ತೊಂದು ಗರಿ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago