Featured

ಮಂಗಳೂರು ಕಂಪೌಂಡ್ ಗೋಡೆಯೊಂದರಲ್ಲಿ  ಲಷ್ಕರ್ ಜಿಂದಾಬಾದ್ ಬರಹದ ಹಿನ್ನಲೆ : ದೇಶವಿರೋಧಿ ಗೋಡೆಬರಹ ಬರೆದವರ ಬಂಧನಕ್ಕೆ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ -Vishwanews24

ಮಂಗಳೂರು ಕಂಪೌಂಡ್ ಗೋಡೆಯೊಂದರಲ್ಲಿ  ಲಷ್ಕರ್ ‘ಜಿಂದಾಬಾದ್” ಬರಹದ ಹಿನ್ನಲೆ : ದೇಶವಿರೋಧಿ ಗೋಡೆಬರಹ ಬರೆದವರ ಬಂಧನಕ್ಕೆ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ -Vishwanews24

ಮಂಗಳೂರಿನಲ್ಲಿ ಸಂಘ-ಸಂಸ್ಥೆಗಳು ಗಟ್ಟಿಯಾಗಿದೆ ನಮ್ಮನ್ನು ಕೆಣಕಲು ಬರಬೇಡಿ..

ಉಗ್ರಗಾಮಿಗಳನ್ನು ಮಾತ್ರವಲ್ಲದೆ ಉಗ್ರರಿಗೆ ಬೆಂಬಲ ಕೊಡುವುವರನ್ನೂ ಬಂಧಿಸಬೇಕು..

ದಕ್ಷಿಣ ಕನ್ನಡ: ಮಂಗಳೂರಿನ ನಗರದ ಅಪಾರ್ಟ್ಮೆಂಟ್ ಕಂಪೌಂಡ್ ಗೋಡೆಯೊಂದರಲ್ಲಿ ಕಾಣಿಸಿಕೊಂಡ “ಲಷ್ಕರ್ ಜಿಂದಾಬಾದ್ ಬರಹದ ಹಿನ್ನಲೆ, ಇಂದು ಕದ್ರಿ ಮಲ್ಲಿಕಟ್ಟೆಯಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.

ವಿಶ್ವಹಿಂದೂ ಪರಿಷತ್, ಬಜರಂಗದಳದಿಂದ ಪ್ರತಿಭಟನೆ ನಡೆದಿದ್ದು, ದೇಶವಿರೋಧಿ ಗೋಡೆಬರಹ ಬರೆದವರ ಬಂಧನಕ್ಕೆ ಸಂಘಟನೆಯ ಪ್ರಮುಖರು ಈ ವೆಳೆ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಸಂಘ-ಸಂಸ್ಥೆಗಳು ಗಟ್ಟಿಯಾಗಿದೆ ನಮ್ಮನ್ನು ಕೆಣಕಲು ಬರಬೇಡಿ. ಮಂಗಳೂರಿನಲ್ಲಿ ಇಂತಹ ಆಟ ನಡೆಯೋದಿಲ್ಲ. ಉಗ್ರಗಾಮಿಗಳನ್ನು ಮಾತ್ರವಲ್ಲದೆ ಉಗ್ರರಿಗೆ ಬೆಂಬಲ ಕೊಡುವುವರನ್ನೂ ಬಂಧಿಸಬೇಕು. ಈ ದೇಶಕ್ಕಾಗಿ ಬಜರಂಗದಳ ಸಂಘಟನೆ ಪ್ರಾಣ ಕೊಡಲೂ ಸಿದ್ದವಾಗಿದೆ. ಪೋಲೀಸರು ತಕ್ಷಣ ಈ ರೀತಿ ಮಾಡಿದವರನ್ನು ಬಂಧಿಸಬೇಕು. ಇಲ್ಲವಾದಲ್ಲಿ ಪ್ರತಿ ತಾಲೂಕಿನಲ್ಲೂ ಪ್ರತಿಭಟನೆ ನಡೆಸುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಕೆಯನ್ನು ರವಾನಿಸಿದ್ದಾರೆ.

ಮಂಗಳೂರಿನ ಸರ್ಕ್ಯೂಟ್ ಹೌಸ್ ರಸ್ತೆ ಬಳಿಯ ಖಾಸಗಿ ಅಪಾರ್ಟ್ಮೆಂಟ್ ಗೋಡೆಯೊಂದರಲ್ಲಿ, “ನಮ್ಮನ್ನು ವಿದ್ವಂಸಕ ಕೃತ್ಯ ನಡೆಸಲು ಉತ್ತೇಜಿಸಲು ಬರಬೇಡಿ ಲಷ್ಕರ್ ಇ ತೊಯಿಬಾ ಮತ್ತು ತಾಲಿಬಾನ್‌ಗಳಿಗೆ ಸಂಘಿಗಳನ್ನು ಯಾವ ರೀತಿ ನೋಡಿಕೊಳ್ಳಬೇಕು ಎನ್ನುವುದು ತಿಳಿದಿದೆ” ಎಂದು ಬರೆಯಲಾಗಿತ್ತು. ಈ ಬರಹಗಳನ್ನು ಸಮಾಜಘಾತುಕರು, ಮಧ್ಯರಾತ್ರಿ ಬರೆದಿರಬಹುದು ಎಂದು ಶಂಕಿಸಲಾಗಿದ್ದು, ಘಟನೆಯು ತೀರ್ವ ಸ್ವರೂಪ ಪಡೆಯುವದನ್ನು ತಪ್ಪಿಸಲು ಕದ್ರಿ ಪೊಲೀಸರು ಗೋಡೆ ಬರಹಗಳನ್ನು ಅಳಿಸಿ ಹಾಕಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

15 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

15 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago