Featured

ಮಂಗಳೂರು ಕಂಪೌಂಡ್ ಗೋಡೆಯೊಂದರಲ್ಲಿ  ಲಷ್ಕರ್ ಜಿಂದಾಬಾದ್ ಬರಹದ ಹಿನ್ನಲೆ : ದೇಶವಿರೋಧಿ ಗೋಡೆಬರಹ ಬರೆದವರ ಬಂಧನಕ್ಕೆ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ -Vishwanews24

ಮಂಗಳೂರು ಕಂಪೌಂಡ್ ಗೋಡೆಯೊಂದರಲ್ಲಿ  ಲಷ್ಕರ್ ‘ಜಿಂದಾಬಾದ್” ಬರಹದ ಹಿನ್ನಲೆ : ದೇಶವಿರೋಧಿ ಗೋಡೆಬರಹ ಬರೆದವರ ಬಂಧನಕ್ಕೆ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ -Vishwanews24

ಮಂಗಳೂರಿನಲ್ಲಿ ಸಂಘ-ಸಂಸ್ಥೆಗಳು ಗಟ್ಟಿಯಾಗಿದೆ ನಮ್ಮನ್ನು ಕೆಣಕಲು ಬರಬೇಡಿ..

ಉಗ್ರಗಾಮಿಗಳನ್ನು ಮಾತ್ರವಲ್ಲದೆ ಉಗ್ರರಿಗೆ ಬೆಂಬಲ ಕೊಡುವುವರನ್ನೂ ಬಂಧಿಸಬೇಕು..

ದಕ್ಷಿಣ ಕನ್ನಡ: ಮಂಗಳೂರಿನ ನಗರದ ಅಪಾರ್ಟ್ಮೆಂಟ್ ಕಂಪೌಂಡ್ ಗೋಡೆಯೊಂದರಲ್ಲಿ ಕಾಣಿಸಿಕೊಂಡ “ಲಷ್ಕರ್ ಜಿಂದಾಬಾದ್ ಬರಹದ ಹಿನ್ನಲೆ, ಇಂದು ಕದ್ರಿ ಮಲ್ಲಿಕಟ್ಟೆಯಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.

ವಿಶ್ವಹಿಂದೂ ಪರಿಷತ್, ಬಜರಂಗದಳದಿಂದ ಪ್ರತಿಭಟನೆ ನಡೆದಿದ್ದು, ದೇಶವಿರೋಧಿ ಗೋಡೆಬರಹ ಬರೆದವರ ಬಂಧನಕ್ಕೆ ಸಂಘಟನೆಯ ಪ್ರಮುಖರು ಈ ವೆಳೆ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಸಂಘ-ಸಂಸ್ಥೆಗಳು ಗಟ್ಟಿಯಾಗಿದೆ ನಮ್ಮನ್ನು ಕೆಣಕಲು ಬರಬೇಡಿ. ಮಂಗಳೂರಿನಲ್ಲಿ ಇಂತಹ ಆಟ ನಡೆಯೋದಿಲ್ಲ. ಉಗ್ರಗಾಮಿಗಳನ್ನು ಮಾತ್ರವಲ್ಲದೆ ಉಗ್ರರಿಗೆ ಬೆಂಬಲ ಕೊಡುವುವರನ್ನೂ ಬಂಧಿಸಬೇಕು. ಈ ದೇಶಕ್ಕಾಗಿ ಬಜರಂಗದಳ ಸಂಘಟನೆ ಪ್ರಾಣ ಕೊಡಲೂ ಸಿದ್ದವಾಗಿದೆ. ಪೋಲೀಸರು ತಕ್ಷಣ ಈ ರೀತಿ ಮಾಡಿದವರನ್ನು ಬಂಧಿಸಬೇಕು. ಇಲ್ಲವಾದಲ್ಲಿ ಪ್ರತಿ ತಾಲೂಕಿನಲ್ಲೂ ಪ್ರತಿಭಟನೆ ನಡೆಸುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಕೆಯನ್ನು ರವಾನಿಸಿದ್ದಾರೆ.

ಮಂಗಳೂರಿನ ಸರ್ಕ್ಯೂಟ್ ಹೌಸ್ ರಸ್ತೆ ಬಳಿಯ ಖಾಸಗಿ ಅಪಾರ್ಟ್ಮೆಂಟ್ ಗೋಡೆಯೊಂದರಲ್ಲಿ, “ನಮ್ಮನ್ನು ವಿದ್ವಂಸಕ ಕೃತ್ಯ ನಡೆಸಲು ಉತ್ತೇಜಿಸಲು ಬರಬೇಡಿ ಲಷ್ಕರ್ ಇ ತೊಯಿಬಾ ಮತ್ತು ತಾಲಿಬಾನ್‌ಗಳಿಗೆ ಸಂಘಿಗಳನ್ನು ಯಾವ ರೀತಿ ನೋಡಿಕೊಳ್ಳಬೇಕು ಎನ್ನುವುದು ತಿಳಿದಿದೆ” ಎಂದು ಬರೆಯಲಾಗಿತ್ತು. ಈ ಬರಹಗಳನ್ನು ಸಮಾಜಘಾತುಕರು, ಮಧ್ಯರಾತ್ರಿ ಬರೆದಿರಬಹುದು ಎಂದು ಶಂಕಿಸಲಾಗಿದ್ದು, ಘಟನೆಯು ತೀರ್ವ ಸ್ವರೂಪ ಪಡೆಯುವದನ್ನು ತಪ್ಪಿಸಲು ಕದ್ರಿ ಪೊಲೀಸರು ಗೋಡೆ ಬರಹಗಳನ್ನು ಅಳಿಸಿ ಹಾಕಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

3 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

3 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

4 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

4 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

7 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

7 hours ago