Featured

ಮಂಗಳೂರು : ಕಂಬಳ ಯಕ್ಷಗಾನಕ್ಕೂ ನೈಟ್‌ ಕರ್ಫ್ಯೂ ಅನ್ವಯ :  ಜಿಲ್ಲಾಧಿಕಾರಿ – Vishwanews24

ಮಂಗಳೂರು : ಕಂಬಳ ಯಕ್ಷಗಾನಕ್ಕೂ ನೈಟ್‌ ಕರ್ಫ್ಯೂ ಅನ್ವಯ ..

ರಾತ್ರಿ ನಡೆಯುವಂತಹ ಕಾರ್ಯಕ್ರಮಗಳನ್ನು 10 ಗಂಟೆಯೊಳಗೆ ಮುಗಿಸಬೇಕು..

ಇದರಲ್ಲಿ ಯಾವುದೇ ರಿಯಾಯಿತಿ ಇರುವುದಿಲ್ಲ..

ಜಿಲ್ಲಾಧಿಕಾರಿ ಸೂಚನೆ – Vishwanews24

ಮಂಗಳೂರು : ಓಮಿಕ್ರಾನ್ ಆತಂಕದ ಹಿನ್ನಲೆ ನಾಳೆಯಿಂದ ರಾಜ್ಯದಲ್ಲಿ ರಾತ್ರಿ ಕರ್ಪ್ಯೂ ಜಾರಿಗೊಳಿಸಿರುವ ರಾಜ್ಯ ಸರಕಾರದ ಆದೇಶ ಕರಾವಳಿಯಲ್ಲಿ ನಡೆಯುವ ಯಕ್ಷಗಾನ ಹಾಗೂ ಕಂಬಳಕ್ಕೂ ಅನ್ವಯಿಸಲಿದೆ ಎಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ನೈಟ್‌ ಕರ್ಫ್ಯೂ ವಿಚಾರದಲ್ಲಿ ರಾಜ್ಯ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುವುದು. ಕಂಬಳ, ಯಕ್ಷಗಾನ ಸೇರಿದಂತೆ ರಾತ್ರಿ ನಡೆಯುವಂತಹ ಕಾರ್ಯಕ್ರಮಗಳನ್ನು 10 ಗಂಟೆಯೊಳಗೆ ಮುಗಿಸಬೇಕು, ಇದರಲ್ಲಿ ಯಾವುದೇ ರಿಯಾಯಿತಿ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಈ ಕುರಿತು ಸಭೆ ನಡೆಸಿ ಆಯೋಜಕರ ಜತೆಗೆ ಚರ್ಚಿಸಲಾಗುವುದು. ನೈಟ್‌ ಕರ್ಫ್ಯೂ ಅವಧಿ ಆರಂಭಕ್ಕೂ ಮೊದಲೇ ಎಲ್ಲ ಕಾರ್ಯಕ್ರಮ ಮುಗಿಸುವಂತೆ ಸಮಬಂಧಪಟ್ಟವರಿಗೆ ಸೂಚನೆ ನೀಡಲಾಗುವುದು. ಓಮೈಕ್ರಾನ್‌ ಹೆಚ್ಚುತ್ತಿರುವ ಕಾರಣ ಸರ್ಕಾರವು ಕಟ್ಟೆಚ್ಚರದ ನಿಯಾಮಾವಳಿಗಳನ್ನು ಜಾರಿಗೆ ತಂದಿದ್ದು, ಯಾವುದೇ ಕಾರಣಕ್ಕೆ ನೈಟ್‌ ಕರ್ಫ್ಯೂ ಅವಧಿಯಲ್ಲಿ ನಿಯಮಗಳನ್ನು ಸಡಿಲಗೊಳಿಸಲು ಆಗುವುದಿಲ್ಲ ಎಂದು ತಿಳಿಸಿದ್ದಾರೆ.

ರಾತ್ರಿ ವೇಳೆ ನಡೆಯುವಂತಹ ಯಕ್ಷಗಾನ, ಕಂಬಳಗಳನ್ನು ಬೇಗನೆ ಆರಂಭಿಸಿ, ನೈಟ್‌ ಕರ್ಫ್ಯೂ ಅವಧಿ ಆರಂಭವಾಗುವುದರೊಳಗೆ ಮುಗಿಸಬೇಕು. ನೈಟ್‌ ಕರ್ಫ್ಯೂ ನಿಯಮಗಳು ಇಡೀ ರಾಜ್ಯಕ್ಕೆ ಅನ್ವಯ ಆಗುವುದರಿಂದ, ನಿಯಮ ಸಡಿಲಗೊಳಿಸುವ ನಿರ್ಧಾರವೂ ಸರ್ಕಾರದ ಮಟ್ಟದಲ್ಲಿಯೇ ಆಗಬೇಕಾಗುತ್ತದೆ’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

 

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

4 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

4 hours ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

4 hours ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

4 hours ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

7 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

8 hours ago