ಮಂಗಳೂರು :ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ :ಮಣ್ಣಿನಡಿ ಸಿಲುಕಿ ಇಬ್ಬರು ಸಾವು -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ನಗರ ಬಂಟ್ಸ್ ಹಾಸ್ಟೆಲ್ ಬಳಿಯ ಉದ್ಯಮಿ ಎ ಜೆ ಶೆಟ್ಟಿ ಎಂಬುವರಿಗೆ ಸೇರಿದ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದ ಪರಿಣಾಮ, ಮಣ್ಣಿನಡಿ ಸಿಲುಕಿದ್ದ ಇಬ್ಬರು ಕಾರ್ಮಿಕ ಸಾವನ್ನಪ್ಪಿದ್ದರೇ, ಮತ್ತಿಬ್ಬರು ಕಾರ್ಮಿಕ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಅಲ್ಲದೇ ಇದೇ ಘಟನೆಯಲ್ಲಿ ನಾಲ್ವರು ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿ ದುರ್ಘಟನೆಯೊಂದು ಸಂಭವಿಸಿದೆ. ಕಟ್ಟಡ ಕಾಮಗಾರಿ ನಡೆಸುವ ವೇಳೆ ದಿಢೀರ್ ಮಣ್ಣು ಕುಸಿದ ಪರಿಣಾಮ, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಗಿ ಇಬ್ಬರು ಕಾರ್ಮಿಕರು ಮೃತ ಪಟ್ಟಿದ್ದರೇ, ಮತ್ತಿಬ್ಬರು ಕಾರ್ಮಿಕನ ರಕ್ಷಣೆಗಾಗಿ ರಕ್ಷಣಾ ಕಾರ್ಯ ಭರದಿಂದ ಸಾಗಿದೆ.

ಅಂದಹಾಗೇ ಉದ್ಯಮಿ ಎ ಜೆ ಶೆಟ್ಟಿ ಎಂಬುವರಿಗೆ ಸೇರಿದ ಕಟ್ಟಡ ಕಾಮಗಾರಿಯ ವೇಳೆ ಈ ದುರ್ಘಟನೆ ನಡೆದಿದ್ದು, ನಾಲ್ವರು ಕಾರ್ಮಿಕರು ಸಿನಿಮೀಯ ರೀತಿಯಲ್ಲಿ ಪಾರಾಗಿದ್ದಾರೆ. ಇದೀಗ ಮಣ್ಣಿನ ಅಡಿಯಲ್ಲಿ ಸಿಲುಕಿರುವ ಇಬ್ಬರು ಕಾರ್ಮಿಕರನ ರಕ್ಷಣೆಗಾಗಿ ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದಾರೆ.