ಮಂಗಳೂರು: ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮುಕ್ಕ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಿದ್ದಾರೆ. ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್ (25)ನನ್ನು ಬಂಧಿಸಲಾಗಿದೆ.
ಅನರುಲ್ ಶೇಖ್ ಮೂರು ವರ್ಷಗಳ ಹಿಂದೆ ಅಂತಾರಾಷ್ಟ್ರಿಯ ಗಡಿರೇಖೆ ಲಾಲ್ಗೋಲ್ ಮೂಲಕ ಅಕ್ರಮವಾಗಿ ಭಾರತದೊಳಗೆ ಪ್ರವೇಶಿಸಿದ್ದನು. ಬಳಿಕ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಿಂದ ಉಡುಪಿಗೆ ಬಂದಿದ್ದನು. ಇಲ್ಲಿಂದ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಕ್ಕ ಗ್ರಾಮದ ರೋಹನ್ ಎಸ್ಟೇಟ್ನಲ್ಲಿ ಅನರುಲ್ ಶೇಖ್ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನು.
ಅನರುಲ್ ಶೇಖ್ ಬಗ್ಗೆ ಖಚಿತ ಮಾಹಿತಿ ಪಡೆದ ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅನರುಲ್ ಶೇಖ್ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…