Featured

ಮಂಗಳೂರು: ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ – Vishwanews24

ಮಂಗಳೂರು: ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್

ಮಂಗಳೂರು: 2022-23ನೇ ಸಾಲಿನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಜಾರಿಯಿರುವ ಕಟ್ಟಡ ಕಾರ್ಮಿಕರಿಗೆ ರಿಯಾಯಿತಿ ಬಸ್ ಪಾಸ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಿ, ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿಯಲ್ಲಿ ನೋಂದಣಿಯಾಗಿರುವ ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮಾತ್ರ ಪಾಸುಗಳ ವಿತರಣೆ ಮಾಡಲಾಗುವುದು.
ಈ ಯೋಜನೆಯಡಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಯಾವುದೇ ಜಿಲ್ಲೆಯಲ್ಲಿ ನೋಂದಣಿಯಾಗಿದ್ದರೂ ಸಹಾ ಅವರು ಇಚ್ಛಿಸುವ ಪಾಸಿನಲ್ಲಿ ನಮೂದಿಸಲಾಗುವ ಪ್ರಾರಂಭಿಕ ಸ್ಥಳದಿಂದ ಗರಿಷ್ಟ 45 ಕಿ.ಮೀ ನಷ್ಟು ಯಾವುದೇ ಮಾರ್ಗದಲ್ಲಿಯಾದರೂ ಉಚಿತವಾಗಿ ಪ್ರಯಾಣಿಸಲು ಅವಕಾಶವಿರುತ್ತದೆ.

ಈ ಪಾಸುಗಳನ್ನು ಕರ್ನಾಟಕ ರಾಜ್ಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿಮಾಣ ಕಾರ್ಮಿಕ ಮಂಡಳಿಯು ಸರ್ಕಾರದ ಇಡಿಸಿಎಸ್ ಇಲಾಖೆಯ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‍ಲೈನ್‍ನಲ್ಲಿ ವಿತರಿಸಲಾಗುತ್ತದೆ.

ಅ.25ರೊಳಗೆ ತುಳು ಭಾಷೆ ರಾಜ್ಯ ಅಧಿಕೃತ ಭಾಷೆಯಾಗದಿದ್ದರೆ ನ.1ರಂದು ಉಡುಪಿ-ದ.ಕ ಜಿಲ್ಲೆ ಬಂದ್ : ತುಳು ಪರ ಹೋರಾಟಗಾರರ ಎಚ್ಚರಿಕೆ – Vishwanews24

ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಅವರ ಹತ್ತಿರವಿರುವ ಗ್ರಾಮ-1, ಕರ್ನಾಟಕ-1 ಕೇಂದ್ರಗಳ ಮುಖಾಂತರ ಅರ್ಜಿ ಸಲ್ಲಿಸಿ ಸ್ಮಾರ್ಟ್ ಕಾರ್ಡ್ ಮಾದರಿಯ ಬಸ್ ಪಾಸುಗಳನ್ನು ಪಡೆಯಬಹುದು. ಗ್ರಾಮ-1, ಕರ್ನಾಟಕ-1 ಕೇಂದ್ರಗಳಿಗೆ ಭೇಟಿ ನೀಡುವ ಕಾರ್ಮಿಕರು ತಮ್ಮ ನೋಂದಣಿಯಾದ ಕಾರ್ಮಿಕರ ನೋಂದಾಯಿತ ಫಲಾನುಭವಿಯ ಗುರುತಿನ ಹಾಗೂ ಆಧಾರಕಾರ್ಡ್‍ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯ ಮೊಬೈಲ್‍ನ್ನು ತೆಗೆದುಕೊಂಡು ಹೋಗಬೇಕು. ಗ್ರಾಮ- ಕೇಂದ್ರದಲ್ಲಿ ಫಲಾನುಭವಿಯ ಗುರುತಿನ ಚೀಟಿಯನ್ನು ದಾಖಲಿಸುತ್ತಿದ್ದಂತೆ ಅದರಲ್ಲಿ ನೋಂದಣಿಯಾದ ಮೊಬೈಲ್‍ಗೆ ಒಟಿಪಿ ಬರಲಿದ್ದು, ಆ ಒಟಿಪಿಯನ್ನು ದಾಖಲಿಸಿದರೆ ಅರ್ಜಿ ಸಲ್ಲಿಸಿದಂತಾಗುತ್ತದೆ.

ಉಚಿತ ಬಸ್ ಪಾಸು ಪಡೆದ ನೋಂದಾಯಿತ ಕಟ್ಟಡ ಮತ್ತು ಇತರೆ ನಿಮಾಣ ಕಾರ್ಮಿಕರು ಪಾಸಿನೊಂದಿಗೆ ಕರಾರಸಾ ನಿಗಮ ಅಥವಾ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಥವಾ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ನಗರ, ಸಾಮಾನ್ಯ ಅಥವಾ ಹೊರವಲಯ ಹಾಗೂ ವೇಗದೂತ ಬಸ್ಸುಗಳಲ್ಲಿ ಮಾತ್ರ ಪ್ರಯಾಣಿಸಲು ಅವಕಾಶವಿರುತ್ತದೆ.

ಪಾಸಿನ ಮಾನ್ಯತಾ ಅವಧಿ ಮೂರು ತಿಂಗಳಾಗಿರುತ್ತದೆ. ಮೂರು ತಿಂಗಳ ಚಾಲ್ತಿ ಅವಧಿ ಮುಕ್ತಾಯವಾದ ನಂತರ ಮರು ಅವಧಿಗೆ ಹೊಸದಾಗಿ ಅರ್ಜಿ ಸಲ್ಲಿಸಿ ಸೇವಾಸಿಂಧು ಪೋರ್ಟಲ್ ಮೂಲಕ ಪಾಸು ಪಡೆಯಲು ಅವಕಾಶ ಕಲ್ಪಿಸಲಾಗಿರುತ್ತದೆ.ಈ ಪಾಸುಗಳ ವಿತರಣೆ ನಿರ್ವಹಣೆ ಹಾಗೂ ಪಾಸಿನ ನವೀಕರಣ ಕೆಲಸವನ್ನು ರಾಜ್ಯದ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯವರು ನಿರ್ವಹಿಸಲಿದ್ದಾರೆ.

ಮೂಡುಬಿದಿರೆ : ಕಂಬಳ ಕ್ಷೇತ್ರದ ಸಾಧಕ ಯಜಮಾನ, ಸರಳ ಸಜ್ಜನಿಕೆ ವ್ಯಕ್ತಿತ್ವದ ಇರುವೈಲು ಪಾಣಿಲ ಬಾಡ ಪೂಜಾರಿ ನಿಧನ – Vishwanews24

ಪಾಸು ನವೀಕರಣದ ಸಮಯದಲ್ಲಿ ಕಾರ್ಮಿಕ ಕಲ್ಯಾಣ ಇಲಾಖೆಯವರು ನೀಡಿರುವ ಗುರುತಿನ ಚೀಟಿ ನವೀಕರಣವಾಗಿರುವುದನ್ನು ಕಡ್ಡಾಯವಾಗಿ ಪರಿಶೀಲನೆಗೆ ಒಳಪಡಿಸಿ ಪಾಸನ್ನು ಮುಂದಿನ ಅವಧಿಗೆ ಸೇವಾಸಿಂಧು ಇಲಾಖೆಯವರು ನವೀಕರಣ ಮಾಡಲಿದ್ದಾರೆ.

ಫಲಾನುಭವಿಯು ಉಚಿತ ಬಸ್ ಪಾಸನ್ನು ಕಳೆದುಕೊಂಡಲ್ಲಿ ಒಮ್ಮೆಗೆ ಮಾತ್ರ ಕರ್ನಾಟಕ-1 ಕೇಂದ್ರಕ್ಕೆ ತೆರಳಿ ಮನವಿ ಸಲ್ಲಿಸಿದಾಗ ತಂತ್ರಾಂಶವನ್ನು ಪರಿಶೀಲಿಸಿ ಬಸ್ ಪಾಸು ಅವಧಿಗೆ ಸ್ಮಾರ್ಟ್ ಕಾರ್ಡ್ ಮುದ್ರಣದ ವೆಚ್ಚವನ್ನು ಮಾತ್ರ ಪಡೆದು ಹೊಸದಾಗಿ ಪಾಸನ್ನು ಸೇವಾ ಸಿಂಧು ಸಂಸ್ಥೆಯವರು ನೀಡಲಿದ್ದಾರೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರಿನ ವ್ಯವಸ್ಥಾಪಕ ನಿರ್ದೇಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago