ಮಂಗಳೂರು :ಫೆ. 15 ರಿಂದ ಫೆ.16ರ ರಾತ್ರಿ 8.30 ರವರೆಗೆ ಕಡಲಬ್ಬರ ಹೆಚ್ಚಾಗಲಿದೆ ಎಂದು ಕೇಂದ್ರ ಸಮುದ್ರ ಸ್ಥಿತಿ ಅಧ್ಯಯನ ಸಂಶೋಧನಾ ಕೇಂದ್ರ (ಐನ್ ಸಿಓಐಎಸ್)ಎಚ್ಚರಿಕೆ ನೀಡಿದೆ.
ಕರ್ನಾಟಕ, ಕೇರಳ, ಲಕ್ಷದೀಪ, ತಮಿಳುನಾಡು, ಗೋವಾ, ಮಹಾರಾಷ್ಟ್ರ, ಸಮುದ್ರದಲ್ಲಿ ಕಡಲು ಅಬ್ಬರದಿಂದ ಕೂಡಿರುವ ಸಾಧ್ಯತೆ ಇದೆ .ಆದುದರಿಂದ ಮೀನುಗಾರರು ಮತ್ತು ಕಿನಾರೆಯ ಜನರು ಎಚ್ಚರಿಕೆ ವಹಿಸಬೇಕು ಎಂದು ಹೇಳಿದೆ.
ಈ ಅವಧಿಯಲ್ಲಿ ಕಡಲಿನಲ್ಲಿ ಭಾರಿ ಗಾತ್ರದ ಅಲೆಗಳು ಉಂಟಾಗುವ ಸಾಧ್ಯತೆ ಇದೆ. ಕೇರಳ ಕಿನಾರೆಯಲ್ಲಿ ಎರಡು ಮೀಟರ್ ವರೆಗೆ ಮತ್ತು ಕರ್ನಾಟಕ ಕಿನಾರೆಯಲ್ಲಿ 1.8 ಮೀಟರ್ ಎತ್ತರದವರೆಗಿನ ಅಲೆಗಳು ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಈ ವೇಳೆ ಕಡಲ ಕೊರೆತ ಮತ್ತು ಸಮುದ್ರ ಅಬ್ಬರದಿಂದ ಅನಾಹುತವಾಗುವ ಸಾಧ್ಯತೆಯಿದ್ದು ಸಮುದ್ರ ಕಿನಾರೆಯಲ್ಲಿ ವಾಸಿಸುವ ಮನೆಯವರು ಕರಾವಳಿಯಿಂದ ತಾತ್ಕಾಲಿಕ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ವಿನಂತಿಸಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…