ಮಂಗಳೂರು: ನಗರದ ಲೇಡಿಹಿಲ್ನ ರಸ್ತೆ ತಿರುವಿನಲ್ಲಿದ್ದ ಮರವೊಂದನ್ನು ಬುಡಸಮೇತ ಬೇರೆಡೆಗೆ ಸ್ಥಳಾಂತರಗೊಳಿಸಿ ಪರಿಸರ ಪ್ರೀತಿ ಮೆರೆಯಲಾಗಿದೆ. ಲೇಡಿಹಿಲ್ ಬಳಿ ಚಿಲಿಂಬಿಗೆ ತಿರುಗುವ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣದಿಂದ “ಪೆಲ್ಟೋಫೋರಂ’ ಜಾತಿಗೆ ಸೇರಿದ ಮರವನ್ನು ಕಡಿಯಲು ಮಹಾನಗರ ಪಾಲಿಕೆ ನಿರ್ಧರಿಸಿತ್ತು.
ಆದರೆ ಇದಕ್ಕೆ ಸ್ಥಳೀಯರಿಂದ ಹಾಗೂ ಎನ್ಇಸಿಎಫ್ ಪರಿಸರ ಪರ ಸಂಘಟನೆ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯು ಮರ ಕಡಿಯುವ ನಿರ್ಧಾರವನ್ನು ಕೈಬಿಟ್ಟು ಅದನ್ನು ಬುಡಸಮೇತ ಜೀವಂತವಾಗಿ ಇನ್ನೊಂದಡೆಗೆ ಸ್ಥಳಾಂತರಿಸಲು ನಿರ್ಧರಿಸಿತು.
ಸೋಮವಾರ ಪಾಲಿಕೆ ಸಿಬಂದಿ ಕಾರ್ಯಾಚರಣೆ ನಡೆಸಿ ಕ್ರೇನ್ ಮೂಲಕ ಮರವನ್ನು ಪಕ್ಕದ ಖಾಲಿ ಜಾಗಕ್ಕೆ ಸ್ಥಳಾಂತರಿಸಿ ನೆಡಲಾಯಿತು. ಪಾಲಿಕೆಯ ಅಧಿಕಾರಿಗಳು, ಎನ್ಇಸಿಎಫ್ನ ಕಾರ್ಯಕರ್ತರಾದ ಶಶಿಧರ ಶೆಟ್ಟಿ , ಜೀತ್ ಮಿಲನ್, ರೋಹನ್ ಸಿರಿ ಮತ್ತಿತರರು ಈ ವೇಳೆ ಇದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…