ಮಂಗಳೂರು: ನಗರದ ಲೇಡಿಹಿಲ್ನ ರಸ್ತೆ ತಿರುವಿನಲ್ಲಿದ್ದ ಮರವೊಂದನ್ನು ಬುಡಸಮೇತ ಬೇರೆಡೆಗೆ ಸ್ಥಳಾಂತರಗೊಳಿಸಿ ಪರಿಸರ ಪ್ರೀತಿ ಮೆರೆಯಲಾಗಿದೆ. ಲೇಡಿಹಿಲ್ ಬಳಿ ಚಿಲಿಂಬಿಗೆ ತಿರುಗುವ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣದಿಂದ “ಪೆಲ್ಟೋಫೋರಂ’ ಜಾತಿಗೆ ಸೇರಿದ ಮರವನ್ನು ಕಡಿಯಲು ಮಹಾನಗರ ಪಾಲಿಕೆ ನಿರ್ಧರಿಸಿತ್ತು.
ಆದರೆ ಇದಕ್ಕೆ ಸ್ಥಳೀಯರಿಂದ ಹಾಗೂ ಎನ್ಇಸಿಎಫ್ ಪರಿಸರ ಪರ ಸಂಘಟನೆ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯು ಮರ ಕಡಿಯುವ ನಿರ್ಧಾರವನ್ನು ಕೈಬಿಟ್ಟು ಅದನ್ನು ಬುಡಸಮೇತ ಜೀವಂತವಾಗಿ ಇನ್ನೊಂದಡೆಗೆ ಸ್ಥಳಾಂತರಿಸಲು ನಿರ್ಧರಿಸಿತು.
ಸೋಮವಾರ ಪಾಲಿಕೆ ಸಿಬಂದಿ ಕಾರ್ಯಾಚರಣೆ ನಡೆಸಿ ಕ್ರೇನ್ ಮೂಲಕ ಮರವನ್ನು ಪಕ್ಕದ ಖಾಲಿ ಜಾಗಕ್ಕೆ ಸ್ಥಳಾಂತರಿಸಿ ನೆಡಲಾಯಿತು. ಪಾಲಿಕೆಯ ಅಧಿಕಾರಿಗಳು, ಎನ್ಇಸಿಎಫ್ನ ಕಾರ್ಯಕರ್ತರಾದ ಶಶಿಧರ ಶೆಟ್ಟಿ , ಜೀತ್ ಮಿಲನ್, ರೋಹನ್ ಸಿರಿ ಮತ್ತಿತರರು ಈ ವೇಳೆ ಇದ್ದರು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…