ಮಂಗಳೂರು: ನಗರದ ಲೇಡಿಹಿಲ್ನ ರಸ್ತೆ ತಿರುವಿನಲ್ಲಿದ್ದ ಮರವೊಂದನ್ನು ಬುಡಸಮೇತ ಬೇರೆಡೆಗೆ ಸ್ಥಳಾಂತರಗೊಳಿಸಿ ಪರಿಸರ ಪ್ರೀತಿ ಮೆರೆಯಲಾಗಿದೆ. ಲೇಡಿಹಿಲ್ ಬಳಿ ಚಿಲಿಂಬಿಗೆ ತಿರುಗುವ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣದಿಂದ “ಪೆಲ್ಟೋಫೋರಂ’ ಜಾತಿಗೆ ಸೇರಿದ ಮರವನ್ನು ಕಡಿಯಲು ಮಹಾನಗರ ಪಾಲಿಕೆ ನಿರ್ಧರಿಸಿತ್ತು.
ಆದರೆ ಇದಕ್ಕೆ ಸ್ಥಳೀಯರಿಂದ ಹಾಗೂ ಎನ್ಇಸಿಎಫ್ ಪರಿಸರ ಪರ ಸಂಘಟನೆ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯು ಮರ ಕಡಿಯುವ ನಿರ್ಧಾರವನ್ನು ಕೈಬಿಟ್ಟು ಅದನ್ನು ಬುಡಸಮೇತ ಜೀವಂತವಾಗಿ ಇನ್ನೊಂದಡೆಗೆ ಸ್ಥಳಾಂತರಿಸಲು ನಿರ್ಧರಿಸಿತು.
ಸೋಮವಾರ ಪಾಲಿಕೆ ಸಿಬಂದಿ ಕಾರ್ಯಾಚರಣೆ ನಡೆಸಿ ಕ್ರೇನ್ ಮೂಲಕ ಮರವನ್ನು ಪಕ್ಕದ ಖಾಲಿ ಜಾಗಕ್ಕೆ ಸ್ಥಳಾಂತರಿಸಿ ನೆಡಲಾಯಿತು. ಪಾಲಿಕೆಯ ಅಧಿಕಾರಿಗಳು, ಎನ್ಇಸಿಎಫ್ನ ಕಾರ್ಯಕರ್ತರಾದ ಶಶಿಧರ ಶೆಟ್ಟಿ , ಜೀತ್ ಮಿಲನ್, ರೋಹನ್ ಸಿರಿ ಮತ್ತಿತರರು ಈ ವೇಳೆ ಇದ್ದರು.
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…
ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ : ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…
ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು ಉಡುಪಿ: ಕರಾವಳಿಯಲ್ಲಿ ನಿರೀಕ್ಷಿತ ಮುಂಗಾರು ಮಳೆಯಾಗದ ಕಾರಣ ಈ ಋತುವಿನಲ್ಲಿ…
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…