ಮಂಗಳೂರು: ನಗರದ ಲೇಡಿಹಿಲ್ನ ರಸ್ತೆ ತಿರುವಿನಲ್ಲಿದ್ದ ಮರವೊಂದನ್ನು ಬುಡಸಮೇತ ಬೇರೆಡೆಗೆ ಸ್ಥಳಾಂತರಗೊಳಿಸಿ ಪರಿಸರ ಪ್ರೀತಿ ಮೆರೆಯಲಾಗಿದೆ. ಲೇಡಿಹಿಲ್ ಬಳಿ ಚಿಲಿಂಬಿಗೆ ತಿರುಗುವ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣದಿಂದ “ಪೆಲ್ಟೋಫೋರಂ’ ಜಾತಿಗೆ ಸೇರಿದ ಮರವನ್ನು ಕಡಿಯಲು ಮಹಾನಗರ ಪಾಲಿಕೆ ನಿರ್ಧರಿಸಿತ್ತು.
ಆದರೆ ಇದಕ್ಕೆ ಸ್ಥಳೀಯರಿಂದ ಹಾಗೂ ಎನ್ಇಸಿಎಫ್ ಪರಿಸರ ಪರ ಸಂಘಟನೆ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯು ಮರ ಕಡಿಯುವ ನಿರ್ಧಾರವನ್ನು ಕೈಬಿಟ್ಟು ಅದನ್ನು ಬುಡಸಮೇತ ಜೀವಂತವಾಗಿ ಇನ್ನೊಂದಡೆಗೆ ಸ್ಥಳಾಂತರಿಸಲು ನಿರ್ಧರಿಸಿತು.
ಸೋಮವಾರ ಪಾಲಿಕೆ ಸಿಬಂದಿ ಕಾರ್ಯಾಚರಣೆ ನಡೆಸಿ ಕ್ರೇನ್ ಮೂಲಕ ಮರವನ್ನು ಪಕ್ಕದ ಖಾಲಿ ಜಾಗಕ್ಕೆ ಸ್ಥಳಾಂತರಿಸಿ ನೆಡಲಾಯಿತು. ಪಾಲಿಕೆಯ ಅಧಿಕಾರಿಗಳು, ಎನ್ಇಸಿಎಫ್ನ ಕಾರ್ಯಕರ್ತರಾದ ಶಶಿಧರ ಶೆಟ್ಟಿ , ಜೀತ್ ಮಿಲನ್, ರೋಹನ್ ಸಿರಿ ಮತ್ತಿತರರು ಈ ವೇಳೆ ಇದ್ದರು.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…