Featured

ಮಂಗಳೂರು: ಕದ್ರಿ ಪಾರ್ಕ್‌ನಿಂದ ಲಾಲ್‌ ಭಾಗ್‌ ಸಂಪರ್ಕಿಸುವ ಮುಖ್ಯ ರಸ್ತೆಗೆ ಜಾರ್ಜ್ ಫೆರ್ನಾಂಡಿಸ್ ಹೆಸರು ನಾಮಕರಣ ಮಾಡಬೇಕು : ಕೊಂಕಣಿ ಲೇಖಕರ ಸಂಘ ಒತ್ತಾಯ – Vishwanews24

ಮಂಗಳೂರು: ಕದ್ರಿ ಪಾರ್ಕ್‌ನಿಂದ ಲಾಲ್‌ ಭಾಗ್‌ ಸಂಪರ್ಕಿಸುವ ಮುಖ್ಯ ರಸ್ತೆಗೆ ಜಾರ್ಜ್ ಫೆರ್ನಾಂಡಿಸ್ ಹೆಸರು ನಾಮಕರಣ ಮಾಡಬೇಕು : ಕೊಂಕಣಿ ಲೇಖಕರ ಸಂಘ ಒತ್ತಾಯ

ಮಂಗಳೂರು: ಕೇಂದ್ರದ ಮಾಜಿ ಸಚಿವ, ಕರಾವಳಿ ಕುವರ ದಿವಂಗತ ಜಾರ್ಜ್ ಫೆರ್ನಾಂಡಿಸ್ ಅವರ ಹೆಸರನ್ನು ಕದ್ರಿ ಪಾರ್ಕ್‌ನಿಂದ ಲಾಲ್‌ ಭಾಗ್‌ ಸಂಪರ್ಕಿಸುವ ಮುಖ್ಯ ರಸ್ತೆಗೆ ಜಾರ್ಜ್ ಫೆರ್ನಾಂಡಿಸ್ ಹೆಸರು ನಾಮಕರಣ ಮಾಡಬೇಕು ಎಂದು ಕೊಂಕಣಿ ಲೇಖಕರ ಸಂಘ ಒತ್ತಾಯಿಸಿದೆ.

ಈ ಬಗ್ಗೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಂಕಣಿ ಲೇಖಕರ ಸಂಘದ ಸಂಚಾಲಕ ರಿಚರ್ಡ್ ಮೊರಾಸ್ ಮಾತನಾಡಿ,

ಮಂಗಳೂರು ಕದ್ರಿ ಪಾರ್ಕ್ ನಿಂದ ಲಾಲ್ ಭಾಗ್‌ ಸಂಪರ್ಕಿಸುವ ಮುಖ್ಯ ರಸ್ತೆಗೆ ನಾಮಕರಣ ಮಾಡಬೇಕೆಂದು ಜಾಜ್ ಅವರ ಅಭಿಮಾನಿ ಬಳಗದ ಒತ್ತಾಸೆಯಾಗಿದೆ.

ಬಡ ಜನಸಾಮಾನ್ಯರ ಪಾಲಿನ ಹೀರೋ ಆಗಿದ್ದ ಜಾರ್ಜ್ ಫೆನಾಂಡಿಸ್ ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಟ ಮಾಡಿದವರು.1967ರಿಂದ 2004ರವರೆಗೆ 9 ಬಾರಿ ಲೋಕಸಭಾ ಚುನಾವಣೆಗಳಲ್ಲಿ ಜಯಗಳಿಸಿ, ರಾಷ್ಟ್ರೀಯ ನಾಯಕರಾಗಿ ಜನಸೇವೆಗೈದಿದ್ದಾರೆ. ಜಾರ್ಜ್ ಫೆರ್ನಾಂಡಿಸ್‌ರವರು ಕೇಂದ್ರ ಸಂಪುಟದಲ್ಲಿ ಸಂವಹನ, ಕೈಗಾರಿಕೆ, ರೈಲ್ವೇ ಮತ್ತು ರಕ್ಷಣಾ ಸಚಿವರಾಗಿ ಪ್ರಮುಖ ಸ್ಥಾನಗಳನ್ನು ನಿಭಾಯಿಸಿದ್ದಾರೆ.

ಮುಂಬೈ ಮತ್ತು ಕರಾವಳಿಯ ಕೊಂಡಿಯಾಗಿರುವ ಕೊಂಕಣ ರೈಲ್ವೆಯ ವಾಸ್ತುಶಿಲ್ಪಿಯಾಗಿರುವ ಅವರು, ಏಷ್ಯಾದ 2ನೆ ಅತೀ ದೊಡ್ಡ ರೈಲ್ವೇ ಜಾಲವನ್ನು ಯೋಜಿಸಿ, ಕಾರ್ಯಗತಗೊಳಿಸುವಲ್ಲಿ ಶ್ರಮಿಸಿದ್ದಾರೆ.

ರಕ್ಷಣಾ ಮಂತ್ರಿಯಾಗಿ ಕಾರ್ಗಿಲ್ ಯುದ್ಧ, ಪೋಖ್ರಾನ್ 2 ಪರಮಾಣ ಪರೀಕ್ಷೆಯನ್ನು ಯಶಸ್ವಿಯಾಗಿ ನೆರವೇರಿಸಿದ್ದಾರೆ.

ಅವರು ಉತ್ತಮ ಆಡಳಿತಗಾರ, ಪ್ರಬಲ ವಾಗ್ಮಿಯೂ ಆಗಿದ್ದಾರೆ. ಅವರ ಹೆಸರನ್ನು ಅವರ ಹುಟ್ಟೂರಿನ ರಸ್ತೆಗೆ ಇಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಒತ್ತಾಯಿಸಿದರು.

ಕೊಂಕಣಿ ಕವಿ ಟೈಟಸ್ ನೊರೊನ್ನಾ, ಮಾಜಿ ಮೇಯರ್ ದಿವಾಕರ್, ಲಯನ್ಸ್ ಕ್ಲಬ್ ಇಂಟರ್‌ ನ್ಯಾಷನಲ್‌ನ ಜಿಲ್ಲಾ ಮಾಜಿ ಗವರ್ನರ್ ರೊನಾಲ್ಡ್ ಗೋಮ್ಸ್, ಲೇಖಕ ಮತ್ತು ಅಂಕಣಕಾರ ವಿಲಿಯಂ ಪಾಯ್ಸ್ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

11 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

13 hours ago