ಮಂಗಳೂರು: ಡಾ.ಕದ್ರಿ ಗೋಪಾಲನಾಥ್ ಅಕಾಡೆಮಿ ಫಾರ್ ಆರ್ಟ್ಸ್ (ರಿ) ಆಶ್ರಯದಲ್ಲಿ ಡಿ. 6 ಇಂದು ಪದ್ಮಶ್ರೀ ಡಾ. ಕದ್ರಿ ಗೋಪಾಲನಾಥ್ ಅವರ 73ನೇ ಜನ್ಮ ಜಯಂತಿಯ ಪ್ರಯುಕ್ತ ಕದ್ರಿ ಸಂಗೀತ ಸೌರಭ 2022 ಹಮ್ಮಿಕೊಳ್ಳಲಾಗಿದೆ. ಈ ಬಾರಿಯ ಕದ್ರಿ ಸಂಗೀತ ಸೌರಭ ಜೀವಮಾನ ಶ್ರೇಷ್ಠ ರಾಷ್ಟ್ರ ಪ್ರಶಸ್ತಿಗೆ ಸಂಗೀತ ವಿದ್ವಾನ್ ಎಂ.ನಾರಾಯಣ ಅವರನ್ನು ಆಯ್ಕೆ ಮಾಡಲಾಗಿದೆ.
ಮೂಡಬಿದ್ರೆಯಲ್ಲಿ ಜನಿಸಿದ ಎಂ.ನಾರಾಯಣ ಅವರು ಒಬ್ಬ ಅಪ್ರತಿಮ ಕಲಾವಿದರು. ಪ್ರಸ್ತುತ ಸುರತ್ಕಲ್ ನ ಶ್ರೀಗಣೇಶ್ ಸಂಗೀತ ಮತ್ತು ನೃತ್ಯ ಕಲಾಶಾಲೆಯಲ್ಲಿ ಕಳೆದ 25 ವರ್ಷಗಳಿಂದ ಸಂಗೀತ ಪ್ರಾಧ್ಯಾಪಕರಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಸಂಗೀತ ಶಿಕ್ಷಣವನ್ನು ನೀಡುತ್ತಿದ್ದಾರೆ. ಓರ್ವ ಖ್ಯಾತ ಸಂಗೀತ ರಚನಕಾರರಾಗಿರುವ ಇವರು ನಾರಾಯಣದಾಸ ನಾಮಾಂಕಿತದಲ್ಲಿ ಈವರೆಗೆ ವಿವಿಧ ರಾಗ ತಾಳಗಳಲ್ಲಿ 25 ಜತಿ ಸ್ವರಗಳು, 75 ತಾಣ ವರ್ಣಗಳು, 4 ಸ್ವರ ಜತಿಗಳು, 200 ಕೃತಿಗಳು ಹಾಗೂ 15 ತಿಲ್ಲಾನಗಳನ್ನು ಕನ್ನಡ, ತೆಲುಗು ಹಾಗೂ ಸಂಸ್ಕೃತದಲ್ಲಿ ರಚಿಸಿದ್ದಾರೆ.
72 ಮೇಳಕರ್ತ ರಾಗಗಳಲ್ಲೂ ಕೂಡ ಕೃತಿ ರಚನೆ ಮಾಡಿರುವ ಕರ್ನಾಟಕದ ಕೆಲವೇ ಕೆಲವು ರಚನಕಾರರಲ್ಲಿ ಇವರು ಒಬ್ಬರು. ಎಂ.ನಾರಾಯಣ ಶ್ರೀಮಹಾಗಣಪತಿಯ ಮೇಲೆ 47 ಕೃತಿಗಳ ರಚನೆ ಮಾಡಿದ್ದಾರೆ. ಇದೀಗ ನಾರಾಯಣ ಅವರ ಅಪರಿಮಿತ ಸಾಧನೆಯನ್ನು ಗುರುತಿಸಿ ಡಾ.ಕದ್ರಿ ಗೋಪಾಲನಾಥ್ ಅಕಾಡೆಮಿ ಫಾರ್ ಆರ್ಟ್ಸ್ ವತಿಯಿಂದ ಕದ್ರಿ ಸಂಗೀತ ಸೌರಭ 2022ರ ಜೀವಮಾನ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಪ್ರಶಸ್ತಿಯು 50,000 ನಗದು ಹಾಗೂ ಬೆಳ್ಳಿಯ ಫಲಕ ಹೊಂದಿದೆ. 2022ರ ಡಿಸೆಂಬರ್ 6 ಇಂದು ಸಂಜೆ 5:30ಕ್ಕೆ ಮಂಗಳೂರು ಉರ್ವಸ್ಟೋರ್ ಬಳಿಯ ಇರುವ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ ಎಂದು ಡಾ.ಕದ್ರಿ ಗೋಪಾಲನಾಥ್ ಅಕಾಡೆಮಿ ಫಾರ್ ಆರ್ಟ್ಸ್(ರಿ)ನ ಪ್ರಧಾನ ಕಾರ್ಯದರ್ಶಿ ಕದ್ರಿ ಮಣಿಕಾಂತ್ ತಿಳಿಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…