Featured

ಮಂಗಳೂರು ಕನ್ನಡ ರಾಜ್ಯೋತ್ಸವ : ಧ್ವಜಾರೋಹಣ ನೆರವೇರಿಸಿದ ಸಚಿವ ಅಂಗಾರ – Vishwanews24

ಮಂಗಳೂರು ಕನ್ನಡ ರಾಜ್ಯೋತ್ಸವ : ಧ್ವಜಾರೋಹಣ ನೆರವೇರಿಸಿದ ಸಚಿವ ಅಂಗಾರ – Vishwanews24

ಮಂಗಳೂರು : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ನ.01ರ ಸೋಮವಾರ ಮಂಗಳೂರು ನಗರದ ನೆಹರೂ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.

ಆ ಬಳಿಕ ಮಾತನಾಡಿದ ಸಚಿವರು, ಕನ್ನಡ ರಾಜ್ಯೋತ್ಸವ ಶುಭಾಷಯಗಳನ್ನು ತಿಳಿಸಿ, ಕೋವಿಡ್-19 ಸೋಂಕಿನ ಎರಡನೇ ಅಲೆ ನಿರ್ವಹಣೆಯಲ್ಲಿ ಜೀವದ ಹಂಗು ತೊರೆದು ತಮ್ಮನ್ನು ತೊಡಗಿಸಿಕೊಂಡಿರುವ ವೈದ್ಯರು, ಶುಶ್ರೂಷಕರು, ಇತರ ವೈದ್ಯಕೇತರ ಸಿಬ್ಬಂದಿ, ಪೊಲೀಸರು, ಜಿಲ್ಲಾ ಆಡಳಿತ, ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಯವರನ್ನು ಕೃತಜ್ಞತಾ ಪೂರ್ವಕವಾಗಿ ನೆನೆದರು.

ಆರೋಗ್ಯ ಇಲಾಖೆಯೂ ಸಂಭಾವ್ಯ ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಜಿಲ್ಲೆಯಲ್ಲಿ ಈಗಾಗಲೇ 12 ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳು ಹಾಗೂ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ತಲಾ 5 ಬೆಡ್‌ಗಳಿಗೆ ಐಸಿಯು ವೆಂಟಿಲೇಟರ್ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದರು.

ಪ್ರವಾಸೋದ್ಯಮ ಇಲಾಖೆಯಿಂದ ಪಣಂಬೂರು, ತಣ್ಣೀರು ಬಾವಿ, ಸೊಮೇಶ್ವರ, ತಲಪಾಡಿ, ಸಸಿಹಿತ್ಲು, ಸುರತ್ಕಲ್, ಉಳ್ಳಾಲ ಹಾಗೂ ಮುಕ್ಕ ಕಡಲ ತೀರಗಳಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.

ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಕಟೀಲು ದುರ್ಗಾಪರಮೇಶ್ವರಿ, ಕದ್ರಿ ಮಂಜುನಾಥ, ಉರ್ವಾ ಮಾರಿಯಮ್ಮ, ಮಂಗಳಾದೇವಿ, ಪೊಳಲಿ ರಾಜರಾಜೇಶ್ವರಿ, ಧರ್ಮಸ್ಥಳ, ಸೌತಡ್ಕ ಗಣಪತಿ, ಮರೋಳಿ ಸೂರ್ಯ ನಾರಾಯಣ ದೇವಸ್ಥಾನ ಸೇರಿದಂತೆ ಇತರೆ ಪ್ರವಾಸಿ ತಾಣಗಳಿಗೆ ಯಾತ್ರಿ ನಿವಾಸ, ರಸ್ತೆ, ಶೌಚಾಲಯಗಳು ಸೇರಿದಂತೆ 23.6 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಂಡ ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿವೆ.

ಇನ್ನು ಈಗಾಗಲೇ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರಕಾರದ ಅನುಮೋದನೆ ದೊರೆತಿದೆ. ಅದರಿಂದ ಪ್ಲಾಸ್ಟಿಕ್ ಆಧಾರಿತ ಆಧುನಿಕ ಉತ್ಫನ್ನಗಳನ್ನು ತಯಾರಿಸುವ ಕೈಗಾರಿಕೆಗಳ ಸ್ಥಾಪನೆಗೆ ಪೂರಕ ವಾತಾವರಣ ನಿರ್ಮಾಣವಾಗಲಿದ್ದು, ಸಾಕಷ್ಟು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಹೇಳಿದರು.

ಸರಕಾರಿ ಗೋಶಾಲೆ ನಿರ್ಮಿಸಲು ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ 98.45 ಎಕರೆ ಪ್ರದೇಶವನ್ನು ಮೀಸಲಿಡಲಾಗಿದ್ದು, 24 ಲಕ್ಷ ರೂ,ಗಳ ಅನುದಾನ ಬಿಡುಗಡೆಯಾಗಿದೆ. ಮುಖ್ಯಮಂತ್ರಿಗಳ ಕೋವಿಡ್ ಪ್ಯಾಕೇಜ್-೨ ನಲ್ಲಿ ಘೋಷಿಸಿದಂತೆ ತಲಾ ಮೂರು ಸಾವಿರ ರೂ.ಗಳಂತೆ 1558 ಮೀನುಗಾರರಿಗೆ 46.74 ಲಕ್ಷ ರೂ. ಗಳನ್ನು ಪರಿಹಾರ ವಿತರಿಸಲಾಗಿದೆ.

ಆಳ ಸಮುದ್ರ ಮೀನುಗಾರಿಕೆಯ ಬಲವರ್ಧನೆಗೆ ಪ್ರೋತ್ಸಾಹ ನೀಡುತಿದ್ದು, 72 ಲಕ್ಷ ರೂ. ಗಳ ಸಹಾಯಧನವನ್ನು ಅರ್ಹ ಫಲಾನುಭವಿಗಳಿಗೆ ನೀಡಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೇರಿದಂತೆ ಅಧಿಕಾರಿಗಳು ಹಾಗೂ ಕನ್ನಡ ಅಭಿಮಾನಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

1 day ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

1 day ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

1 day ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

1 day ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

1 day ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

1 day ago