Featured

ಮಂಗಳೂರು ಕಪಿಲ ಗೋಶಾಲೆ :ತಾತ್ಕಾಲಿಕ ನಿರ್ಮಾಣಕ್ಕಾಗಿ 1 ಲಕ್ಷ ರೂ. ಚೆಕ್‌ ನೀಡಿದ ಮೋಯ್ದಿನ್‌ ಬಾವಾ -Vishwanews24

ಮಂಗಳೂರು ಕಪಿಲ ಗೋಶಾಲೆ :ತಾತ್ಕಾಲಿಕ ನಿರ್ಮಾಣಕ್ಕಾಗಿ 1 ಲಕ್ಷ ರೂ. ಚೆಕ್‌ ನೀಡಿದ ಮೋಯ್ದಿನ್‌ ಬಾವಾ -Vishwanews24

ಮಂಗಳೂರು: ತಾತ್ಕಾಲಿಕ ಗೋಶಾಲೆ ನಿರ್ಮಾಣಕ್ಕಾಗಿ ಕಪಿಲ ಗೋಶಾಲೆ ಮಾಲೀಕ ಪ್ರಕಾಶ್‌ ಶೆಟ್ಟಿಯವರಿಗೆ ಮಾಜಿ ಶಾಸಕ ಮೋಯ್ದಿನ್‌ ಬಾವಾ ಅವರು ಒಂದು ಲಕ್ಷ ರೂಪಾಯಿ ಚೆಕ್‌ನ್ನು ಹಸ್ತಾಂತರ ಮಾಡಿದರು.

ಮಾರ್ಚ್ 20 ರ ಶನಿವಾರ ಇಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಮೋಯ್ದಿನ್ ಬಾವಾ, ”ಗೋವಿನ ಹೆಸರಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಆದರೆ ಈ ಆಡಳಿತವೇ ಕಪಿಲ ಗೋಶಾಲೆಯನ್ನು ಕೆಡವಿದ್ದು ಈಗ ಗೋವುಗಳು ಸಂಕಷ್ಟದಲ್ಲಿವೆ. ಗೋ ಶಾಲೆ ಕೆಡವಿದ್ದರಿಂದ ನಾವು ತುಂಬಾ ದುಃಖಿತರಾಗಿದ್ದೇವೆ. ಬಿಜೆಪಿ ಸರ್ಕಾರ ಗೋ ಶಾಲೆ ಕೆಡವಿ ಬಳಿಕ ಆ ಗೋವುಗಳಿಗೆ ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸಿಲ್ಲ. ಶಾಸಕರ ಸಮ್ಮುಖದಲ್ಲಿ ಜಿಲ್ಲಾ ಪಂಚಾಯತ್ ಸಭೆಯಲ್ಲಿ ಗೋಶಾಲೆಯನ್ನು ನೆಲಸಮಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ಹೇಳಿದ್ದು, ”ಗೋ ಶಾಲೆಗಾಗಿ ಅರ್ಧ ಎಕರೆ ಜಮೀನು ನೀಡಬೇಕೆಂದು ನಾವು ಜಿಲ್ಲಾಧಿಕಾರಿ ಅವರಲ್ಲಿ ಒತ್ತಾಯಿಸುತ್ತೇವೆ. ಈ ವಿಷಯದಲ್ಲಿ ಶಾಸಕರು ಏನು ಮಾಡುತ್ತಿದ್ದಾರೆ ಹಾಗೂ ರಾಜ್ಯ ಸರ್ಕಾರ ಏನು ಮಾಡುತ್ತಿದೆ” ಎಂದು ಪ್ರಶ್ನಿಸಿದರು.

ಇದನ್ನೂ ಓದಿ : ಸುಳ್ಳು ಹೇಳಲು ನಾನು ಮೋದಿಯಲ್ಲ , ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸಿಎಎ ಹಿಂದೆಗೆಯಲಾಗುವುದು : ರಾಹುಲ್‌ ಗಾಂಧಿ -Vishwanews24

”ಗೋ ಶಾಲೆ ಕೆಡವಿ 20 ದಿನಗಳು ಕಳೆದಿದ್ದರೂ ಜಿಲ್ಲಾಡಳಿತ ಇನ್ನೂ ಯಾವುದೇ ವ್ಯವಸ್ಥೆ ಮಾಡಿಲ್ಲ. ತಾತ್ಕಾಲಿಕ ಗೋಶಾಲೆ ನಿರ್ಮಾಣಕ್ಕಾಗಿ ನಾನು ಕಪಿಲ ಗೋಶಾಲೆಗೆ ಒಂದು ಲಕ್ಷ ರೂ. ಹಸ್ತಾಂತರಿಸುತ್ತೇನೆ. ಕಪಿಲ ಗೋಶಾಲೆಗೆ ಸಹಾಯ ಮಾಡಲು ಸಹಕರಿಸಲು ನಾನು ಸದಾ ಸಿದ್ಧನಿದ್ದೇನೆ. ಈ ಗೋಶಾಲೆಗೆ 5 ಲಕ್ಷ ರೂ.ಗಳನ್ನು ನೀಡುವಂತೆ ನಾನು ಎಂಎಲ್‌ಸಿ ಅವರಲ್ಲಿಯೂ ವಿನಂತಿಸುತ್ತೇನೆ” ಎಂದು ಹೇಳಿದರು.

ಕಪಿಲ ಗೋಶಾಲೆ ಮಾಲೀಕ ಪ್ರಕಾಶ್ ಶೆಟ್ಟಿ ಮಾತನಾಡಿ, ”ಗೋ ಶಾಲೆ ಕೆಡವಿದ ನಂತರ 300 ಹಸುಗಳನ್ನು ರಾತ್ರೋರಾತ್ರಿ ಸ್ಥಳಾಂತರಿಸುವುದು ತುಂಬಾ ಕಷ್ಟ. ಸರ್ಕಾರದ ಯಾವುದೇ ಹಣವನ್ನು ತೆಗೆದುಕೊಳ್ಳದೆ ನಾವು ಗೋವುಗಳನ್ನು ಸ್ವತಂತ್ಯ್ರವಾಗಿ, ಎಲ್ಲಾ ಸೌಲಭ್ಯವನ್ನು ಒದಗಿಸಿ ನೋಡಿಕೊಂಡಿದ್ದೇವೆ. ಭವಿಷ್ಯದ ಪೀಳಿಗೆಗೆ ಈ ಅಪರೂಪದ ತಳಿಯನ್ನು ಸಂರಕ್ಷಿಸುವ ಸಲುವಾಗಿ ನಾವು 8 ವರ್ಷಗಳಿಂದ ಈ ಗೋಶಾಲೆಯ ಮೂಲಕ ಪ್ರಯತ್ನ ಮಾಡುತ್ತಿದ್ದೇವೆ. ಆದರೆ ಈ ಸರ್ಕಾರ ಗೋವಿಗೆ ಅನ್ಯಾಯ ಮಾಡಿದೆ. ಗೋವಿನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಈ ಗೋವುಗಳನ್ನೇ ತೀವ್ರ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ನನ್ನ ಬಳಿ ಗೋ ಶಾಲೆ ನಿರ್ಮಾಣಕ್ಕೆ ನನ್ನದೇ ಆದ 2 ಎಕರೆ ಜಮೀನು ಇದೆ. ಗೋ ಶಾಲೆ ನಿರ್ಮಾಣಕ್ಕೆ ಅನುಮೋದನೆ ನೀಡಲು ಜಿಲ್ಲಾಧಿಕಾರಿ ಅವರಿಗೆ ಮನವಿ ಮಾಡಿದ್ದೇವೆ. ಶಾಶ್ವತ ಗೋ ಶಾಲೆ ನಿರ್ಮಾಣಕ್ಕಾಗಿ ರಾಮ ಸೇನೆ ಮುಂದೆ ಬಂದಿದೆ” ಎಂದು ತಿಳಿಸಿದ್ದು, ”ಗೋ ಪೂಜೆಗೆ ಶಾಸಕ ವೇದವ್ಯಾಸ್, ಡಾ.ಭಾರತ್ ಶೆಟ್ಟಿ, ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಕಪಿಲ ಗೋಶಾಲೆಗೆ ಭೇಟಿ ನೀಡಿದ್ದರು. ಆದರೆ ಗೋ ಶಾಲೆ ಕೆಡವಿದ ಬಳಿಕ ಇವರ್‍ಯಾರೂ ಭೇಟಿ ನೀಡಿಲ್ಲ” ಎಂದು ದೂರಿದರು.

ಇದನ್ನೂ ಓದಿ : ‘ಗ್ರಾಮ ಉಜಾಲಾ ಯೋಜನೆ’ : 10 ರೂ.ಗೆ ಎಲ್.ಇ.ಡಿ. ಬಲ್ಬ್ ಯೋಜನೆಗೆ ಚಾಲನೆ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

14 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

14 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

14 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

15 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

15 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

17 hours ago