ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸಹಿತ ಸಹಿತ ಕರಾವಳಿ ಕರ್ನಾಟಕ ಭಾಗದಲ್ಲಿ ಮುಂದಿನ 48 ಗಂಟೆಗಳಲ್ಲಿ ಬಲವಾದ ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.
ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ತೀವ್ರ ಬಿಸಿಲಿನ ವಾತಾವರಣವಿದೆ. ಬೇಸಿಗೆಯ ಆರಂಭದಲ್ಲಿಯೇ ವಾಡಿಕೆಗಿಂತ ಹೆಚ್ಚಿನ ತಾಪಮಾನ ದಾಖಲಾಗುತ್ತಿದೆ. ಮಾರ್ಚ್ ಮೂರನೇ ವಾರದವರೆಗೆ ಗರಿಷ್ಟ ಉಷ್ಣಾಂಶ ಮುಂದುವರಿಯುವ ಸಾಧ್ಯತೆ ಇದೆ . ಅಲ್ಲದೆ ಈ ಅವಧಿಯಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಮೀರುವ ಸಾಧ್ಯತೆಗಳಿದ್ದು, ಜನರ ಆರೋಗ್ಯದ ಮೇಲೂ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ವಿಶೇಷ ನಿಗಾ ವಹಿಸಲು ಸೂಚನೆ ನೀಡಲಾಗಿದೆ.
ಮುಂದಿನ 48 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯ ಕೆಲವು ಕಡೆಗಳಲ್ಲಿ ಬಿಸಿಗಾಳಿಯ ವಾತಾವರಣ ಕಂಡು ಬರಲಿದೆ. ಹಾಗಾಗಿ ಮುನ್ನೆಚ್ಚರಿಕೆ ವಹಿಸುವಂತೆ ಎಂದು ಹವಾಮಾನ ಇಲಾಖೆಯು ಹೊರಡಿಸಿರುವ ಪ್ರಕಟನೆಯಲ್ಲಿ ತಿಳಿಸಿದೆ.
ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ತೀವ್ರ ಬಿಸಿಲಿನ ವಾತಾವರಣವಿದೆ. ಬಲವಾದ ಗಾಳಿಯೂ ಬೀಸುತ್ತಿದೆ. ಇದರಿಂದ ತಾಪಮಾನದಲ್ಲಿ ಏರಿಕೆಯೂ ಆಗಿದೆ. ತಾಪಮಾನದಲ್ಲಿ ನಿರಂತರ ಏರಿಕೆಯ ಪರಿಣಾಮ ಬಿಸಿಗಾಳಿ ಸೃಷ್ಟಿಯಾಗಲಿದೆ. ಹಾಗಾಗಿ ಹಿಟ್ಸ್ಟ್ರೋಕ್, ಕಣ್ಣಿನ ಉರಿ, ತಲೆಸುತ್ತು ಸಹಿತ ನಾನಾ ಆರೋಗ್ಯ ಸಮಸ್ಯೆಗಳು ತಲೆದೋರುವ ಅಪಾಯವಿದೆ ಎಂದು ತಿಳಿಸಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…