Featured

ಮಂಗಳೂರು : ಕರಾವಳಿಯಲ್ಲಿ ಕಾಂಗ್ರೆಸ್ ಮತ್ತೆ ಉದಯವಾಗುವುದು ನಿಶ್ಚಿತ : ಮಧು ಬಂಗಾರಪ್ಪ – Vishwanews24

ಮಂಗಳೂರು : ಕರಾವಳಿಯಲ್ಲಿ ಕಾಂಗ್ರೆಸ್ ಮತ್ತೆ ಉದಯವಾಗುವುದು ನಿಶ್ಚಿತ : ಮಧು ಬಂಗಾರಪ್ಪ

ಮಂಗಳೂರು: ‘ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಬಿಜೆಪಿಗೆ ಸೇರಿದ್ದ ಕಾರಣಕ್ಕೆ ಕರಾವಳಿಯಲ್ಲಿ ಈ ಪಕ್ಷಕ್ಕೆ ಬಲ ಬಂದಿತ್ತು. ಆದರೆ, ಬಿಜೆಪಿ ಸಂಗ ಮಾಡಿದ ಜನರಿಗೆ ಈಗ ಸತ್ಯದ ಅರಿವಾಗುತ್ತಿದೆ. ಹೀಗಾಗಿ, ಕರಾವಳಿಯಲ್ಲಿ ಕಾಂಗ್ರೆಸ್ ಮತ್ತೆ ಉದಯವಾಗುವುದು ನಿಶ್ಚಿತ’ ಎಂದು ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ ಹೇಳಿದರು.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದಿವಂಗತ ಎಸ್. ಬಂಗಾರಪ್ಪ ಅವರು 2004ರಲ್ಲಿ ಬಿಜೆಪಿ ಸೇರಿದ್ದರು. ಆಗ ಕರಾವಳಿಯ ಬಿಲ್ಲವರು, ಬಂಗಾರಪ್ಪ ಅಭಿಮಾನಿಗಳು ಬಿಜೆಪಿಗೆ ಸೇರಿದ್ದರು. ಆ ಪಕ್ಷದ ಸಿದ್ಧಾಂತ ಒಪ್ಪಿಗೆಯಾಗದೆ, ಕೇವಲ ಒಂಬತ್ತು ತಿಂಗಳಲ್ಲಿ ಅವರು ಪಕ್ಷದಿಂದ ಹೊರಬಂದಿದ್ದರು. ಆದರೆ, ಅವರು ಕಾಂಗ್ರೆಸ್‌ಗೆ ಮರಳದೆ, ಸಮಾಜವಾದಿ ಪಕ್ಷ ಕಟ್ಟಿದ್ದರು. ಹೀಗಾಗಿ, ಅನೇಕರು ಪುನಃ ಕಾಂಗ್ರೆಸ್‌ಗೆ ಬಂದಿರಲಿಲ್ಲ’ ಎಂದರು.

‘ರೈತರಿಗೆ ಉಚಿತ ವಿದ್ಯುತ್, ಅಕ್ರಮ–ಸಕ್ರಮ, ಬಗರ್‌ಹುಕುಂ, ಆಶ್ರಯಮನೆ ಸೇರಿದಂತೆ ಬಂಗಾರಪ್ಪ ಹಾಗೂ ಕಾಂಗ್ರೆಸ್‌ ಪಕ್ಷ ಅನುಷ್ಠಾನಗೊಳಿಸಿದ್ದ ಅನೇಕ ಜನಪರ ಕಾರ್ಯಕ್ರಮಗಳನ್ನು ಜನರು ಈಗಲೂ ಸ್ಮರಿಸಿಕೊಳ್ಳುತ್ತಾರೆ. ಬಿಜೆಪಿ ಆಡಳಿತದಲ್ಲಿ ಜನರ ಸಮಸ್ಯೆಗೆ ಸ್ಪಂದಿಸುವವರು ಇಲ್ಲ. ಈಗಿನ ಭಾರತೀಯ ಜನತಾ ಪಾರ್ಟಿಯು ವ್ಯಾವಹಾರಿಕವಾಗಿದ್ದು, ಬ್ರಿಟಿಷ್ ಜನತಾ ಪಾರ್ಟಿ ಆಗಿ ಪರಿವರ್ತನೆಯಾಗಿದೆ. ಇಂತಹ ಪಕ್ಷವು ದೇಶದ ಅಭಿವೃದ್ಧಿಗೆ ಮಾರಕವಾಗಿದೆ. ಬಿಜೆಪಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಯತ್ನಿಸುತ್ತಿದೆ, ಅಂಬೇಡ್ಕರ್ ಚಿಂತನೆಯನ್ನೇ ಬದಲಾಯಿಸಲು ಹೊರಟಿದೆ’ ಎಂದು ಆರೋಪಿಸಿದರು.

‘ಕರಾವಳಿ ಕೋಮು ಸಂಘರ್ಷ, ಶಿವಮೊಗ್ಗ ಜಿಲ್ಲೆಗೂ ವ್ಯಾಪಿಸುತ್ತಿದೆ. ಬಿಜೆಪಿಯ ಅಂಗ ಸಂಸ್ಥೆಯ ಕಾರ್ಯಕರ್ತರು ನಾಟಕವೊಂದರ ಪ್ರದರ್ಶನಕ್ಕೆ ಅಡ್ಡಿಪಡಿಸಿದ್ದಾರೆ. ಇಂತಹ ಕೋಮು ಸಂಘರ್ಷಗಳಿಗೆ ನಮ್ಮ ಜಿಲ್ಲೆಯಲ್ಲಿ ಅವಕಾಶ ಕೊಡುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು.

‘ಕಾಂಗ್ರೆಸ್‌ ಪಕ್ಷದ ಸದಸ್ಯತ್ವ ಅಭಿಯಾನದ ವೇಳೆ ಪ್ರತಿ ಮನೆಗೆ ಭೇಟಿ ನೀಡಿ, ಜನರನ್ನು ನೇರವಾಗಿ ತಲುಪುತ್ತಿದ್ದೇವೆ. ಇದು ಚುನಾವಣೆಯ ವೇಳೆ ಪಕ್ಷದ ಮೇಲೆ ಪೂರಕವಾಗಿ ಪರಿಣಾಮ ಬೀರುವ ವಿಶ್ವಾಸವಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್‌ಕುಮಾರ್, ಮಾಜಿ ಶಾಸಕ ಜೆ.ಆರ್‌.ಲೋಬೊ, ಕಾಂಗ್ರೆಸ್‌ ಪ್ರಮುಖರಾದ ಶಶಿಧರ ಹೆಗ್ದೆ, ಟಿ.ಕೆ. ಸುಧೀರ್, ಪ್ರಕಾಶ ಸಾಲ್ಯಾನ್, ಶುಭೋದಯ ಆಳ್ವ, ಪಕ್ಷದ ಜಿಲ್ಲಾ ಚುನಾವಣಾಧಿಕಾರಿ ಜಯಚಂದ್ರನ್ ಇದ್ದರು.

Vishwa News 24

Recent Posts

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

2 hours ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

4 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

4 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

5 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

5 hours ago

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ -vishwanews24

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…

5 hours ago