Featured

ಮಂಗಳೂರು : ಕರಾವಳಿಯಲ್ಲಿ ಕಾಂಗ್ರೆಸ್ ಮತ್ತೆ ಉದಯವಾಗುವುದು ನಿಶ್ಚಿತ : ಮಧು ಬಂಗಾರಪ್ಪ – Vishwanews24

ಮಂಗಳೂರು : ಕರಾವಳಿಯಲ್ಲಿ ಕಾಂಗ್ರೆಸ್ ಮತ್ತೆ ಉದಯವಾಗುವುದು ನಿಶ್ಚಿತ : ಮಧು ಬಂಗಾರಪ್ಪ

ಮಂಗಳೂರು: ‘ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಬಿಜೆಪಿಗೆ ಸೇರಿದ್ದ ಕಾರಣಕ್ಕೆ ಕರಾವಳಿಯಲ್ಲಿ ಈ ಪಕ್ಷಕ್ಕೆ ಬಲ ಬಂದಿತ್ತು. ಆದರೆ, ಬಿಜೆಪಿ ಸಂಗ ಮಾಡಿದ ಜನರಿಗೆ ಈಗ ಸತ್ಯದ ಅರಿವಾಗುತ್ತಿದೆ. ಹೀಗಾಗಿ, ಕರಾವಳಿಯಲ್ಲಿ ಕಾಂಗ್ರೆಸ್ ಮತ್ತೆ ಉದಯವಾಗುವುದು ನಿಶ್ಚಿತ’ ಎಂದು ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ ಹೇಳಿದರು.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದಿವಂಗತ ಎಸ್. ಬಂಗಾರಪ್ಪ ಅವರು 2004ರಲ್ಲಿ ಬಿಜೆಪಿ ಸೇರಿದ್ದರು. ಆಗ ಕರಾವಳಿಯ ಬಿಲ್ಲವರು, ಬಂಗಾರಪ್ಪ ಅಭಿಮಾನಿಗಳು ಬಿಜೆಪಿಗೆ ಸೇರಿದ್ದರು. ಆ ಪಕ್ಷದ ಸಿದ್ಧಾಂತ ಒಪ್ಪಿಗೆಯಾಗದೆ, ಕೇವಲ ಒಂಬತ್ತು ತಿಂಗಳಲ್ಲಿ ಅವರು ಪಕ್ಷದಿಂದ ಹೊರಬಂದಿದ್ದರು. ಆದರೆ, ಅವರು ಕಾಂಗ್ರೆಸ್‌ಗೆ ಮರಳದೆ, ಸಮಾಜವಾದಿ ಪಕ್ಷ ಕಟ್ಟಿದ್ದರು. ಹೀಗಾಗಿ, ಅನೇಕರು ಪುನಃ ಕಾಂಗ್ರೆಸ್‌ಗೆ ಬಂದಿರಲಿಲ್ಲ’ ಎಂದರು.

‘ರೈತರಿಗೆ ಉಚಿತ ವಿದ್ಯುತ್, ಅಕ್ರಮ–ಸಕ್ರಮ, ಬಗರ್‌ಹುಕುಂ, ಆಶ್ರಯಮನೆ ಸೇರಿದಂತೆ ಬಂಗಾರಪ್ಪ ಹಾಗೂ ಕಾಂಗ್ರೆಸ್‌ ಪಕ್ಷ ಅನುಷ್ಠಾನಗೊಳಿಸಿದ್ದ ಅನೇಕ ಜನಪರ ಕಾರ್ಯಕ್ರಮಗಳನ್ನು ಜನರು ಈಗಲೂ ಸ್ಮರಿಸಿಕೊಳ್ಳುತ್ತಾರೆ. ಬಿಜೆಪಿ ಆಡಳಿತದಲ್ಲಿ ಜನರ ಸಮಸ್ಯೆಗೆ ಸ್ಪಂದಿಸುವವರು ಇಲ್ಲ. ಈಗಿನ ಭಾರತೀಯ ಜನತಾ ಪಾರ್ಟಿಯು ವ್ಯಾವಹಾರಿಕವಾಗಿದ್ದು, ಬ್ರಿಟಿಷ್ ಜನತಾ ಪಾರ್ಟಿ ಆಗಿ ಪರಿವರ್ತನೆಯಾಗಿದೆ. ಇಂತಹ ಪಕ್ಷವು ದೇಶದ ಅಭಿವೃದ್ಧಿಗೆ ಮಾರಕವಾಗಿದೆ. ಬಿಜೆಪಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಯತ್ನಿಸುತ್ತಿದೆ, ಅಂಬೇಡ್ಕರ್ ಚಿಂತನೆಯನ್ನೇ ಬದಲಾಯಿಸಲು ಹೊರಟಿದೆ’ ಎಂದು ಆರೋಪಿಸಿದರು.

‘ಕರಾವಳಿ ಕೋಮು ಸಂಘರ್ಷ, ಶಿವಮೊಗ್ಗ ಜಿಲ್ಲೆಗೂ ವ್ಯಾಪಿಸುತ್ತಿದೆ. ಬಿಜೆಪಿಯ ಅಂಗ ಸಂಸ್ಥೆಯ ಕಾರ್ಯಕರ್ತರು ನಾಟಕವೊಂದರ ಪ್ರದರ್ಶನಕ್ಕೆ ಅಡ್ಡಿಪಡಿಸಿದ್ದಾರೆ. ಇಂತಹ ಕೋಮು ಸಂಘರ್ಷಗಳಿಗೆ ನಮ್ಮ ಜಿಲ್ಲೆಯಲ್ಲಿ ಅವಕಾಶ ಕೊಡುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು.

‘ಕಾಂಗ್ರೆಸ್‌ ಪಕ್ಷದ ಸದಸ್ಯತ್ವ ಅಭಿಯಾನದ ವೇಳೆ ಪ್ರತಿ ಮನೆಗೆ ಭೇಟಿ ನೀಡಿ, ಜನರನ್ನು ನೇರವಾಗಿ ತಲುಪುತ್ತಿದ್ದೇವೆ. ಇದು ಚುನಾವಣೆಯ ವೇಳೆ ಪಕ್ಷದ ಮೇಲೆ ಪೂರಕವಾಗಿ ಪರಿಣಾಮ ಬೀರುವ ವಿಶ್ವಾಸವಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್‌ಕುಮಾರ್, ಮಾಜಿ ಶಾಸಕ ಜೆ.ಆರ್‌.ಲೋಬೊ, ಕಾಂಗ್ರೆಸ್‌ ಪ್ರಮುಖರಾದ ಶಶಿಧರ ಹೆಗ್ದೆ, ಟಿ.ಕೆ. ಸುಧೀರ್, ಪ್ರಕಾಶ ಸಾಲ್ಯಾನ್, ಶುಭೋದಯ ಆಳ್ವ, ಪಕ್ಷದ ಜಿಲ್ಲಾ ಚುನಾವಣಾಧಿಕಾರಿ ಜಯಚಂದ್ರನ್ ಇದ್ದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

13 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

15 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

15 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

15 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

15 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago