ಮಂಗಳೂರು : ಬಂಗಾಲ ಕೊಲ್ಲಿಯಲ್ಲಿ ನಿಮ್ನ ಒತ್ತಡದ ಲಕ್ಷಣ ಕಾಣಿಸಿದ್ದು, ಇದರಿಂದಾಗಿ ನ. 4ರ ಬಳಿಕ ಕರಾವಳಿಯ ಕೆಲವೆಡೆ ಒಂದೆರಡು ದಿನ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಪ್ರಕಟನೆ ತಿಳಿಸಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ನ. 5 ರಿಂದ 7ರ ವರೆಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ರವಿವಾರ ಮಳೆ ಕ್ಷೀಣಗೊಂಡಿತ್ತು.
ರವಿವಾರ ಮೋಡ, ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು. ಸೆಕೆಯ ತೀವ್ರತೆಯೂ ಇತ್ತು. ಉಡುಪಿ ಜಿಲ್ಲೆಯ ಕೆಲವೆಡೆ ಮೋಡ ಮತ್ತು ಬಿಸಿಲಿನ ವಾತಾವರಣದ ನಡುವೆ ತುಂತುರು ಮಳೆಯಾಗಿದೆ. ಎರಡು ದಿನಗಳಿಂದ ಉತ್ತಮ ಬಿಸಿಲು ಇದ್ದುದರಿಂದ ಭತ್ತದ ಕಟಾವು ಭರದಿಂದ ಸಾಗುತ್ತಿದೆ. ಮತ್ತೆ ಮಳೆ ಆರಂಭವಾದರೆ ಇದಕ್ಕೆ ಸಮಸ್ಯೆಯಾಗಲಿದೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…