ಮಂಗಳೂರು (Vishwanews24): ಕೆಎಸ್ಆರ್ ಟಿಸಿ ನೌಕರರು ಆರನೇ ವೇತನ ಆಯೋಗದ ಶಿಫಾರಸ್ಸು ಅನುಷ್ಠಾನಕ್ಕೆ ಒತ್ತಾಯಿಸಿ ನಡೆಸುತ್ತಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಖಾಸಗಿ ಮತ್ತು ಸಿಟಿ ಬಸ್ ಗಳೂ ಎಂದಿನಿಂದ ಇಂದೂ ಕೂಡಾ ಕಾರ್ಯಾಚರಣೆ ನಡೆಸಿದ್ದು ಹೀಗಾಗಿ ಕರಾವಳಿಯಲ್ಲಿ ಪ್ರಯಾಣಿಕರಿಗೆ ಮುಷ್ಕರದ ಬಿಸಿ ತಟ್ಟಿಲ್ಲ.
ಈ ನಡುವೆ ಮಂಗಳೂರು ಕೆಎಸ್ಆರ್ ಟಿಸಿ ವಿಭಾಗದಲ್ಲಿ ಏ.೮ ರ ಗುರುವಾರದಂದು ಮುಷ್ಕರ ಕೊಂಚ ನೀರಸವಾಗಿದೆ. ಗುರುವಾರ ಬೆಳಗ್ಗೆ ಧರ್ಮಸ್ಥಳ, ಮಡಿಕೇರಿ, ಬೆಂಗಳೂರು, ಮೈಸೂರು ಸೇರಿದಂತೆ ಕಾಸರಗೋಡಿಗೆ ಬಸ್ ಗಳ ಸಂಚಾರ ನಿಧಾನವಾಗಿ ಪ್ರಾರಂಭವಾಗಿದೆ.
ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷ ತಮ್ಮ ಬೆಂಬಲಿಗರ ಜೊತೆ ಕಾಂಗ್ರೆಸ್ ಪಕ್ಷ ಸೇರ್ಪಡೆ -Vishwanews24
ಎರಡನೇ ದಿನ ಈವರೆಗೆ ವಿವಿಧ ರೂಟ್ ಗಳಲ್ಲಿ ಸುಮಾರು 20ಕ್ಕೂ ಅಧಿಕ ಬಸ್ ಗಳ ಓಡಾಟ ನಡೆಸಿದೆ. ಹೀಗಾಗಿ ಸರ್ಕಾರಿ ಬಸ್ ನಿಲ್ದಾಣದತ್ತ ನಿಧಾನವಾಗಿ ಪ್ರಯಾಣಿಕರು ಆಗಮಿಸತೊಡಗಿದ್ದಾರೆ.
ನಿನ್ನೆಯೇ ಬಹುತೇಕ ಕೆಎಸ್ಆರ್ ಟಿಸಿ ನೌಕರರು ಕರ್ತವ್ಯಕ್ಕೆ ಹಾಜರಾಗದಿದ್ದು, ಇಂದೂ ಕೂಡಾ ಪರಿಸ್ಥಿತಿ ಅದೇ ರೀತಿ ಮುಂದುವರಿದಿದೆ. ಇಂದು ಬೆಳಗ್ಗೆಯಿಂದ ಬೆರಳೆಣಿಕೆಯಷ್ಟು ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದು, ಈ ಹಿನ್ನೆಲೆಯಲ್ಲಿ ದೂರ ಪ್ರಯಾಣದ ಕೆಲವೊಂದು ಬಸ್ ಗಳು ಸಂಚಾರ ನಡೆಸಿವೆ. ಆದರೆ ನಗರದೊಳಗೆ ಬಸ್ ಸಂಚಾರ ಮಾಡುವ ಪ್ರಯಾಣಿಕರಿಗೆ ತೊಂದರೆಯಾಗಿಲ್ಲದಿದ್ದರೂ, ದೂರದೂರಿಗೆ ಪ್ರಯಾಣಿಸುವ ಪ್ರಯಾಣಿಕರು ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ತೊಂದರೆ ಅನುಭವಿಸಿದ್ದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…