ಮಂಗಳೂರು (Vishwanews24): ಕೆಎಸ್ಆರ್ ಟಿಸಿ ನೌಕರರು ಆರನೇ ವೇತನ ಆಯೋಗದ ಶಿಫಾರಸ್ಸು ಅನುಷ್ಠಾನಕ್ಕೆ ಒತ್ತಾಯಿಸಿ ನಡೆಸುತ್ತಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಖಾಸಗಿ ಮತ್ತು ಸಿಟಿ ಬಸ್ ಗಳೂ ಎಂದಿನಿಂದ ಇಂದೂ ಕೂಡಾ ಕಾರ್ಯಾಚರಣೆ ನಡೆಸಿದ್ದು ಹೀಗಾಗಿ ಕರಾವಳಿಯಲ್ಲಿ ಪ್ರಯಾಣಿಕರಿಗೆ ಮುಷ್ಕರದ ಬಿಸಿ ತಟ್ಟಿಲ್ಲ.
ಈ ನಡುವೆ ಮಂಗಳೂರು ಕೆಎಸ್ಆರ್ ಟಿಸಿ ವಿಭಾಗದಲ್ಲಿ ಏ.೮ ರ ಗುರುವಾರದಂದು ಮುಷ್ಕರ ಕೊಂಚ ನೀರಸವಾಗಿದೆ. ಗುರುವಾರ ಬೆಳಗ್ಗೆ ಧರ್ಮಸ್ಥಳ, ಮಡಿಕೇರಿ, ಬೆಂಗಳೂರು, ಮೈಸೂರು ಸೇರಿದಂತೆ ಕಾಸರಗೋಡಿಗೆ ಬಸ್ ಗಳ ಸಂಚಾರ ನಿಧಾನವಾಗಿ ಪ್ರಾರಂಭವಾಗಿದೆ.
ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷ ತಮ್ಮ ಬೆಂಬಲಿಗರ ಜೊತೆ ಕಾಂಗ್ರೆಸ್ ಪಕ್ಷ ಸೇರ್ಪಡೆ -Vishwanews24
ಎರಡನೇ ದಿನ ಈವರೆಗೆ ವಿವಿಧ ರೂಟ್ ಗಳಲ್ಲಿ ಸುಮಾರು 20ಕ್ಕೂ ಅಧಿಕ ಬಸ್ ಗಳ ಓಡಾಟ ನಡೆಸಿದೆ. ಹೀಗಾಗಿ ಸರ್ಕಾರಿ ಬಸ್ ನಿಲ್ದಾಣದತ್ತ ನಿಧಾನವಾಗಿ ಪ್ರಯಾಣಿಕರು ಆಗಮಿಸತೊಡಗಿದ್ದಾರೆ.
ನಿನ್ನೆಯೇ ಬಹುತೇಕ ಕೆಎಸ್ಆರ್ ಟಿಸಿ ನೌಕರರು ಕರ್ತವ್ಯಕ್ಕೆ ಹಾಜರಾಗದಿದ್ದು, ಇಂದೂ ಕೂಡಾ ಪರಿಸ್ಥಿತಿ ಅದೇ ರೀತಿ ಮುಂದುವರಿದಿದೆ. ಇಂದು ಬೆಳಗ್ಗೆಯಿಂದ ಬೆರಳೆಣಿಕೆಯಷ್ಟು ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದು, ಈ ಹಿನ್ನೆಲೆಯಲ್ಲಿ ದೂರ ಪ್ರಯಾಣದ ಕೆಲವೊಂದು ಬಸ್ ಗಳು ಸಂಚಾರ ನಡೆಸಿವೆ. ಆದರೆ ನಗರದೊಳಗೆ ಬಸ್ ಸಂಚಾರ ಮಾಡುವ ಪ್ರಯಾಣಿಕರಿಗೆ ತೊಂದರೆಯಾಗಿಲ್ಲದಿದ್ದರೂ, ದೂರದೂರಿಗೆ ಪ್ರಯಾಣಿಸುವ ಪ್ರಯಾಣಿಕರು ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ತೊಂದರೆ ಅನುಭವಿಸಿದ್ದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…