Featured

ಮಂಗಳೂರು: ಕರಾವಳಿಯಲ್ಲಿ ಭಾರಿ ಮಳೆ ; ಕೃತಕ ಪ್ರವಾಹ , ತಗ್ಗು ಪ್ರದೇಶ ಮುಳುಗಡೆ -Vishwanews24

ಮಂಗಳೂರು: ಕರಾವಳಿಯಲ್ಲಿ ಭಾರಿ ಮಳೆ ; ಕೃತಕ ಪ್ರವಾಹ , ತಗ್ಗು ಪ್ರದೇಶ ಮುಳುಗಡೆ -Vishwanews24

ಮಂಗಳೂರು,: ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಕಡಿಮೆಯಾಗಿದ್ದ ಮಳೆಯು, ಸೆ.10ರ ಗುರುವಾರ ಸಂಜೆ ಆರಂಭಗೊಂಡಿದ್ದು, ಶುಕ್ರವಾರವೂ ಮಳೆ ಮುಂದುವರೆದಿದೆ.

ನಗರದಲ್ಲಿ ಬುಧವಾರ ರಾತ್ರಿಯಿಂದ ಆರಂಭವಾದ ಮಳೆಯಿಂದ ಕೃತಕ ಪ್ರವಾಹ ಉಂಟಾಗಿದ್ದು, ತಗ್ಗು ಪ್ರದೇಶಗಳು ಮುಳುಗಡೆಯಾಗಿವೆ. ಕೊಟ್ಟಾರ, ಅಕೆ, ಕೊಟ್ಟಾರ ಚೌಕಿ, ನಂತೂರು, ಪಂಪ್‌ವೆಲ್‌‌, ಪಡೀಲ್‌‌‌, ಬರ್ಕೆ ಹಾಗೂ ಇತರ ಪ್ರದೇಶಗಳಲ್ಲಿ ಹಲವಾರು ಮನೆಗಳಿಗೆ ಹಾಗೂ ಅಂಗಡಿಗಳಿಗೆ ಮಳೆ ನೀರು ನುಗ್ಗಿದೆ. ಅಲ್ಲದೇ, ವಾಹನ, ಜನರ ಸಂಚಾರಕ್ಕೂ ತೊಂದರೆಯಾಗಿದೆ.

ಪುತ್ತೂರು, ಬಂಟ್ವಾಳ, ಸುಳ್ಯ, ಬೆಳ್ತಂಗಡಿ, ಮೂಡುಬಿದ್ರೆ, ಕಡಬ ಮುಂತಾದ ಸ್ಥಳಗಳಲ್ಲಿ ಗುರುವಾರ ಮಳೆಯ ತೀವ್ರತೆ ಕಡಿಮೆಯಾಗಿತ್ತು.

ರಾಜ್ಯಾದ್ಯಂತ ಮುಂದಿನ 48 ಗಂಟೆಗಳ ಅವಧಿಯಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ, ಕರಾವಳಿಯಲ್ಲಿ ಸೆಪ್ಟೆಂಬರ್‌‌ 11 ಹಾಗೂ 12ರಂದು ರೆಡ್‌ ಅಲರ್ಟ್ ಘೋಷಿಸಲಾಗಿದ್ದು, ಸೆಪ್ಟೆಂಬರ್‌ 13ರವರೆಗೆ ಎಚ್ಚರಿಕೆ ನೀಡಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಸೆಪ್ಟೆಂಬರ್‌ 11,12 ಹಾಗೂ 13ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

12 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

22 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

40 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

44 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

52 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago