ಮಂಗಳೂರು : ಕರಾವಳಿಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು, ಅನೇಕ ಕಡೆ ಕೃಷಿಗೆ ಹಾನಿಯಾಗಿದೆ. ಹವಾಮಾನ ಇಲಾಖೆಯು ಇಂದು ರಾಜ್ಯದ ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.
ಬೆಳ್ತಂಗಡಿ, ಸುಳ್ಯ ಮತ್ತು ಪುತ್ತೂರು ತಾಲೂಕುಗಳಲ್ಲಿ ಬೆಳಗ್ಗಿನಿಂದಲೇ ಮಳೆ ಆರಂಭವಾಗಿದ್ದು, ದಿನವಿಡೀ ಮಳೆ ಬಂದಿದೆ. ಒಮ್ಮೆ ಧಾರಾಕಾರ ಹಾಗೂ ಕೆಲವೊಮ್ಮೆ ಜಿಟಿ ಜಿಟಿ ಮಳೆ ಸುರಿದಿದೆ. ಇದರಿಂದ ಸಾಮಾನ್ಯ ಜನ ಜೀವನ ಅಸ್ತವ್ಯಸ್ತಗೊಂಡಿತ್ತು.
ಇನ್ನು ಸುಳ್ಯ, ಸುಬ್ರಹ್ಮಣ್ಯ ಪರಿಸರದಲ್ಲೂ ಭಾರೀ ಮಳೆಯಾಗಿದ್ದು, ಇತ್ತ ಸಂಪಾಜೆ ಭಾಗದಲ್ಲಿ ಸುರಿದ ಭಾರೀ ಮಳೆಗೆ ಗೂನಡ್ಕ ದರ್ಕಸ್ ರಸ್ತೆ ತಿರುಗುವಲ್ಲಿ ರಾಷ್ಟ್ರೀಯ ಹೆದ್ದಾರಿ ಮೋರಿ ಬ್ಲಾಕ್ ಆಗಿದೆ.
ಅನೇಕ ಕಡೆಗಳಲ್ಲಿ ಸಿಡಿಲು ಮಿಂಚಿನಿಂದ ವಿದ್ಯುತ್ ಪರಿಕರಗಳಿಗೆ ಹಾನಿಯಾಗಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಅಳದಂಗಡಿ ನಾವರದಲ್ಲಿ ವಿದ್ಯುತ್ ಪರಿವರ್ತಕಕ್ಕೆ ಹಾನಿಯಾಗಿದ್ದು, 1.15 ಲಕ್ಷ ರೂ.ಗೂ ಅಧಿಕ ಹಾನಿಯಾಗಿದೆ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಅಕಾಲಿಕ ಮಳೆಯಿಂದಾಗಿ ದ.ಕ ಜಿಲ್ಲೆಯ ಗ್ರಾಮಾಂತರ ಭಾಗಗಳಲ್ಲಿ ಭತ್ತದ ಕೃಷಿಗೆ ಹಾನಿಯಾಗಿದ್ದು, ಗದ್ದೆಗಳಲ್ಲಿ ನೀರು ನಿಂತು ಕಟಾವಿಗೆ ಸಿದ್ದವಾಗಿದ್ದ ಭತ್ತದ ಪೈರು ಹಾಳಾಗಿದೆ. ತರಕಾರಿ ಕೃಷಿಗೂ ಹಾನಿ ಉಂಟಾಗಿದೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…