Featured

ಮಂಗಳೂರು : ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ಕರಾವಳಿಯ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ – vishwanews24

ಮಂಗಳೂರು : ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ಕರಾವಳಿಯ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ

ಮಂಗಳೂರು : ಈ ಬಾರಿಯ ಕರಾವಳಿ ಉತ್ಸವದ ಅಂಗವಾಗಿ ಮಂಗಳೂರಿನಲ್ಲಿ ಹೆಲಿಕಾಪ್ಟರ್ ಮೂಲಕ ಕರಾವಳಿಯ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಒಬ್ಬರಿಗೆ ತಲಾ ರೂಪಾಯಿ 4500.00 ವೆಚ್ಚದಲ್ಲಿ ಮಂಗಳೂರು ಪ್ರದೇಶವನ್ನು ಆಕಾಶ ಮಾರ್ಗದಲ್ಲಿ ಹೆಲಿಕಾಪ್ಟರ್ ಮೂಲಕ ಸುತ್ತ ಹಾಕಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರಿನ ತುಂಬಿ ಹೆಲಿಟೂರಿಸಂ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಹೆಲಿಕಾಪ್ಟರ್ ಮೂಲಕ ಡಿ.21ರಿಂದ 31ರವರೆಗೆ ಮೇರಿಹಿಲ್ ಹೆಲಿಪ್ಯಾಡ್ ಮೂಲಕ ಒಂದು ಬಾರಿ ಆರು ಮಂದಿ ಪ್ರಯಾಣಿಸಲು ಸಾಧ್ಯವಿರುವ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಬಹುದಾಗಿದೆ. ಈ ಹೆಲಿಕಾಪ್ಟರ್ ಮಂಗಳೂರು ಆಸುಪಾಸಿನಲ್ಲಿ ಸುಮಾರು 5ರಿಂದ 7ನಿಮಿಷಗಳ ಒಳಗೆ ಆಕಾಶದಲ್ಲಿ ಒಂದು ಪ್ರದಕ್ಷಿಣೆ ಬಂದು ಮೇರಿ ಹಿಲ್ ಗೆ ಮರಳುತ್ತದೆ.

ಮಂಗಳೂರನ್ನು ಪಕ್ಷಿ ನೋಟದಲ್ಲಿ ನೋಡುವ ಅವಕಾಶ

ಈ ಬಾರಿಯ ಕರಾವಳಿ ಉತ್ಸವದ ವಿಶೇಷ ಆಕರ್ಷಣೆಯಾಗಿ ಮತ್ತು ಹೆಲಿಟೂರಿಸಂ ಅನ್ನು ಮಂಗಳೂರು ಜನತೆಗೆ ಪರಿಚಯಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಮೇರಿ ಹಿಲ್ ಹೆಲಿಪ್ಯಾಡ್ ನಿಂದ ಇಂದು ಸಂಜೆ ಪ್ರಾಯೋಗಿಕವಾಗಿ ಪತ್ರಕರ್ತರ ಒಂದು ತಂಡ ಕ್ಯಾಪ್ಟನ್ ವಿ.ಎಸ್ .ಮಲಿಕ್ ರ ನೇತೃತ್ವದಲ್ಲಿ ತುಂಬಿ ಹೆಲಿಟೂರಿಸಂ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಹೆಲಿಕಾಪ್ಟರ್ ಮೂಲಕ ಒಂದು ಸುತ್ತು ನಗರ ಪ್ರದಕ್ಷಿಣೆ ಮಾಡಿದೆ.

ಮೂರು ನಿಮಿಷದಲ್ಲಿ ಮೇರಿ ಹಿಲ್ ಪಣಂಬೂರು, ಮಹಾನಗರ ಪಾಲಿಕೆ, ಪಂಪ್ ವೆಲ್ ನೇತ್ರಾವತಿ ನದಿ ಕಿನಾರೆಯ ಮೂಲಕ ಮರಳಿದೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

16 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

17 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

18 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

19 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

19 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

19 hours ago